7:51 PM Tuesday24 - March 2026
ಬ್ರೇಕಿಂಗ್ ನ್ಯೂಸ್
ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ

ಇತ್ತೀಚಿನ ಸುದ್ದಿ

ಸುಳ್ಯ: ಗುಂಡು ಹಾರಿಸಿ ಪತ್ನಿಯ ಕೊಲೆ ಮಾಡಿ ಆ್ಯಸಿಡ್ ಕುಡಿದು ಪತಿ ಆತ್ಮಹತ್ಯೆ: ಮದ್ಯದ ಅಮಲಿನಲ್ಲಿ ದುಷ್ಕೃತ್ಯ

19/01/2025, 11:37

ಸುಳ್ಯ(reporterkarnataka.com)
ವ್ಯಕ್ತಿಯೊಬ್ಬರು ಕುಡಿದ ಅಮಲಿನಲ್ಲಿ ತನ್ನ ಪತ್ನಿಯನ್ನು ಗುಂಡು ಹಾರಿಸಿ ಕೊಲೆ ಮಾಡಿ ಬಳಿಕ ತಾನು ಆ್ಯಸಿಡ್ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಗೆ ಸಮೀಪದ ನೆಲ್ಲೂರು ಎಂಬಲ್ಲಿ ನಡೆದಿದೆ.


ಗಂಡನ ಗುಂಡಿನ ದಾಳಿಗೆ ಸಾವನ್ನಪ್ಪಿದ ಮಹಿಳೆಯನ್ನು
ವಿನೋದಾ ಎಂದು ಗುರುತಿಸಲಾಗಿದೆ.
ಪತಿ ರಾಮಚಂದ್ರ ಕೊಲೆಗಾರ ತಿಳಿದು ಬಂದಿದೆ.
ರಾಮಚಂದ್ರ ನಿತ್ಯ ಕುಡಿದು ಬಂದು ಪತ್ನಿ ಜೊತೆ ಜಗಳವಾಡುತ್ತಿದ್ದ ಎನ್ನಲಾಗಿದೆ. ಅದೇ ರೀತಿ ರಾತ್ರಿ ಕುಡಿದು ಬಂದು ಪತ್ನಿ ವಿನೋದಾ ಜತೆ ರಾಮಚಂದ್ರ ಗಲಾಟೆ ಮಾಡಿದ್ದ. ಜಗಳ ಬಿಡಿಸಲು ಬಂದ ಮಗ ಪ್ರಶಾಂತ್​​​ನಿಗೆ ಬಂದೂಕು ತೋರಿಸಿ ಫೈರಿಂಗ್​​ ಮಾಡುವುದಾಗಿ ರಾಮಚಂದ್ರ ಬೆದರಿಸಿದ್ದಾನೆ. ಮಗನಿಗೆ ಶೂಟ್​​ ಮಾಡಲು ಯತ್ನಿಸಿದಾಗ ತಾಯಿ ವಿನೋದಾ ಅಡ್ಡ ಬಂದಿದ್ದಾರೆ. ಈ ವೇಳೆ ಗುಂಡು ತಗುಲಿ ವಿನೋದಾ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಪೊಲೀಸ್‌ ಮಹಾ ನಿರೀಕ್ಷಕರಾದ ಅಮಿತ್‌ ಸಿಂಗ್‌ ಮತ್ತು ಜಿಲ್ಲಾ ಪೊಲೀಸ್‌ ಅಧೀಕ್ಷಕ ಯತೀಶ್‌ ಎನ್‌.
ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಾಯ್ದೆ 2023ರ ಕಲಂ 103 ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 25 ಮತ್ತು 27 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು