9:28 AM Monday17 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ಸುರತ್ಕಲ್ ಬೀದಿಬದಿ ವ್ಯಾಪಾರಸ್ಥರ ವಲಯ ಸಮಾವೇಶ: ದಾಳಿ, ದಬ್ಬಾಳಿಕೆ ವಿರುದ್ಧ ನಿರ್ಣಯ

14/09/2024, 23:20

ಸುರತ್ಕಲ್(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸುರತ್ಕಲ್ ವಲಯ ಮಟ್ಟದ ಬೀದಿಬದಿ ವ್ಯಾಪಾರಿಗಳ ಸಮಾವೇಶವು ಸುರತ್ಕಲ್ ನ ಕರ್ನಾಟಕ ಸೇವಾ ವೃಂದದ ವೇದಿಕೆಯಲ್ಲಿ ಜರುಗಿತು.
ಸಂಘದ ಗೌರವಾಧ್ಯಕ್ಷರಾದ ಬಿ.ಕೆ. ಇಮ್ತಿಯಾಜ್ ಸಮಾವೇಶ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಬೀದಿ ವ್ಯಾಪಾರಿಗಳ ಬದುಕುವ ಹಕ್ಕಿನ ಮೇಲೆ ದಾಳಿ ಮಾಡಲಾಗಿದೆ.


ದೂರದೃಷ್ಟಿತ್ವದ ಯೋಜನೆ, ಯೋಚನೆಗಳಿಲ್ಲದೆ ಟೈಗರ್ ಕಾರ್ಯಾಚರಣೆ ನಡೆಸಲಾಗಿದೆ. ಬೀದಿ ವ್ಯಾಪಾರ ವಲಯ ಘೋಷಣೆ ಮಾಡುವಾಗ ಬೀದಿ ವ್ಯಾಪಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಅವೈಜ್ಞಾನಿಕವಾಗಿ ವಲಯ ಸ್ಥಾಪನೆಗೆ ಮುಂದಾಗಿದ್ದಾರೆ.
ಸುರತ್ಕಲ್ ವಲಯ ವ್ಯಾಪ್ತಿಯಲ್ಲಿ 100ಕ್ಕೂ ಅಧಿಕ ಬೀದಿ ವ್ಯಾಪಾರಿಗಳಿದ್ದಾರೆ ಅವರಿಗಾಗಿ ಮಹಾನಗರ ಪಾಲಿಕೆಯ ಸುರತ್ಕಲ್ ವಲಯ -1 ಆಯುಕ್ತರ ಅಧ್ಯಕ್ಷತೆಯಲ್ಲಿ ಪಟ್ಟಣ ವ್ಯಾಪಾರ ಸಮಿತಿ ರಚನೆ ಮಾಡಬೇಕೆಂದು ಆಗ್ರಹಿಸಿದರು.ಟೈಗರ್ ಕಾರ್ಯಾಚರಣೆಯಲ್ಲಿ ವಶಪಡಿಸಲಾದ ಸರಕನ್ನು ವಾಪಸ್ ಕೊಡಬೇಕು, ಹಾನಿಗೊಳಗಾದ ವಸ್ತುಗಳಿಗೆ ಪರಿಹಾರ ನೀಡಿ ಸಮರ್ಪಕ ಬೀದಿ ವ್ಯಾಪಾರ ವಲಯ ರಚನೆ ಆಗುವವರೆಗೆ ಯಥಾಸ್ಥಿತಿ ವ್ಯಾಪಾರ ಮಾಡಲು ಅವಕಾಶ ನೀಡಬೇಕೆಂದು ಒತ್ತಾಯಿಸಿದರು.
ಸಂಘದ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಸಂತೋಷ್ ಆರ್. ಎಸ್. , ಅಧ್ಯಕ್ಷರಾದ ಮುಜಾಫರ್ ಅಹ್ಮದ್ ಮಾತನಾಡಿದರು.
ಸಂಘದ ಹಿರಿಯ ಸದಸ್ಯರಾದ ಧನಂಜಯ ಸುರತ್ಕಲ್ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ವಿಜಯ್, ಭಾಸ್ಕರ್ ತಡಂಬೈಲ್, ಶೈಲಾ ಸಿಕ್ವೇರಾ, ಫೆಲಿಕ್ಸ್ ನಜರತ್, ಸಲಾಂ ಜನತಾಕಾಲನಿ, ಅಜೀಜ್ ಕೃಷ್ಣಾಪುರ, ಬಾಲಕೃಷ್ಣ, ಮೊಯ್ದಿನ್ ಎಂ ಎಸ್ ಬೈಕಂಪಾಡಿ, ಹರೀಶ್ ಬೈಕಂಪಾಡಿ,ಯಲ್ಲನ ಗೌಡ ಮುಂತಾದವರು ಉಪಸ್ಥಿತರಿದ್ದರು.ಹನೀಫ್ ಇಡ್ಯಾ ಸ್ವಾಗತಿಸಿ, ವಂದಿಸಿದರು.
ಸಮಾವೇಶದಲ್ಲಿ ಈ ಕೆಳಕಂಡ ನಿರ್ಣಯ ಕೈಗೊಳ್ಳಲಾಯಿತು
1. ಮಹಾನಗರ ಪಾಲಿಕೆಯ ಸುರತ್ಕಲ್ ವಲಯ-1 ರ ವ್ಯಾಪ್ತಿಯ ಎಲ್ಲಾ ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸಿ ಪ್ರತ್ಯೇಕ ಪಟ್ಟಣ ವ್ಯಾಪಾರ ಸಮಿತಿ ರಚಿಸುವುದು.
2. ⁠667ರ ಪಟ್ಟಿಯಲ್ಲಿರುವ ಸುರತ್ಕಲ್ ವ್ಯಾಪ್ತಿಯ ಬೀದಿ ವ್ಯಾಪಾರಿಗಳಿಗೆ ಕೂಡಲೇ ಐಡಿ ಕಾರ್ಡ್ ವಿತರಿಸಬೇಕು.
3. ಸುರತ್ಕಲ್ ವ್ಯಾಪ್ತಿಯಲ್ಲಿ ವೈಜ್ಞಾನಿಕವಾಗಿ ವ್ಯಾಪಾರಿಸ್ನೇಹಿ, ಗ್ರಾಹಕಸ್ನೇಹಿ ಬೀದಿ ವ್ಯಾಪಾರ ವಲಯ ರಚನೆ ಮಾಡಬೇಕು
4. ಬೀದಿ ವ್ಯಾಪಾರಿಗಳ ಮೇಲಿನ ದಾಳಿ, ದಬ್ಬಾಳಿಕೆ ನಿಲ್ಲಿಸಿ ಅವರ ಬದುಕುವ ಹಕ್ಕನ್ನು ರಕ್ಷಣೆ ಮಾಡಬೇಕು ಎಂದು ಸಮಾವೇಶದಲ್ಲಿ ಆಗ್ರಹಿಸುವ ನಿರ್ಣಯ ಕೈಗೊಳ್ಳಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು