1:02 AM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಸುರತ್ಕಲ್: ಬಿಹಾರ ಮೂಲದ ಎನ್ ಐಟಿಕೆ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ; ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣು 

26/12/2021, 17:13

ಮಂಗಳೂರು(reporterkarnataka.com): ಎನ್ ಐಟಿಕೆ ದ್ವಿತೀಯ ವರ್ಷದ ವಿದ್ಯಾರ್ಥಿ ಸೌರವ್ (20)ಎಂಬಾತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಭಾನುವಾರ ನಡೆದಿದೆ.

ವಿದ್ಯಾರ್ಥಿ ಡೆತ್‌ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ತನ್ನ ದೇಹದಲ್ಲಿ ಕೆಮಿಕಲ್ ರಿಯಾಕ್ಷನ್ ಆಗುತ್ತಿದ್ದು, ತನಗೆ ನೌಕರಿ ಸಿಗುತ್ತದೆಯೋ, ಇಲ್ಲವೋ ಗೊತ್ತಿಲ್ಲ. ಎಜುಕೇಶನ್ ಲೋನ್ ಮಾಡಿ ಕಲಿಯುತ್ತಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿದ್ದಾನೆ. 

ಬೆಳಗ್ಗೆ 8 ಗಂಟೆಯ ವೇಳೆಗೆ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ. ಸಹಪಾಠಿಗಳು ಬೆಳಗ್ಗೆ 9 ಗಂಟೆಗೆ ಬಾಗಿಲು ಬಡಿದಾಗ ಆತ ಬಾಗಿಲು ತೆರೆಯಲಿಲ್ಲ. ಮತ್ತೆ 11 ಗಂಟೆಗೆ ಕಿಟಕಿ ತೆರೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಬೆಳಕಿಗೆ ಬಂದಿದೆ.

ಬಿಹಾರದ ಪಾಟ್ನಾದ ವಿದ್ಯಾರ್ಥಿಯಾದ ಈತನ ಹೆತ್ತವರಿಗೆ ವಿಷಯ ತಿಳಿಸಲಾಗಿದ್ದು, ತಾವು ಬಡವರು ಬಿಹಾರದಿಂದ ಬರಲು ತಮ್ಮಲ್ಲಿ ದುಡ್ಡಿಲ್ಲ. ಅಲ್ಲೇ ಮೃತದೇಹದ ಅಂತ್ಯಸಂಸ್ಕಾರ ನಡೆಸಿ ಎಂದು ತಿಳಿಸಿದ್ದರು. ಆದರೆ ಎನ್ ಐಟಿಕೆ ಉಪನ್ಯಾಸಕರ ಹಾಗೂ ವಿದ್ಯಾರ್ಥಿಗಳ ವೃಂದ ಸೇರಿ ಮೃತದೇಹವನ್ನು ಪಾಟ್ನಾಕ್ಕೆ ಕೊಂಡೊಯ್ಯುವ ವ್ಯವಸ್ಥೆ ಮಾಡಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ಮೃತ ಸೌರವ್ ​ ಇಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ.

ಇತ್ತೀಚಿನ ಸುದ್ದಿ

ಜಾಹೀರಾತು