12:14 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸುಳ್ಯ-ಸಂಪಾಜೆ ಮತ್ತೆ ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 2.1ರಷ್ಟು ದಾಖಲು

01/07/2022, 22:09

ಮಡಿಕೇರಿ(reporterkarnataka.com): ಕೊಡಗು ಮತ್ತು ದಕ್ಷಿಣಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿ ಶುಕ್ರವಾರ ಮತ್ತೆ ಉಂಟಾದ ಭೂಕಂಪನ ರಿಕ್ಟರ್ ಮಾಪಕದಲ್ಲಿ 2.1ರಷ್ಟು ತೀವ್ರತೆ ದಾಖಲಾಗಿದೆ.

ಶುಕ್ರವಾರ ಪೂರ್ವಾಹ್ನ 10.47ರ ಸುಮಾರಿಗೆ ಭೂಕಂಪನ ಸಂಭವಿಸಿದ್ದು, ಕೊಡಗು– ದಕ್ಷಿಣ ಕನ್ನಡ ಗಡಿ ಗ್ರಾಮವಾಗಿರುವ ಚೆಂಬು ಹಾಗೂ ಪೆರಾಜೆಯಿಂದ 5.1 ಪಶ್ಚಿಮ ವಾಯುವ್ಯ ದಿಕ್ಕಿನಲ್ಲಿ ಭೂಮಿಯ 10 ಕಿಲೋಮೀಟರ್ ಆಳದಲ್ಲಿ ರಿಕ್ಟರ್ ಮಾಪಕ 2.1 ರಷ್ಟು ಭೂಕಂಪನವಾಗಿರುವುದಾಗಿ ಕೆಎಸ್‌ಎನ್‌ಡಿಎಂಸಿ ಮಾಹಿತಿ ನೀಡಿದೆ.

ಕಂಪನದ ಪರಿಣಾಮ ಮಡಿಕೇರಿ ತಾಲೂಕಿನ ಕರಿಕೆ ಭಾಗದ ಉತ್ತರ ವಾಯುವ್ಯ ದಿಕ್ಕಿನಲ್ಲಿ 9.1 ಕಿಲೋಮೀಟರ್ ವ್ಯಾಪ್ತಿಯಲ್ಲಿ, ಸಂಪಾಜೆ ಭಾಗದ ಪಶ್ಚಿಮದಲ್ಲಿ 11.6 ಕಿಲೋಮೀಟರ್ ವ್ಯಾಪ್ತಿಯಲ್ಲಿ, ಸುಳ್ಯ ತಾಲೂಕು ಭಾಗದ ಆಗ್ನೇಯದಲ್ಲಿ 11.3 ಕಿಲೋಮೀಟರ್ ವ್ಯಾಪ್ತಿಯಲ್ಲಿ ಕಾಣಿಸಿಕೊಂಡಿದ್ದು, ಈ ಪ್ರದೇಶದ 20-30 ಕಿಲೋಮೀಟರ್ ದೂರದಲ್ಲಿ ಭೂಕಂಪನದ ಅನುಭವವಾಗಿರುವುದಾಗಿ ಹೇಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು