10:54 PM Monday22 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಸುರತ್ಕಲ್ ಬೀದಿಬದಿ ವ್ಯಾಪಾರಸ್ಥರ ವಲಯ ಸಮಾವೇಶ: ದಾಳಿ, ದಬ್ಬಾಳಿಕೆ ವಿರುದ್ಧ ನಿರ್ಣಯ

14/09/2024, 23:20

ಸುರತ್ಕಲ್(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸುರತ್ಕಲ್ ವಲಯ ಮಟ್ಟದ ಬೀದಿಬದಿ ವ್ಯಾಪಾರಿಗಳ ಸಮಾವೇಶವು ಸುರತ್ಕಲ್ ನ ಕರ್ನಾಟಕ ಸೇವಾ ವೃಂದದ ವೇದಿಕೆಯಲ್ಲಿ ಜರುಗಿತು.
ಸಂಘದ ಗೌರವಾಧ್ಯಕ್ಷರಾದ ಬಿ.ಕೆ. ಇಮ್ತಿಯಾಜ್ ಸಮಾವೇಶ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಬೀದಿ ವ್ಯಾಪಾರಿಗಳ ಬದುಕುವ ಹಕ್ಕಿನ ಮೇಲೆ ದಾಳಿ ಮಾಡಲಾಗಿದೆ.


ದೂರದೃಷ್ಟಿತ್ವದ ಯೋಜನೆ, ಯೋಚನೆಗಳಿಲ್ಲದೆ ಟೈಗರ್ ಕಾರ್ಯಾಚರಣೆ ನಡೆಸಲಾಗಿದೆ. ಬೀದಿ ವ್ಯಾಪಾರ ವಲಯ ಘೋಷಣೆ ಮಾಡುವಾಗ ಬೀದಿ ವ್ಯಾಪಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಅವೈಜ್ಞಾನಿಕವಾಗಿ ವಲಯ ಸ್ಥಾಪನೆಗೆ ಮುಂದಾಗಿದ್ದಾರೆ.
ಸುರತ್ಕಲ್ ವಲಯ ವ್ಯಾಪ್ತಿಯಲ್ಲಿ 100ಕ್ಕೂ ಅಧಿಕ ಬೀದಿ ವ್ಯಾಪಾರಿಗಳಿದ್ದಾರೆ ಅವರಿಗಾಗಿ ಮಹಾನಗರ ಪಾಲಿಕೆಯ ಸುರತ್ಕಲ್ ವಲಯ -1 ಆಯುಕ್ತರ ಅಧ್ಯಕ್ಷತೆಯಲ್ಲಿ ಪಟ್ಟಣ ವ್ಯಾಪಾರ ಸಮಿತಿ ರಚನೆ ಮಾಡಬೇಕೆಂದು ಆಗ್ರಹಿಸಿದರು.ಟೈಗರ್ ಕಾರ್ಯಾಚರಣೆಯಲ್ಲಿ ವಶಪಡಿಸಲಾದ ಸರಕನ್ನು ವಾಪಸ್ ಕೊಡಬೇಕು, ಹಾನಿಗೊಳಗಾದ ವಸ್ತುಗಳಿಗೆ ಪರಿಹಾರ ನೀಡಿ ಸಮರ್ಪಕ ಬೀದಿ ವ್ಯಾಪಾರ ವಲಯ ರಚನೆ ಆಗುವವರೆಗೆ ಯಥಾಸ್ಥಿತಿ ವ್ಯಾಪಾರ ಮಾಡಲು ಅವಕಾಶ ನೀಡಬೇಕೆಂದು ಒತ್ತಾಯಿಸಿದರು.
ಸಂಘದ ಜಿಲ್ಲಾ ಸಮಿತಿ ಪ್ರಧಾನ ಕಾರ್ಯದರ್ಶಿ ಸಂತೋಷ್ ಆರ್. ಎಸ್. , ಅಧ್ಯಕ್ಷರಾದ ಮುಜಾಫರ್ ಅಹ್ಮದ್ ಮಾತನಾಡಿದರು.
ಸಂಘದ ಹಿರಿಯ ಸದಸ್ಯರಾದ ಧನಂಜಯ ಸುರತ್ಕಲ್ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ವಿಜಯ್, ಭಾಸ್ಕರ್ ತಡಂಬೈಲ್, ಶೈಲಾ ಸಿಕ್ವೇರಾ, ಫೆಲಿಕ್ಸ್ ನಜರತ್, ಸಲಾಂ ಜನತಾಕಾಲನಿ, ಅಜೀಜ್ ಕೃಷ್ಣಾಪುರ, ಬಾಲಕೃಷ್ಣ, ಮೊಯ್ದಿನ್ ಎಂ ಎಸ್ ಬೈಕಂಪಾಡಿ, ಹರೀಶ್ ಬೈಕಂಪಾಡಿ,ಯಲ್ಲನ ಗೌಡ ಮುಂತಾದವರು ಉಪಸ್ಥಿತರಿದ್ದರು.ಹನೀಫ್ ಇಡ್ಯಾ ಸ್ವಾಗತಿಸಿ, ವಂದಿಸಿದರು.
ಸಮಾವೇಶದಲ್ಲಿ ಈ ಕೆಳಕಂಡ ನಿರ್ಣಯ ಕೈಗೊಳ್ಳಲಾಯಿತು
1. ಮಹಾನಗರ ಪಾಲಿಕೆಯ ಸುರತ್ಕಲ್ ವಲಯ-1 ರ ವ್ಯಾಪ್ತಿಯ ಎಲ್ಲಾ ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸಿ ಪ್ರತ್ಯೇಕ ಪಟ್ಟಣ ವ್ಯಾಪಾರ ಸಮಿತಿ ರಚಿಸುವುದು.
2. ⁠667ರ ಪಟ್ಟಿಯಲ್ಲಿರುವ ಸುರತ್ಕಲ್ ವ್ಯಾಪ್ತಿಯ ಬೀದಿ ವ್ಯಾಪಾರಿಗಳಿಗೆ ಕೂಡಲೇ ಐಡಿ ಕಾರ್ಡ್ ವಿತರಿಸಬೇಕು.
3. ಸುರತ್ಕಲ್ ವ್ಯಾಪ್ತಿಯಲ್ಲಿ ವೈಜ್ಞಾನಿಕವಾಗಿ ವ್ಯಾಪಾರಿಸ್ನೇಹಿ, ಗ್ರಾಹಕಸ್ನೇಹಿ ಬೀದಿ ವ್ಯಾಪಾರ ವಲಯ ರಚನೆ ಮಾಡಬೇಕು
4. ಬೀದಿ ವ್ಯಾಪಾರಿಗಳ ಮೇಲಿನ ದಾಳಿ, ದಬ್ಬಾಳಿಕೆ ನಿಲ್ಲಿಸಿ ಅವರ ಬದುಕುವ ಹಕ್ಕನ್ನು ರಕ್ಷಣೆ ಮಾಡಬೇಕು ಎಂದು ಸಮಾವೇಶದಲ್ಲಿ ಆಗ್ರಹಿಸುವ ನಿರ್ಣಯ ಕೈಗೊಳ್ಳಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು