4:13 PM Sunday28 - June 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ…

ಇತ್ತೀಚಿನ ಸುದ್ದಿ

ಸುಳ್ಯ: ಬಿರುಕು ಬಿಟ್ಟ ಗುಳಿಕ್ಕಾನ ಜನವಸತಿ ಪ್ರದೇಶಕ್ಕೆ ತಜ್ಞರ ತಂಡ ಭೇಟಿ; ಪರಿಶೀಲನೆ

05/07/2022, 08:59

ಸಾಂದರ್ಭಿಕ ಚಿತ್ರ
ಸುಳ್ಯ(reporterkarnataka.com):
ಬಿರುಕು ಬಿಟ್ಟು ಜನರ ಆತಂಕಕ್ಕೆ ಕಾರಣವಾದ ಸುಳ್ಯದ ಗುಳಿಕ್ಕಾನ ಪ್ರದೇಶಕ್ಕೆ ತಜ್ಞರ ತಂಡ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

2018 ರಲ್ಲಿ ಗುಳಿಕ್ಕಾನದ ಗುಡ್ಡದಲ್ಲಿ 200 ಮೀಟರ್ ದೂರದವರೆಗೆ ಭೂಮಿ ಆಳವಾಗಿ ಭಾಗ ಬಿಟ್ಟಿತು. ಈ ವೇಳೆ ಗುಳಿಕ್ಕಾನದ ಗುಡ್ಡ ಭಾಗದಲ್ಲಿ 10 ಕುಟುಂಬಗಳು ವಾಸಿಸುತ್ತಿದ್ದವು.

ಇದೀಗ ಈ ಗುಡ್ಡ ಪ್ರದೇಶದಲ್ಲಿ ಜನ ವಾಸ ಮಾಡಲು ಸೂಕ್ತವಾಗಿದೆಯೇ ಎಂಬುದನ್ನು ಪರಿಶೀಲನೆ ನಡೆಸುವುದಕ್ಕೆ ತಂಡ ಆಗಮಿಸಿದೆ.

ಸುಳ್ಯದ ಗುಳಿಕ್ಕಾನ ಪ್ರದೇಶ ಜನ ವಾಸಿಸಲು ಯೊಗ್ಯವಾಗಿದೆಯೇ ಎಂದು ತಿಳಿಯಲು ಅಧ್ಯಯನ ತಂಡ ಆಗಮಿಸಿ ಪರಿಶೀಲನೆ ನಡೆಸಿ  ಅಧ್ಯಯನ ವರದಿ ಸರ್ಕಾರಕ್ಕೆ ಸಲ್ಲಿಸಲಿದೆ.

ಜಿಯಾಲಾಜಿಕಲ್ ಸರ್ವಿಸ್ ಆಫ್ ಇಂಡಿಯಾ ಮಿನಿಸ್ಟರಿ ಮೈನ್ಸ್ ಆಫ್ ಇಂಡಿಯಾದ ಹಿರಿಯ ಜಿಯಾಲಾಜಿಸ್ಟ್ ಅಫೀಸರ್ ಐಜಾದ್ ಅಹಮದ್ ಭಟ್, ಹಿರಿಯ ಜಿಯಾಲಾಜಿಸ್ಟ್ ಜಿ ಎಸ್ ಐ ಸೆಂಥಿಲ್ ಕುಮಾರ್ ಸುಕೋಚ್,  ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಂಗಳೂರು ಉಪ ನಿರ್ದೇಶಕ ಲಿಂಗರಾಜ್ ಬಿ ಎಂ ಹಾಗೂ ಭೂ ವಿಜ್ಞಾನಿ ಶ್ರೀಮತಿ ಡಾ. ಸುಷ್ಮಾಶಶಿ ಇದ್ದರು. ಉಪ ತಹಶಿಲ್ದಾರ್ ಚಂದ್ರಕಾಂತ್ ಎಂ ಆರ್, ಆರ್ ಐ ಶಂಕರ್, ಕೊಲ್ಲಮೊಗ್ರು ಗ್ರಾ.ಪಂ ಪಿಡಿಒ ರವಿಚಂದ್ರ, ಕೊಲ್ಲಮೊಗ್ರು ಗ್ರಾಮ ಲೆಕ್ಕಾಧಿಕಾರಿ ಮಧು ಕೆ ಬಿ, ಸಹಾಯಕ ಯತಿನ್, ಗ್ರಾ.ಪಂ ಸಿಬ್ಬಂದಿ ಸಂತೋಷ್, ಸ್ಥಳೀಯ ಜನ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.

ಗುಡ್ಡ ಬಿರುಕು ಬಿಟ್ಟ ಹೊರತಾಗಿಯೂ ಅಲ್ಲಿ ಈಗಲೂ ಜನರು ವಾಸವಾಗಿದ್ದಾರೆ. ಸ್ಥಳಾಂತರಿಸಲು ಪ್ರಕ್ರಿಯೆ ಆರಂಭವಾಗಿ ನಾಲ್ಕು ವರ್ಷಗಳಾದರೂ ಈ ವರೆಗೆ ಸಾಧ್ಯವಾಗಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು