1:17 PM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು

26/01/2026, 20:21

ಉಡುಪಿ(reporterkarnataka.com):ಶಾಸಕ ಸುನೀಲ್ ಕುಮಾರ್ ಅವರು ಕಾರ್ಕಳದ ಥೀಮ್ ಪಾರ್ಕ್ ನಲ್ಲಿ ಪರಶುರಾಮನ ಮೂರ್ತಿಯನ್ನು ಫೈಬರ್ ನಲ್ಲಿ ಮಾಡಿಸಿ ಕಂಚಿನ ಮೂರ್ತಿ ಎಂದು ನಂಬಿಸಿದ್ದರು. ಜನರ ದಿಕ್ಕು ತಪ್ಪಿಸಿ ರಾಜಕೀಯ ಮಾಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಕಾರ್ಕಳದ ಪರಶುರಾಮ ಥೀಂ ಪಾರ್ಕ್ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂಬ ಮಾಜಿ ಸಚಿವ ಸುನಿಲ್ ಕುಮಾರ್ ಆರೋಪಕ್ಕೆ ಸಚಿವರು ಮಾಧ್ಯಮ ಜತೆ ಪ್ರತಿಕ್ರಿಯಿಸಿದರು. ಪರಶುರಾಮನನ್ನು ಕರಾವಳಿಯಲ್ಲಿ ಆರಾಧಿಸಲಾಗುತ್ತದೆ. ನಮಗೂ ಕೂಡ ಈ ವಿಚಾರದಲ್ಲಿ ರಾಜಕಾರಣ ಮಾಡುವುದು ಇಷ್ಟ ಇಲ್ಲ. ಸುನೀಲ್ ಕುಮಾರ್ ಪರಶುರಾಮನ ಮೂರ್ತಿಯನ್ನು ಫೈಬರ್ ನಲ್ಲಿ ಮಾಡಿಸಿದ್ದರು. ಫೈಬರ್ ನಲ್ಲಿ ಮಾಡಿಸಿ ಕಂಚಿನ ಮೂರ್ತಿ ಎಂದು ನಂಬಿಸಿದ್ದರು. ಜನರ ದಿಕ್ಕು ತಪ್ಪಿಸಿ ರಾಜಕೀಯ ಮಾಡುತ್ತಿದ್ದಾರೆ. ಜನರನ್ನು ನಂಬಿಸಿ ಮೋಸ ಮಾಡಿದ್ದು, ರಾಜಕೀಯ ಮಾಡಿದ್ದು ಸುನೀಲ್ ಕುಮಾರ್, ಕಾಂಗ್ರೆಸ್ ನವರಿಗೆ ದೇವರ ವಿಚಾರದಲ್ಲಿ ರಾಜಕೀಯ ಮಾಡುವ ದರ್ದು ಇಲ್ಲ. ಆದಷ್ಟು ಬೇಗ ಪರಶುರಾಮ ಮೂರ್ತಿಯ ಕಾಮಗಾರಿಯನ್ನು ಪೂರ್ಣಗೊಳಿಸಿ ಲೋಕಾರ್ಪಣೆ ಮಾಡ್ತೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು