2:14 AM Monday21 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ…

ಇತ್ತೀಚಿನ ಸುದ್ದಿ

ಸುಳ್ಯದಲ್ಲಿ ಕೈ ಅಭ್ಯರ್ಥಿಯ ಬದಲಾಯಿಸಿ; ನಂದಕುಮಾರ್ ಗೆ ಟಿಕೆಟ್ ನೀಡಿ: ನಿಷ್ಠಾವಂತ ಕಾರ್ಯಕರ್ತರ ಸಮಾವೇಶದಲ್ಲಿ ವ್ಯಾಪಕ ಒತ್ತಾಯ

09/04/2023, 23:59

ಸುಳ್ಯ(reporterkarnataka.com): ಸುಳ್ಯ ಕಾಂಗ್ರೆಸ್ ಘೋಷಣೆ ಮಾಡಿರುವ ಕೈ ಅಭ್ಯರ್ಥಿ ಯನ್ನು ಬದಲಾವಣೆ ಮಾಡಬೇಕು, ನಂದಕುಮಾರ್ ಅವರಿಗೆ ಟಿಕೆಟ್ ನೀಡಬೇಕು ಎನ್ನುವ ಮೂಲಕ ಸುಳ್ಯ ಕಾಂಗ್ರೆಸ್ ನಲ್ಲಿ ನಂದಕುಮಾರ್ ಪರ ಕೂಗು ದಿನ ಕಳೆದಂತೆ ಗಟ್ಟಿಯಾಗುತ್ತಿದೆ. ನಂದಕುಮಾರ್ ಅವರಿಗೆ ಪಕ್ಷದ ಬಿ. ಫಾರ್ಮ್ ಕೊಟ್ಟು ಅಭ್ಯರ್ಥಿಯಾಗಿ ಘೋಷಿಸಬೇಕು. ಇಲ್ಲದಿದ್ದರೆ ಅವರನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುವುದು ಎಂದು ನಿಷ್ಠಾವಂತ ಕಾಂಗ್ರೆಸಿಗರು ಒತ್ತಾಯಿಸಿದ್ದಾರೆ.
ಸುಳ್ಯ ವಿಧಾನ ಸಭೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಜತೆಗೆ ಬಿ ಫಾರ್ಮ್ ಅನ್ನು ಗೆಲ್ಲುವ ಅಭ್ಯರ್ಥಿ ನಂದಕುಮಾರ್ ಗೆ ಕೊಡಲೇ ಬೇಕು. ಒಂದು ವೇಳೆ ನಾಯಕರು ಯಾವುದೇ ಕ್ರಮಕ್ಕೆ ಮುಂದಾಗದೇ ಇದ್ದಲ್ಲಿ ತಟಸ್ಥ ಉಳಿಯುವ ಜತೆಗೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಂದಕುಮಾರ್ ಅವರನ್ನು ಕಣಕ್ಕೆ ಇಳಿಸಲಾಗುವುದು ಎಂಬ ಖಡಕ್ ಸಂದೇಶವನ್ನು ಸುಳ್ಯ ಹಾಗೂ ಕಡಬ ಭಾಗದ ಕಾಂಗ್ರೆಸ್ ನಿಷ್ಠಾವಂತ ಕಾರ್ಯಕರ್ತರು ಭಾನುವಾರ ಹಮ್ಮಿಕೊಂಡಿದ್ದ ಸಮಾವೇಶದ ಮೂಲಕ ಕೆಪಿಸಿಸಿ ಹಾಗೂ ಹೈಕಮಾಂಡ್ ಗೆ ರವಾನೆ ಮಾಡಿದ್ದಾರೆ.
ಸುಳ್ಯ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ನಿಂತಿಕಲ್ಲಿನಲ್ಲಿ ಭಾನುವಾರ ನಡೆದ ನಂದಕುಮಾರ್ ಪರ ನಡೆದ ನಿಷ್ಢಾವಂತ ಕಾರ್ಯಕರ್ತರ ಸಮಾವೇಶದಲ್ಲಿ‌ ಈ ಹಕ್ಕೊತ್ತಾಯ ಮಾಡಲಾಯಿತು. ಕಾಂಗ್ರೆಸ್ ನಾಯಕರಿಗೆ ಶಕ್ತಿ ಪ್ರದರ್ಶನ ಮಾಡುವ ಮೂಲಕ ನಿಷ್ಠಾವಂತ ಕಾರ್ಯಕರ್ತರು ಸಡ್ಡು ಹೊಡೆದಿದ್ದಾರೆ. ಹಾಲಿ ಅಭ್ಯರ್ಥಿ ಕೃಷ್ಣಪ್ಪ ಅವರಿಗೆ ಘೋಷಣೆ ಮಾಡಿರುವ ಟಿಕೆಟ್ ಅನ್ನು ತಡೆ ಹಿಡಿದು ನಂದಕುಮಾರ್ ಅವರಿಗೆ ಬಿ ಫಾರ್ಮ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ನಿಂತಿಕಲ್ಲಿನ ಧರ್ಮಶ್ರೀ ಆರ್ಕೇಡ್ ಸಭಾಂಗಣದಲ್ಲಿ 1500 ಕ್ಕೂ ಹೆಚ್ಚು ಕಡಬ ಹಾಗೂ ಸುಳ್ಯ ಬ್ಲಾಕ್ ಸೇರಿದಂತೆ ವಿವಿಧ ಕಡೆಗಳಿಂದ ಬಂದಿದ್ದ ಕಾರ್ಯಕರ್ತರು ಪ್ರಮುಖ ಅಜೆಂಡಾ ನಂದಕುಮಾರ್ ಅವರಿಗೆ ಬಿ ಫಾರ್ಮ್ ನೀಡಲೇಬೇಕು ಎಂಬುದಾಗಿತ್ತು.
ಕಾರ್ಯಕರ್ತರೆ ಹಣ ಹಾಕಿ ಸಮಾವೇಶ ಮಾಡಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಕಾಂಗ್ರೆಸ್ ಮುಖಂಡರಾದ ಭವಾನಿ ಶಂಕರ್, ಬಾಲಕೃಷ್ಣ ಬೆಲ್ಲಾರೆ, ಉಷಾ ಅಂಚನ್, ವಿಜಯಕುಮಾರ್ ಶೆಟ್ಟಿ, ಗಣೇಶ್, ಗೋಕುಲ್ ದಾಸ್ ಸೇರಿದಂತೆ ಸಮಾವೇಶದ‌ಲ್ಲಿ ಪಾಲ್ಗೊಂಡವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು