5:58 PM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

Support Saturday | ಅನಿರ್ವೇದ ಸಂಸ್ಥೆಯಿಂದ ವಿಶೇಷ ಅಗತ್ಯತೆಯ ಮಕ್ಕಳಿಗಾಗಿ ʻನೆರವಿನ ಶನಿವಾರʼ ಉಪಕ್ರಮಕ್ಕೆ ಚಾಲನೆ

26/03/2025, 13:16

ಮಂಗಳೂರು(reporterkarnataka.com): ನಗರದ ಮಾನಸಿಕ ಯೋಗಕ್ಷೇಮ ಸಂಪನ್ಮೂಲ ಕೇಂದ್ರ ಹಾಗೂ ಸರ್ಕಾರೇತರ ಸಂಸ್ಥೆ ಎನಿಸಿರುವ ʻಅನಿರ್ವೇದʼವು ನಗರದ ವಿಶೇಷ ಅಗತ್ಯತೆಯ ಮಕ್ಕಳಿಗಾಗಿ ಉಚಿತ ಮತ್ತು ಅಂತರ್ಗತ ʻನೆರವಿನ ಶನಿವಾರʼ ಎಂಬ ಉಪಕ್ರಮವನ್ನು ಪ್ರಾರಂಭಿಸಿದೆ.


ಇಫ್ತಿಕಾರ್ ಆಲಿ (ಅಧ್ಯಕ್ಷರು, ಕರ್ನಾಟಕದ ಅಲೈಡ್ ಮತ್ತು ಹೆಲ್ತ್ ಕೇರ್ ಕೌನ್ಸಿಲ್) ಅವರು ಮಂಗಳವಾರ ನಗರದಲ್ಲಿ ಅನಿರ್ವೇದದ ವಿಶೇಷ ಅಗತ್ಯತೆಯ ಮಕ್ಕಳ ಕೆಂದ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಈ ಉಪಕ್ರಮಕ್ಕೆ ಚಾಲನೆ ನೀಡಿದರು. ಪ್ರತಿಷ್ಠಾನದ ನಿರ್ದೇಶಕರಾದ ಡಾ. ಕೆ.ಟಿ. ಶ್ವೇತಾ ಅವರು ಈ ಕುರಿತು ಮಾಹಿತಿ ನೀಡಿ, ʻನೆರವಿನ ಶನಿವಾರʼ ಉಪಕ್ರಮವು 2025ರ ಮಾರ್ಚ್ 29ರಿಂದ ಪ್ರತಿ ಶನಿವಾರದಂದು ಮೋರ್ಗನ್ಸ್ ಗೇಟ್ ನಲ್ಲಿರುವ ಅನಿರ್ವೇದ ಸಂಸ್ಥೆಯ ಆವರಣದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ʻನೆರವಿನ ಶನಿವಾರʼ ಉಪಕ್ರಮವು ಆಟಿಸಂ ಸ್ಪೆಕ್ಟ್ರಮ್ ಡಿಸಾರ್ಡರ್ (ಎ.ಎಸ್.ಡಿ), ಎ.ಡಿ.ಎಚ್.ಡಿ, ಕಲಿಕಾ ನ್ಯೂನತೆಗಳು, ಬೌದ್ಧಿಕ ವೈಕಲ್ಯತೆಗಳು ಮತ್ತು ಬೆಳವಣಿಗೆಗೆ ಸಂಬಂಧಿಸಿದ ಇತರ ಸವಾಲುಗಳನ್ನು ಎದುರಿಸುತ್ತಿರುವ ಮಕ್ಕಳಿಗೆ ಸುರಕ್ಷಿತ ಮತ್ತು ಪೋಷಣೆಗೆ ಒತ್ತು ನೀಡುವ ಪರಿಸರವನ್ನು ಒದಗಿಸುವ ಗುರಿಯನ್ನು ಹೊಂದಿದೆ.
ಪೋಷಕರು, ಆರೈಕೆ ಒದಗಿಸುವವರು ಮತ್ತು ಸಮುದಾಯದ ಸದಸ್ಯರು ಈ ಉಪಕ್ರಮದಲ್ಲಿ ಪಾಲ್ಗೊಳ್ಳಲು ವಿನಂತಿಸಲಾಗಿದೆ. ಪೋಷಕರ ತರಬೇತಿ ಮತ್ತು ಸಮಾನಸ್ಕಂಧ ನೆರವು ಸಹ ಈ ಮೂಲಕ ಲಭ್ಯವಿದ್ದು, ಸಹಯೋಗದಿಂದ ಕೂಡಿದ ನೆರವು ಜಾಲವನ್ನು ಈ ಮೂಲಕ ರೂಪಿಸಲಾಗುವುದು.
ಮಂಗಳೂರಿನ ವಿಶೇಷ ಅಗತ್ಯತೆಯ ಮಕ್ಕಳ ಸಬಲೀಕರಣಕ್ಕಾಗಿ ನುರಿತ ವೃತ್ತಿಪರರೊಂದಿಗೆ ಕೈಜೋಡಿಸುವುದಕ್ಕಾಗಿ ಸ್ವಯಂಸೇವಕರಾಗಿ ಸೇವೆ ನೀಡಲು ʻನೆರವಿನ ಶನಿವಾರʼ ಉಪಕ್ರಮವು ಸಮುದಾಯದ ಸದಸ್ಯರಿಗೆ ಕರೆ ನೀಡಿದೆ.
ಹೆಚ್ಚಿನ ಮಾಹಿತಿಗಾಗಿ 9482186289 ಕ್ಕೆ ಕರೆ ಮಾಡಿರಿ ಅಥವಾ officialanirvedha@gmail.com ಗೆ ಸಂಪರ್ಕಿಸಿರಿ.
ಈ ಸಂಬಂಧ ಯಾವುದೇ ಪ್ರಶ್ನೆಗಳಿದ್ದಲ್ಲಿ ಅನಿರ್ವೇದ ಪ್ರತಿಷ್ಠಾನದ ನಿರ್ದೇಶಕರಾದ ಕೆ.ಟಿ ಶ್ವೇತಾ ಅವರನ್ನು 9902322985 ಮೂಲಕ ಸಂಪರ್ಕಿಸಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು