9:39 PM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಸುಳ್ಯ: ಬಿರುಕು ಬಿಟ್ಟ ಗುಳಿಕ್ಕಾನ ಜನವಸತಿ ಪ್ರದೇಶಕ್ಕೆ ತಜ್ಞರ ತಂಡ ಭೇಟಿ; ಪರಿಶೀಲನೆ

05/07/2022, 08:59

ಸಾಂದರ್ಭಿಕ ಚಿತ್ರ
ಸುಳ್ಯ(reporterkarnataka.com):
ಬಿರುಕು ಬಿಟ್ಟು ಜನರ ಆತಂಕಕ್ಕೆ ಕಾರಣವಾದ ಸುಳ್ಯದ ಗುಳಿಕ್ಕಾನ ಪ್ರದೇಶಕ್ಕೆ ತಜ್ಞರ ತಂಡ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

2018 ರಲ್ಲಿ ಗುಳಿಕ್ಕಾನದ ಗುಡ್ಡದಲ್ಲಿ 200 ಮೀಟರ್ ದೂರದವರೆಗೆ ಭೂಮಿ ಆಳವಾಗಿ ಭಾಗ ಬಿಟ್ಟಿತು. ಈ ವೇಳೆ ಗುಳಿಕ್ಕಾನದ ಗುಡ್ಡ ಭಾಗದಲ್ಲಿ 10 ಕುಟುಂಬಗಳು ವಾಸಿಸುತ್ತಿದ್ದವು.

ಇದೀಗ ಈ ಗುಡ್ಡ ಪ್ರದೇಶದಲ್ಲಿ ಜನ ವಾಸ ಮಾಡಲು ಸೂಕ್ತವಾಗಿದೆಯೇ ಎಂಬುದನ್ನು ಪರಿಶೀಲನೆ ನಡೆಸುವುದಕ್ಕೆ ತಂಡ ಆಗಮಿಸಿದೆ.

ಸುಳ್ಯದ ಗುಳಿಕ್ಕಾನ ಪ್ರದೇಶ ಜನ ವಾಸಿಸಲು ಯೊಗ್ಯವಾಗಿದೆಯೇ ಎಂದು ತಿಳಿಯಲು ಅಧ್ಯಯನ ತಂಡ ಆಗಮಿಸಿ ಪರಿಶೀಲನೆ ನಡೆಸಿ  ಅಧ್ಯಯನ ವರದಿ ಸರ್ಕಾರಕ್ಕೆ ಸಲ್ಲಿಸಲಿದೆ.

ಜಿಯಾಲಾಜಿಕಲ್ ಸರ್ವಿಸ್ ಆಫ್ ಇಂಡಿಯಾ ಮಿನಿಸ್ಟರಿ ಮೈನ್ಸ್ ಆಫ್ ಇಂಡಿಯಾದ ಹಿರಿಯ ಜಿಯಾಲಾಜಿಸ್ಟ್ ಅಫೀಸರ್ ಐಜಾದ್ ಅಹಮದ್ ಭಟ್, ಹಿರಿಯ ಜಿಯಾಲಾಜಿಸ್ಟ್ ಜಿ ಎಸ್ ಐ ಸೆಂಥಿಲ್ ಕುಮಾರ್ ಸುಕೋಚ್,  ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಂಗಳೂರು ಉಪ ನಿರ್ದೇಶಕ ಲಿಂಗರಾಜ್ ಬಿ ಎಂ ಹಾಗೂ ಭೂ ವಿಜ್ಞಾನಿ ಶ್ರೀಮತಿ ಡಾ. ಸುಷ್ಮಾಶಶಿ ಇದ್ದರು. ಉಪ ತಹಶಿಲ್ದಾರ್ ಚಂದ್ರಕಾಂತ್ ಎಂ ಆರ್, ಆರ್ ಐ ಶಂಕರ್, ಕೊಲ್ಲಮೊಗ್ರು ಗ್ರಾ.ಪಂ ಪಿಡಿಒ ರವಿಚಂದ್ರ, ಕೊಲ್ಲಮೊಗ್ರು ಗ್ರಾಮ ಲೆಕ್ಕಾಧಿಕಾರಿ ಮಧು ಕೆ ಬಿ, ಸಹಾಯಕ ಯತಿನ್, ಗ್ರಾ.ಪಂ ಸಿಬ್ಬಂದಿ ಸಂತೋಷ್, ಸ್ಥಳೀಯ ಜನ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.

ಗುಡ್ಡ ಬಿರುಕು ಬಿಟ್ಟ ಹೊರತಾಗಿಯೂ ಅಲ್ಲಿ ಈಗಲೂ ಜನರು ವಾಸವಾಗಿದ್ದಾರೆ. ಸ್ಥಳಾಂತರಿಸಲು ಪ್ರಕ್ರಿಯೆ ಆರಂಭವಾಗಿ ನಾಲ್ಕು ವರ್ಷಗಳಾದರೂ ಈ ವರೆಗೆ ಸಾಧ್ಯವಾಗಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು