7:47 AM Saturday4 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಸುಮಾರು 204 ಪ್ರಕರಣಗಳ ತನಿಖೆಗೆ ಸಹಕರಿಸಿದ ಪೊಲೀಸ್ ಡಾಗ್ ಗೆ ಬೀಳ್ಕೊಡುಗೆ: 10 ವರ್ಷಗಳ ಸುದೀರ್ಘ ಸೇವೆ ನೀಡಿದ ಶ್ವಾನ

25/10/2023, 10:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪೊಲೀಸ್ ಇಲಾಖೆಯಲ್ಲಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿ ಹಲವು ಪ್ರಕರಣದಲ್ಲಿ ಆರೋಪಿಗಳ ಪತ್ತೆ ಹಚ್ಚುವುದರ ಜೊತೆ ಕಳ್ಳತನ, ದರೋಡೆ ಹಾಗೂ ಕೊಲೆ ಕೇಸ್‍ಗಳಲ್ಲಿ ಆರೋಪಿಗಳನ್ನ ಪತ್ತೆ ಹಚ್ಚಿದ್ದ ಶ್ವಾನಕ್ಕೆ ಪೊಲೀಸ್ ಇಲಾಖೆ ಬೀಳ್ಕೊಡುಗೆ ನೀಡಿದೆ. ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಇಲಾಖೆಯ ಶ್ವಾನ ದಳದಲ್ಲಿ ಸುದೀರ್ಘ 10 ವರ್ಷಗಳಿಗೂ ಹೆಚ್ಚು ಕಾಲ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಹಲವಾರು ಅಪರಾಧ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸುವಲ್ಲಿ ಶ್ರಮಿಸಿದ್ದ ಶ್ವಾನಕ್ಕೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಿಂದ ಪದಕ, ಪ್ರಶಂಸೆ ಹಾಗೂ ಎಲ್ಲರ ಗೌರವಕ್ಕೆ ಪಾತ್ರವಾಗಿತ್ತು.‌ ಪೊಲೀಸ್ ಶ್ವಾನಕ್ಕೆ ನಗರದ ಡಿ.ಎ.ಆರ್. ಆವರಣದಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ನಡೆದಿದೆ. ಶ್ವಾನದ ಹ್ಯಾಂಡ್ಲಾರ್ ಗಳಾಗಿ ಮಂಜುನಾಥ ಹಾಗೂ ಸಹಾಯಕ ನಿರ್ವಾಹಕರಾದ ಕುಮಾರ್ ಇವರುಗಳು ಕರ್ತವ್ಯ ನಿರ್ವಹಿಸುತ್ತಾರೆ. ಈ ಶ್ವಾನವು ತನ್ನ ಸೇವಾ ಅವಧಿಯಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಜರುಗಿದ ಕಳ್ಳತನ, ದರೋಡೆ ಹಾಗೂ ಕೊಲೆ ಇತ್ಯಾದಿ 204 ಪ್ರಕರಣಗಳಲ್ಲಿ 35 ಪ್ರಕರಣದಲ್ಲಿ ಸುಳಿವು ಹಾಗೂ 9 ಜನ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಪೊಲೀಸ್ ಇಲಾಖೆಗೆ ಸಹಕರಿಸಿರುತ್ತದೆ. ಈ ಶ್ವಾನವು ವಾರ್ಷಿಕವಾಗಿ ನಡೆಸಲಾಗುವ ಪೊಲೀಸ್ ಡ್ಯೂಟಿ ಮೀಟ್ ನಲ್ಲಿಯೂ ಹಲವು ಪದಕಗಳನ್ನು ಪಡೆದು ಜಿಲ್ಲೆಗೆ ಕೀರ್ತಿ ತಂದಿತ್ತು. ಶ್ವಾನದ ಹ್ಯಾಂಡ್ಲರ್ ಗಳಾದ ಮಂಜುನಾಥ್ ಹಾಗೂ ಕುಮಾರ್‍ ಅವರಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸಂಶನ ಪತ್ರ ನೀಡಿ ಗೌರವಿಸಿರುತ್ತಾರೆ. ಈ ಶ್ವಾನ 2013ರಲ್ಲಿ ಪೊಲೀಸ್ ಇಲಾಖೆ ಸೇರಿತ್ತು. ಅಲ್ಲಿಂದ ಹಲವು ಪ್ರಕರಣಗಳಲ್ಲಿ ಆರೋಪಿಗಳನ್ನ ಪತ್ತೆ ಹಚ್ಚಲು ಪೊಲೀಸ್ ಇಲಾಖೆಗೆ ಸಹಕರಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು