12:04 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಸುಳ್ಯ-ಸಂಪಾಜೆ ಮತ್ತೆ ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 2.1ರಷ್ಟು ದಾಖಲು

01/07/2022, 22:09

ಮಡಿಕೇರಿ(reporterkarnataka.com): ಕೊಡಗು ಮತ್ತು ದಕ್ಷಿಣಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿ ಶುಕ್ರವಾರ ಮತ್ತೆ ಉಂಟಾದ ಭೂಕಂಪನ ರಿಕ್ಟರ್ ಮಾಪಕದಲ್ಲಿ 2.1ರಷ್ಟು ತೀವ್ರತೆ ದಾಖಲಾಗಿದೆ.

ಶುಕ್ರವಾರ ಪೂರ್ವಾಹ್ನ 10.47ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ಕೊಡಗು– ದಕ್ಷಿಣ ಕನ್ನಡ ಗಡಿ ಗ್ರಾಮವಾಗಿರುವ ಚೆಂಬು ಹಾಗೂ ಪೆರಾಜೆಯಿಂದ 5.1 ಪಶ್ಚಿಮ ವಾಯುವ್ಯ ದಿಕ್ಕಿನಲ್ಲಿ ಭೂಮಿಯ 10 ಕಿಲೋಮೀಟರ್ ಆಳದಲ್ಲಿ ರಿಕ್ಟರ್ ಮಾಪಕ 2.1 ರಷ್ಟು ಭೂಕಂಪನವಾಗಿರುವುದಾಗಿ ಕೆಎಸ್‌ಎನ್‌ಡಿಎಂಸಿ ಮಾಹಿತಿ ನೀಡಿದೆ.

ಕಂಪನದ ಪರಿಣಾಮ ಮಡಿಕೇರಿ ತಾಲೂಕಿನ ಕರಿಕೆ ಭಾಗದ ಉತ್ತರ ವಾಯುವ್ಯ ದಿಕ್ಕಿನಲ್ಲಿ 9.1 ಕಿಲೋಮೀಟರ್ ವ್ಯಾಪ್ತಿಯಲ್ಲಿ, ಸಂಪಾಜೆ ಭಾಗದ ಪಶ್ಚಿಮದಲ್ಲಿ 11.6 ಕಿಲೋಮೀಟರ್ ವ್ಯಾಪ್ತಿಯಲ್ಲಿ, ಸುಳ್ಯ ತಾಲೂಕು ಭಾಗದ ಆಗ್ನೇಯದಲ್ಲಿ 11.3 ಕಿಲೋಮೀಟರ್ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿದ್ದು, ಈ ಪ್ರದೇಶದ 20-30 ಕಿಲೋಮೀಟರ್ ದೂರದಲ್ಲಿ ಭೂಕಂಪನದ ಅನುಭವವಾಗಿರುವುದಾಗಿ ಹೇಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು