1:40 PM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ

13/11/2025, 20:02

*ಇದು ಬೆಂಗಳೂರಿಗರ ಗೆಲುವು; ನಮಗೆ ಸಿಕ್ಕ ನ್ಯಾಯ: ಡಿಸಿಎಂ ಡಿ.ಕೆ. ಶಿವಕುಮಾರ್*

*ಮೇಕೆದಾಟು ಯೋಜನೆಗೆ ಸಹಕಾರ ನೀಡದೇ ಕೇಂದ್ರ ಜಲ ಆಯೋಗಕ್ಕೆ (CWC) ಬೇರೆ ಆಯ್ಕೆ ಇಲ್ಲ*

ಬೆಂಗಳೂರು(reporterkarnataka.com): ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದು, ನ್ಯಾಯ ಪೀಠದಿಂದ ನಮಗೆ ನ್ಯಾಯ ಸಿಕ್ಕಂತಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.
ಮೇಕೆದಾಟು ಯೋಜನೆ ಡಿಪಿಆರ್ ವಿರೋಧಿಸಿ ತಮಿಳುನಾಡು ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು, ಇದರಿಂದ ತಮಿಳುನಾಡಿಗೆ ಹಿನ್ನಡೆಯಾಗಿದೆಯಲ್ಲಾ ಎಂದು ಕೇಳಿದಾಗ, “ಈ ಬಗ್ಗೆ ಸಂಪೂರ್ಣ ಮಾಹಿತಿ ಸಿಕ್ಕ ನಂತರ ವಿವರವಾಗಿ ಮಾತನಾಡುತ್ತೇನೆ. ಇದು ಯಾವುದೇ ರೀತಿಯ ಹಿನ್ನಡೆಯಲ್ಲ. ಬದಲಿಗೆ ನ್ಯಾಯ ಪೀಠದಿಂದ ನ್ಯಾಯ ಸಿಕ್ಕಂತಾಗಿದೆ. ಮೇಕೆದಾಟು, ‘ನಮ್ಮ ನೀರು, ನಮ್ಮ ಹಕ್ಕು’ ಯೋಜನೆ. ನಾವು ತಮಿಳುನಾಡಿಗೆ ಯಾವುದೇ ರೀತಿಯಲ್ಲೂ ಅಡ್ಡಿ ಮಾಡುತ್ತಿಲ್ಲ. ಈ ಯೋಜನೆಯಿಂದ ತಮಿಳುನಾಡಿಗೇ ಹೆಚ್ಚು ಲಾಭವಾಗಲಿದೆ. ರಾಜ್ಯದ ಜನರ ಪ್ರಾರ್ಥನೆ, ಜನರ ಕಷ್ಟಕ್ಕೆ ನ್ಯಾಯಾಲಯ ಸ್ಪಂದಿಸಿದೆ” ಎಂದು ತಿಳಿಸಿದರು.
“ನ್ಯಾಯಾಲಯಗಳ ತೀರ್ಮಾನದಂತೆ ತಮಿಳುನಾಡು ತನ್ನ ಪಾಲಿನ ನೀರನ್ನು ಪಡೆಯಲಿದೆ. ಹೀಗಾಗಿ ನಾವು ಈ ಯೋಜನೆ ಮುಂದುವರಿಸಿಕೊಂಡು ಹೋಗುತ್ತೇವೆ. ಈ ಯೋಜನೆಯನ್ನು ನಮ್ಮ ನೆಲದಲ್ಲಿ, ನಮ್ಮ ಹಣದಲ್ಲಿ ಮಾಡಲಾಗುತ್ತಿದೆ. ನೀರಿನ ಕೊರತೆ ಉಂಟಾದಾಗ ತಮಿಳುನಾಡಿಗೆ ನೀರು ಹರಿಸಲು ಈ ಸಮತೋಲಿತ ಅಣೆಕಟ್ಟೆ ನೆರವಾಗಲಿದೆ. ಇದು ಬೆಂಗಳೂರಿಗರ ಗೆಲುವು. ತಮಿಳುನಾಡು ಸೇರಿದಂತೆ ಬೇರೆ ರಾಜ್ಯಗಳಿಂದ ಬರುವ ಜನರಿಗೂ ನೀರು ಒದಗಿಸಲಾಗುವುದು. ಈಗಲಾದರೂ ಯೋಜನೆಗೆ ಸಹಕಾರ ನೀಡಿ ಎಂದು ತಮಿಳುನಾಡಿಗೆ ಮನವಿ ಮಾಡುತ್ತೇನೆ. ನಾವೆಲ್ಲರೂ ಮಾನವೀಯತೆ ದೃಷ್ಟಿಯಿಂದ ಒಟ್ಟಾಗಿ ಕೆಲಸ ಮಾಡೋಣ” ಎಂದು ಕರೆ ನೀಡಿದರು.

*ಸಹಕಾರ ನೀಡದೇ ಸಿಡಬ್ಲ್ಯೂಸಿ ಮುಂದೆ ಬೇರೆ ಆಯ್ಕೆಯೇ ಇಲ್ಲ:*
ನ್ಯಾಯಾಲಯವು ಇಂತಹ ವಿಚಾರದಲ್ಲಿ ಕೇಂದ್ರ ಜಲ ಆಯೋಗಕ್ಕೆ (ಸಿಡಬ್ಲ್ಯೂಸಿ)ಗೆ ಮಾರ್ಗದರ್ಶನ ನೀಡಲಿದ್ದು, ನ್ಯಾಯಾಲಯ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಹೇಳಿದೆ. ಸಿಡಬ್ಲ್ಯೂಸಿ ಈ ಯೋಜನೆಗೆ ಸಹಕಾರ ನೀಡುವುದೇ ಎಂದು ಮಾಧ್ಯಮದವರು ಕೇಳಿದಾಗ, “ಈ ಯೋಜನೆಗೆ ಅನುಮತಿ ನೀಡದೇ ಬೇರೆ ಆಯ್ಕೆ ಅವರ ಮುಂದೆ ಇಲ್ಲ. ಅವರು ನ್ಯಾಯ ಒದಗಿಸಿಕೊಡಲೇಬೇಕು” ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು