6:51 PM Tuesday13 - May 2025
ಬ್ರೇಕಿಂಗ್ ನ್ಯೂಸ್
ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು…

ಇತ್ತೀಚಿನ ಸುದ್ದಿ

ಸೂಪರ್ ಕಾಪ್ ಉಡುಪಿ ಪೊಲೀಸ್ ಇನ್ಸ್ ಪೆಕ್ಟರ್ ಪ್ರಮೋದ್ ವರ್ಗಾವಣೆ !: ಕೆಲವರಿಗೆ ಖುಷಿ; ಹಲವರಿಗೆ ದುಃಖ

29/11/2022, 21:12

ಅನುಷ್ ಪಂಡಿತ್ ಮಂಗಳೂರು
info.reporterkarnataka@gmail.ಕಾಂ

ಉಡುಪಿ ನಗರ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ಅವರಿಗೆ ವರ್ಗಾವಣೆಯಾಗಿದೆ.

ಪ್ರಮೋದ್ ಅವರನ್ನು ಮಲ್ಪೆ ಕರಾವಳಿ ಕಾವಲು ಪೊಲೀಸ್ ಠಾಣೆ ನಿರೀಕ್ಷಕರಾಗಿ ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ.
ಕರಾವಳಿಯ ಸೂಕ್ಷ್ಮ ಜಿಲ್ಲೆಗಳಲ್ಲಿ ಒಂದಾಗಿರುವ ಉಡುಪಿ ಜಿಲ್ಲೆಯಲ್ಲಿ ಪ್ರಮೋದ್ ಕುಮಾರ್ ಅವರದ್ದು ಬಲು ದೊಡ್ಡ ಹೆಸರು. ಸಭ್ಯರಿಗೆ ಗೆಳೆಯರಾಗಿ, ಸಮಾಜಘಾತಕ ಶಕ್ತಿಗಳಿಗೆ ಅವರು ಸಿಂಹಸ್ವಪ್ನರಾಗಿದ್ದರು. ಅಕ್ರಮ ಚಟುವಟಿಗೆ ಲಗಾಮು ಜತೆಗೆ ರೌಡಿಸಂ ಮಟ್ಟ ಹಾಕಿದ್ದಾರೆ.
ಪ್ರಮೋದ್ ಅವರು ಮಂಗಳೂರಿನಲ್ಲಿದ್ದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಿಲ್ಡರೊಬ್ಬರಿಗೆ ಕಪಾಳ ಮೋಕ್ಷ ಮಾಡುವ ಮೂಲಕ ತನ್ನ ಎದೆಗಾರಿಕೆಯನ್ನು ಸಾಬೀತುಪಡಿಸಿದ್ದರು.

ಇವರ ವರ್ಗಾವಣೆ ಆದೇಶ ಬಂದಾಗ ಪ್ರಮೋದ್ ಅವರ ಸಹೋದ್ಯೋಗಿ ಪೊಲೀಸರೇ ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದರು. ಪ್ರಮೋದ್ ಅವರು ಕಳೆದ 2 ವರ್ಷಗಳಿಂದ ಉಡುಪಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಹಾಕಿದ್ದಾರೆ. ಇದೀಗ ದಕ್ಷ ಪೊಲೀಸ್ ಅಧಿಕಾರಿಯ ವರ್ಗಾವಣೆ ಹಲವರಿಗೆ ಬೇಸರ ತರಿಸಿದೆ. ಉಡುಪಿ ಜನತೆ ಪ್ರಮೋದ್ ಅವರು ಇನ್ನೂ 2 ವರ್ಷವಾದರೂ ಜಿಲ್ಲೆಯಲ್ಲಿ ಸೇವೆ ಮಾಡಬೇಕೆಂಬ ಇರಾದೆ ಇಟ್ಟುಕೊಂಡಿದ್ದರು. ಯಾಕೆಂದರೆ, ಕ್ರಿಮಿನಲ್ ಒಬ್ಬ ಕ್ರೈಂ ಮಾಡುವ ಮೊದಲು ಪ್ರಮೋದ್ ಅವರನ್ನು ನೆನಪಿಸಿಕೊಳ್ಳುತ್ತಿದ್ದ. ಕೆಟ್ಟ ಕೆಲಸಕ್ಕೆ ಕೈ ಹಾಕುವ ಮೊದಲು 10 ಬಾರಿ ಯೋಚಿಸುವಂತೆ ಪ್ರಮೋದ್ ಮಾಡಿದ್ದರು.

ಉಡುಪಿ ನಗರದಲ್ಲಿ ಅಕ್ರಮ ಚಟುವಟಿಕೆ, ರೌಡಿಸಂ ಮಟ್ಟ ಹಾಕುವುದರ ಜತೆಗೆ ಅವರು ಭ್ರಷ್ಟಾಚಾರ, ಪಕ್ಷಪಾತ ವಿರೋಧಿಯಾಗಿದ್ದರು.
ಪ್ರಮೋದ್ ವರ್ಗಾವಣೆ ಜತೆಗೆ ಕರಾವಳಿ ಕಾವಲು ಪೊಲೀಸ್ ನಿರೀಕ್ಷಕ ಮಂಜಪ್ಪ ಡಿ.ರಾಮ ಕೊಂಡಾಡಿ ಉಡುಪಿ ನಗರ ಪೊಲೀಸ್ ಠಾಣಾ ನಿರೀಕ್ಷಕರಾಗಿ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ನಿರೀಕ್ಷಕ ನಾಗರಾಜ್ ಟಿ.ಡಿ. ಕಾರ್ಕಳ ವೃತ್ತ ಪೊಲೀಸ್ ನಿರೀಕ್ಷಕರಾಗಿ ಹಾಗೂ ಕಾರ್ಕಳ ವೃತ್ತ ನಿರೀಕ್ಷಕ ಸಂಪತ್ ಕುಮಾರ್ ಎ. ಕರಾವಳಿ ಕಾವಲು ಪೊಲೀಸ್ ನಿರೀಕ್ಷಕರಾಗಿ ವರ್ಗಾವಣೆಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು