11:17 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಸುಳ್ಯ: ಬಿರುಕು ಬಿಟ್ಟ ಗುಳಿಕ್ಕಾನ ಜನವಸತಿ ಪ್ರದೇಶಕ್ಕೆ ತಜ್ಞರ ತಂಡ ಭೇಟಿ; ಪರಿಶೀಲನೆ

05/07/2022, 08:59

ಸಾಂದರ್ಭಿಕ ಚಿತ್ರ
ಸುಳ್ಯ(reporterkarnataka.com):
ಬಿರುಕು ಬಿಟ್ಟು ಜನರ ಆತಂಕಕ್ಕೆ ಕಾರಣವಾದ ಸುಳ್ಯದ ಗುಳಿಕ್ಕಾನ ಪ್ರದೇಶಕ್ಕೆ ತಜ್ಞರ ತಂಡ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

2018 ರಲ್ಲಿ ಗುಳಿಕ್ಕಾನದ ಗುಡ್ಡದಲ್ಲಿ 200 ಮೀಟರ್ ದೂರದವರೆಗೆ ಭೂಮಿ ಆಳವಾಗಿ ಭಾಗ ಬಿಟ್ಟಿತು. ಈ ವೇಳೆ ಗುಳಿಕ್ಕಾನದ ಗುಡ್ಡ ಭಾಗದಲ್ಲಿ 10 ಕುಟುಂಬಗಳು ವಾಸಿಸುತ್ತಿದ್ದವು.

ಇದೀಗ ಈ ಗುಡ್ಡ ಪ್ರದೇಶದಲ್ಲಿ ಜನ ವಾಸ ಮಾಡಲು ಸೂಕ್ತವಾಗಿದೆಯೇ ಎಂಬುದನ್ನು ಪರಿಶೀಲನೆ ನಡೆಸುವುದಕ್ಕೆ ತಂಡ ಆಗಮಿಸಿದೆ.

ಸುಳ್ಯದ ಗುಳಿಕ್ಕಾನ ಪ್ರದೇಶ ಜನ ವಾಸಿಸಲು ಯೊಗ್ಯವಾಗಿದೆಯೇ ಎಂದು ತಿಳಿಯಲು ಅಧ್ಯಯನ ತಂಡ ಆಗಮಿಸಿ ಪರಿಶೀಲನೆ ನಡೆಸಿ  ಅಧ್ಯಯನ ವರದಿ ಸರ್ಕಾರಕ್ಕೆ ಸಲ್ಲಿಸಲಿದೆ.

ಜಿಯಾಲಾಜಿಕಲ್ ಸರ್ವಿಸ್ ಆಫ್ ಇಂಡಿಯಾ ಮಿನಿಸ್ಟರಿ ಮೈನ್ಸ್ ಆಫ್ ಇಂಡಿಯಾದ ಹಿರಿಯ ಜಿಯಾಲಾಜಿಸ್ಟ್ ಅಫೀಸರ್ ಐಜಾದ್ ಅಹಮದ್ ಭಟ್, ಹಿರಿಯ ಜಿಯಾಲಾಜಿಸ್ಟ್ ಜಿ ಎಸ್ ಐ ಸೆಂಥಿಲ್ ಕುಮಾರ್ ಸುಕೋಚ್,  ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಂಗಳೂರು ಉಪ ನಿರ್ದೇಶಕ ಲಿಂಗರಾಜ್ ಬಿ ಎಂ ಹಾಗೂ ಭೂ ವಿಜ್ಞಾನಿ ಶ್ರೀಮತಿ ಡಾ. ಸುಷ್ಮಾಶಶಿ ಇದ್ದರು. ಉಪ ತಹಶಿಲ್ದಾರ್ ಚಂದ್ರಕಾಂತ್ ಎಂ ಆರ್, ಆರ್ ಐ ಶಂಕರ್, ಕೊಲ್ಲಮೊಗ್ರು ಗ್ರಾ.ಪಂ ಪಿಡಿಒ ರವಿಚಂದ್ರ, ಕೊಲ್ಲಮೊಗ್ರು ಗ್ರಾಮ ಲೆಕ್ಕಾಧಿಕಾರಿ ಮಧು ಕೆ ಬಿ, ಸಹಾಯಕ ಯತಿನ್, ಗ್ರಾ.ಪಂ ಸಿಬ್ಬಂದಿ ಸಂತೋಷ್, ಸ್ಥಳೀಯ ಜನ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.

ಗುಡ್ಡ ಬಿರುಕು ಬಿಟ್ಟ ಹೊರತಾಗಿಯೂ ಅಲ್ಲಿ ಈಗಲೂ ಜನರು ವಾಸವಾಗಿದ್ದಾರೆ. ಸ್ಥಳಾಂತರಿಸಲು ಪ್ರಕ್ರಿಯೆ ಆರಂಭವಾಗಿ ನಾಲ್ಕು ವರ್ಷಗಳಾದರೂ ಈ ವರೆಗೆ ಸಾಧ್ಯವಾಗಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು