10:52 PM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

Support Saturday | ಅನಿರ್ವೇದ ಸಂಸ್ಥೆಯಿಂದ ವಿಶೇಷ ಅಗತ್ಯತೆಯ ಮಕ್ಕಳಿಗಾಗಿ ʻನೆರವಿನ ಶನಿವಾರʼ ಉಪಕ್ರಮಕ್ಕೆ ಚಾಲನೆ

26/03/2025, 13:16

ಮಂಗಳೂರು(reporterkarnataka.com): ನಗರದ ಮಾನಸಿಕ ಯೋಗಕ್ಷೇಮ ಸಂಪನ್ಮೂಲ ಕೇಂದ್ರ ಹಾಗೂ ಸರ್ಕಾರೇತರ ಸಂಸ್ಥೆ ಎನಿಸಿರುವ ʻಅನಿರ್ವೇದʼವು ನಗರದ ವಿಶೇಷ ಅಗತ್ಯತೆಯ ಮಕ್ಕಳಿಗಾಗಿ ಉಚಿತ ಮತ್ತು ಅಂತರ್ಗತ ʻನೆರವಿನ ಶನಿವಾರʼ ಎಂಬ ಉಪಕ್ರಮವನ್ನು ಪ್ರಾರಂಭಿಸಿದೆ.


ಇಫ್ತಿಕಾರ್ ಆಲಿ (ಅಧ್ಯಕ್ಷರು, ಕರ್ನಾಟಕದ ಅಲೈಡ್ ಮತ್ತು ಹೆಲ್ತ್ ಕೇರ್ ಕೌನ್ಸಿಲ್) ಅವರು ಮಂಗಳವಾರ ನಗರದಲ್ಲಿ ಅನಿರ್ವೇದದ ವಿಶೇಷ ಅಗತ್ಯತೆಯ ಮಕ್ಕಳ ಕೆಂದ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಈ ಉಪಕ್ರಮಕ್ಕೆ ಚಾಲನೆ ನೀಡಿದರು. ಪ್ರತಿಷ್ಠಾನದ ನಿರ್ದೇಶಕರಾದ ಡಾ. ಕೆ.ಟಿ. ಶ್ವೇತಾ ಅವರು ಈ ಕುರಿತು ಮಾಹಿತಿ ನೀಡಿ, ʻನೆರವಿನ ಶನಿವಾರʼ ಉಪಕ್ರಮವು 2025ರ ಮಾರ್ಚ್ 29ರಿಂದ ಪ್ರತಿ ಶನಿವಾರದಂದು ಮೋರ್ಗನ್ಸ್ ಗೇಟ್ ನಲ್ಲಿರುವ ಅನಿರ್ವೇದ ಸಂಸ್ಥೆಯ ಆವರಣದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ʻನೆರವಿನ ಶನಿವಾರʼ ಉಪಕ್ರಮವು ಆಟಿಸಂ ಸ್ಪೆಕ್ಟ್ರಮ್ ಡಿಸಾರ್ಡರ್ (ಎ.ಎಸ್.ಡಿ), ಎ.ಡಿ.ಎಚ್.ಡಿ, ಕಲಿಕಾ ನ್ಯೂನತೆಗಳು, ಬೌದ್ಧಿಕ ವೈಕಲ್ಯತೆಗಳು ಮತ್ತು ಬೆಳವಣಿಗೆಗೆ ಸಂಬಂಧಿಸಿದ ಇತರ ಸವಾಲುಗಳನ್ನು ಎದುರಿಸುತ್ತಿರುವ ಮಕ್ಕಳಿಗೆ ಸುರಕ್ಷಿತ ಮತ್ತು ಪೋಷಣೆಗೆ ಒತ್ತು ನೀಡುವ ಪರಿಸರವನ್ನು ಒದಗಿಸುವ ಗುರಿಯನ್ನು ಹೊಂದಿದೆ.
ಪೋಷಕರು, ಆರೈಕೆ ಒದಗಿಸುವವರು ಮತ್ತು ಸಮುದಾಯದ ಸದಸ್ಯರು ಈ ಉಪಕ್ರಮದಲ್ಲಿ ಪಾಲ್ಗೊಳ್ಳಲು ವಿನಂತಿಸಲಾಗಿದೆ. ಪೋಷಕರ ತರಬೇತಿ ಮತ್ತು ಸಮಾನಸ್ಕಂಧ ನೆರವು ಸಹ ಈ ಮೂಲಕ ಲಭ್ಯವಿದ್ದು, ಸಹಯೋಗದಿಂದ ಕೂಡಿದ ನೆರವು ಜಾಲವನ್ನು ಈ ಮೂಲಕ ರೂಪಿಸಲಾಗುವುದು.
ಮಂಗಳೂರಿನ ವಿಶೇಷ ಅಗತ್ಯತೆಯ ಮಕ್ಕಳ ಸಬಲೀಕರಣಕ್ಕಾಗಿ ನುರಿತ ವೃತ್ತಿಪರರೊಂದಿಗೆ ಕೈಜೋಡಿಸುವುದಕ್ಕಾಗಿ ಸ್ವಯಂಸೇವಕರಾಗಿ ಸೇವೆ ನೀಡಲು ʻನೆರವಿನ ಶನಿವಾರʼ ಉಪಕ್ರಮವು ಸಮುದಾಯದ ಸದಸ್ಯರಿಗೆ ಕರೆ ನೀಡಿದೆ.
ಹೆಚ್ಚಿನ ಮಾಹಿತಿಗಾಗಿ 9482186289 ಕ್ಕೆ ಕರೆ ಮಾಡಿರಿ ಅಥವಾ officialanirvedha@gmail.com ಗೆ ಸಂಪರ್ಕಿಸಿರಿ.
ಈ ಸಂಬಂಧ ಯಾವುದೇ ಪ್ರಶ್ನೆಗಳಿದ್ದಲ್ಲಿ ಅನಿರ್ವೇದ ಪ್ರತಿಷ್ಠಾನದ ನಿರ್ದೇಶಕರಾದ ಕೆ.ಟಿ ಶ್ವೇತಾ ಅವರನ್ನು 9902322985 ಮೂಲಕ ಸಂಪರ್ಕಿಸಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು