8:16 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಸುರಕ್ಷತಾ ಪರಿಕರ ಧರಿಸದೆ ಚರಂಡಿ ಸ್ವಚ್ಛತೆ!: ನಂಜನಗೂಡಿನಲ್ಲಿ ಪೌರ ಕಾರ್ಮಿಕರಿಗೆ ರಕ್ಷಣೆ ಎಲ್ಲಿದೆ? ಶಾಸಕರೇ, ಜಿಲ್ಲಾಧಿಕಾರಿಗಳೇ ಏನು ಮಾಡುತ್ತಿದ್ದೀರಿ?

13/12/2023, 21:06

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಸುರಕ್ಷತಾ ಪರಿಕರಗಳನ್ನ ಧರಿಸದೆ ಪೌರ ಕಾರ್ಮಿಕ ಚರಂಡಿ ಸ್ವಚ್ಛಗೊಳಿಸುತ್ತಿರುವ ಘಟನೆ ನಂಜನಗೂಡಿನಲ್ಲಿ ಬೆಳಕಿಗೆ ಬಂದಿದೆ.
ಸ್ವಚ್ಛತೆ ಕಾರ್ಯ ನಡೆಸುವ ವೇಳೆ ಬಳಸುವ ಪರಿಕರಗಳನ್ನ ಧರಿಸದೆ ಪೌರ ಕಾರ್ಮಿಕನೊಬ್ಬ ಚರಂಡಿ ಸ್ವಚ್ಛಗೊಳಿಸುತ್ತಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ. ಸ್ವಚ್ಛತೆ ಕಾರ್ಯ ನಡೆಸುವ ವೇಳೆ ಬಳಸುವ ಪರಿಕರಗಳನ್ನ ಧರಿಸಬೇಕೆಂಬ ಕಡ್ಡಾಯ ನಿಯಮವಿದ್ದರೂ ಅದನ್ನು ಗಾಳಿಗೆ ತೂರಿ ಬರಿಗೈಯಲ್ಲೇ ಸ್ವಚ್ಛ ಮಾಡುತ್ತಿರುವ ಪೌರ ಕಾರ್ಮಿಕ ಪ್ರಸ್ತುತವಿರುವ ನಂಜನಗೂಡು ನಗರಸಭೆಯ ದುರ್ವ್ಯವಸ್ಥೆಗೆ ಕೈಗನ್ನಡಿಯಾಗಿದ್ದಾನೆ. ಆರೋಗ್ಯದ ದೃಷ್ಟಿಯಿಂದ ರಕ್ಷಾ ಕವಚಗಳನ್ನ ಬಳಸಬೇಕೆಂದು ಕಡ್ಡಾಯ ನಿಯಮವಿದೆ ಆದ್ರೆ ದಕ್ಷಿಣ ಕಾಶಿ ನಂಜನಗೂಡಿನ ಈ ಪೌರ ಕಾರ್ಮಿಕ ಯಾವುದೇ ಪರಿಕರಗಳನ್ನ ಧರಿಸದೆ ರಾಜಾರೋಷವಾಗಿ ಚರಂಡಿಗೆ ಇಳಿದು ಸ್ವಚ್ಛಗೊಳಿಸುವ ಮೂಲಕ ನಂಜನಗೂಡಿನ ನಗರಸಭಾ ಆಡಳಿತ ಕಾರ್ಯವೈಖರಿಯನ್ನ ಅಣಕಿಸುವಂತೆ ಮಾಡಿದೆ.


ನಂಜನಗೂಡು ಪಟ್ಟಣದ ಆರ್‌ಪಿ ರಸ್ತೆಯ 12ನೆಯ ತಿರುವಿನಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆಯನ್ನು ಸ್ವಚ್ಛಗೊಳಿಸುವ ವೇಳೆ ಬಾಯಿಗೆ ಮಾಸ್ಕ್ ಧರಿಸಿಲ್ಲ, ಕೈಗೆ ಗ್ಲೌಸ್ ಹಾಕಿಲ್ಲ, ಕಾಲಿಗೆ ಬೂಟ್ ಗಳು ಇಲ್ಲವೇ ಇಲ್ಲ ಹೀಗಿದ್ದೂ ಹಾಡುಹಗಲೇ ಸ್ವಚ್ಛತೆಗೆ ಮುಂದಾಗಿರುವುದು ತಲೆತಗ್ಗಿಸುವ ವಿಚಾರವಾಗಿದೆ. ಪ್ರಸ್ತುತ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರೇ ನಂಜನಗೂಡು ನಗರ ಸಭೆಯ ಆಡಳಿತ ಅಧಿಕಾರಿಯಾಗಿದ್ದಾರೆ. ತುಕ್ಕು ಹಿಡಿದಿರುವ ನಂಜನಗೂಡು ನಗರಸಭಾ ಅಧಿಕಾರಿಗಳಿಗೆ ಸರ್ಜರಿ ಮಾಡಿ ಪೌರ ಕಾರ್ಮಿಕರ ಆರೋಗ್ಯವನ್ನು ಕಾಪಾಡುವಲ್ಲಿ ಮುಂದಾಗ ಬೇಕಿದೆ. ಪೌರಕಾರ್ಮಿಕರ ಜೀವ ರಕ್ಷಣೆಗಾಗಿ ಸಾಕಷ್ಟು ಸಲಕರಣೆಗಳು ವಿವಿಧ ಬಗೆಯ ಹೈಟೆಕ್ ಸೇಫ್ಟಿ ಪದಾರ್ಥಗಳನ್ನು ಪೌರಕಾರ್ಮಿಕರಿಗೆ ನೀಡುತ್ತೇವೆ ಎಂಬುದು ಕೇವಲ ಬಾಯಿಮಾತು ಹಾಗು ದಾಖಲಾತಿ ಪತ್ರಗಳಲ್ಲಿ ಮಾತ್ರ ಉಳಿಯುತ್ತಿದೆ. ಆದರೆ ವಾಸ್ತವವಾಗಿ ಸ್ವಚ್ಛತಾ ಪರಿಕರ ಮತ್ತು ಪೌರಕಾರ್ಮಿಕರ ಹೆಸರಿನಲ್ಲಿ ಬಿಡುಗಡೆಯಾಗುವ ಹಣ ಯಾರ ಜೇಬು ಸೇರುತಿದೆ ಎಂಬುದು ಯಕ್ಷಪ್ರಶ್ನೆಯಾಗುತ್ತಿದೆ..?

ಇತ್ತೀಚಿನ ಸುದ್ದಿ

ಜಾಹೀರಾತು