4:58 PM Friday3 - April 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಸುಳ್ಯ-ಸಂಪಾಜೆ ಮತ್ತೆ ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 2.1ರಷ್ಟು ದಾಖಲು

01/07/2022, 22:09

ಮಡಿಕೇರಿ(reporterkarnataka.com): ಕೊಡಗು ಮತ್ತು ದಕ್ಷಿಣಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿ ಶುಕ್ರವಾರ ಮತ್ತೆ ಉಂಟಾದ ಭೂಕಂಪನ ರಿಕ್ಟರ್ ಮಾಪಕದಲ್ಲಿ 2.1ರಷ್ಟು ತೀವ್ರತೆ ದಾಖಲಾಗಿದೆ.

ಶುಕ್ರವಾರ ಪೂರ್ವಾಹ್ನ 10.47ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ಕೊಡಗು– ದಕ್ಷಿಣ ಕನ್ನಡ ಗಡಿ ಗ್ರಾಮವಾಗಿರುವ ಚೆಂಬು ಹಾಗೂ ಪೆರಾಜೆಯಿಂದ 5.1 ಪಶ್ಚಿಮ ವಾಯುವ್ಯ ದಿಕ್ಕಿನಲ್ಲಿ ಭೂಮಿಯ 10 ಕಿಲೋಮೀಟರ್ ಆಳದಲ್ಲಿ ರಿಕ್ಟರ್ ಮಾಪಕ 2.1 ರಷ್ಟು ಭೂಕಂಪನವಾಗಿರುವುದಾಗಿ ಕೆಎಸ್‌ಎನ್‌ಡಿಎಂಸಿ ಮಾಹಿತಿ ನೀಡಿದೆ.

ಕಂಪನದ ಪರಿಣಾಮ ಮಡಿಕೇರಿ ತಾಲೂಕಿನ ಕರಿಕೆ ಭಾಗದ ಉತ್ತರ ವಾಯುವ್ಯ ದಿಕ್ಕಿನಲ್ಲಿ 9.1 ಕಿಲೋಮೀಟರ್ ವ್ಯಾಪ್ತಿಯಲ್ಲಿ, ಸಂಪಾಜೆ ಭಾಗದ ಪಶ್ಚಿಮದಲ್ಲಿ 11.6 ಕಿಲೋಮೀಟರ್ ವ್ಯಾಪ್ತಿಯಲ್ಲಿ, ಸುಳ್ಯ ತಾಲೂಕು ಭಾಗದ ಆಗ್ನೇಯದಲ್ಲಿ 11.3 ಕಿಲೋಮೀಟರ್ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿದ್ದು, ಈ ಪ್ರದೇಶದ 20-30 ಕಿಲೋಮೀಟರ್ ದೂರದಲ್ಲಿ ಭೂಕಂಪನದ ಅನುಭವವಾಗಿರುವುದಾಗಿ ಹೇಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು