11:20 AM Wednesday13 - May 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ… ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇ. 1.50ರಷ್ಟು ಹೆಚ್ಚಳ: ಸರ್ಕಾರದ… ಸುವೇಂದು ಪಿಎ ಚಂದ್ರನಾಥ್ ರಾಥ್ ಹತ್ಯೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್: ಸಿಐಡಿ ತನಿಖೆ

ಇತ್ತೀಚಿನ ಸುದ್ದಿ

ಸುಳ್ಯ: ಗುಂಡು ಹಾರಿಸಿ ಪತ್ನಿಯ ಕೊಲೆ ಮಾಡಿ ಆ್ಯಸಿಡ್ ಕುಡಿದು ಪತಿ ಆತ್ಮಹತ್ಯೆ: ಮದ್ಯದ ಅಮಲಿನಲ್ಲಿ ದುಷ್ಕೃತ್ಯ

19/01/2025, 11:37

ಸುಳ್ಯ(reporterkarnataka.com)
ವ್ಯಕ್ತಿಯೊಬ್ಬರು ಕುಡಿದ ಅಮಲಿನಲ್ಲಿ ತನ್ನ ಪತ್ನಿಯನ್ನು ಗುಂಡು ಹಾರಿಸಿ ಕೊಲೆ ಮಾಡಿ ಬಳಿಕ ತಾನು ಆ್ಯಸಿಡ್ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಗೆ ಸಮೀಪದ ನೆಲ್ಲೂರು ಎಂಬಲ್ಲಿ ನಡೆದಿದೆ.


ಗಂಡನ ಗುಂಡಿನ ದಾಳಿಗೆ ಸಾವನ್ನಪ್ಪಿದ ಮಹಿಳೆಯನ್ನು
ವಿನೋದಾ ಎಂದು ಗುರುತಿಸಲಾಗಿದೆ.
ಪತಿ ರಾಮಚಂದ್ರ ಕೊಲೆಗಾರ ತಿಳಿದು ಬಂದಿದೆ.
ರಾಮಚಂದ್ರ ನಿತ್ಯ ಕುಡಿದು ಬಂದು ಪತ್ನಿ ಜೊತೆ ಜಗಳವಾಡುತ್ತಿದ್ದ ಎನ್ನಲಾಗಿದೆ. ಅದೇ ರೀತಿ ರಾತ್ರಿ ಕುಡಿದು ಬಂದು ಪತ್ನಿ ವಿನೋದಾ ಜತೆ ರಾಮಚಂದ್ರ ಗಲಾಟೆ ಮಾಡಿದ್ದ. ಜಗಳ ಬಿಡಿಸಲು ಬಂದ ಮಗ ಪ್ರಶಾಂತ್​​​ನಿಗೆ ಬಂದೂಕು ತೋರಿಸಿ ಫೈರಿಂಗ್​​ ಮಾಡುವುದಾಗಿ ರಾಮಚಂದ್ರ ಬೆದರಿಸಿದ್ದಾನೆ. ಮಗನಿಗೆ ಶೂಟ್​​ ಮಾಡಲು ಯತ್ನಿಸಿದಾಗ ತಾಯಿ ವಿನೋದಾ ಅಡ್ಡ ಬಂದಿದ್ದಾರೆ. ಈ ವೇಳೆ ಗುಂಡು ತಗುಲಿ ವಿನೋದಾ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪಶ್ಚಿಮ ವಲಯ ಪೊಲೀಸ್‌ ಮಹಾ ನಿರೀಕ್ಷಕರಾದ ಅಮಿತ್‌ ಸಿಂಗ್‌ ಮತ್ತು ಜಿಲ್ಲಾ ಪೊಲೀಸ್‌ ಅಧೀಕ್ಷಕ ಯತೀಶ್‌ ಎನ್‌.
ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಾಯ್ದೆ 2023ರ ಕಲಂ 103 ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 25 ಮತ್ತು 27 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು