2:57 PM Saturday16 - August 2025
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.…

ಇತ್ತೀಚಿನ ಸುದ್ದಿ

ಸುರತ್ಕಲ್ ಬೃಹತ್ ಮಾರುಕಟ್ಟೆ ಕಾಮಗಾರಿ ಪುನರಾರಂಭ: ಶಾಸಕ ಡಾ. ಭರತ್ ಶೆಟ್ಟಿ

15/07/2024, 21:17

ಸುರತ್ಕಲ್(reporterkarnataka.com): ಸುರತ್ಕಲ್ ನಲ್ಲಿ ಬಹುಕೋಟಿ ವೆಚ್ಚದ ಮಾರುಕಟ್ಟೆ ನಿರ್ಮಾಣ ಕಾಮಗಾರಿಯು ಕೊರೋನಾ ಬಳಿಕ ಮಾರುಕಟ್ಟೆಯಲ್ಲಿ ಸರಕು ದರ ಏರಿಕೆ ಹಾಗೂ ಜಿಎಸ್‌ಟಿಯನ್ನು ಟೆಂಡರ್ ನಲ್ಲಿ ತೋರಿಸದ ಹಿನ್ನಲೆಯಲ್ಲಿ ಕಾಮಗಾರಿ ಹಿನ್ನಡೆ ಕಂಡಿದ್ದು
ಸತತ ಪ್ರಯತ್ನದ ಬಳಿಕ ಇದೀಗ 64 ಕೋಟಿ ವೆಚ್ಚದಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ಡಾ. ಭರತ್ ಶೆಟ್ಟಿ ವೈ ತಿಳಿಸಿದ್ದಾರೆ.
ಕಳೆದ ಬಾರಿ ಅಂದಾಜು 16 ಕೋಟಿಯ ಕಾಮಗಾರಿ ನಡೆದಿತ್ತು.
ಬಳಿಕ ಗುತ್ತಿಗೆದಾರರು ಎಸ್ ಆರ್ ದರ ಹಾಗೂ ಜಿಎಸ್ ಟಿ ಯನ್ನು ಟೆಂಡರ್ ನಲ್ಲಿ ತೋರಿಸದ ಕಾರಣ ಭಾರಿ ನಷ್ಟವಾಗುತ್ತದೆ ಎಂದು ಕಾಮಗಾರಿ ನಡೆಸಲು ಹಿಂದೆ ಸರಿದಿದ್ದರು.
ಇದೀಗ ತಾನು ಸತತವಾಗಿ ಈ ಹಿಂದಿನ ಬಿಜೆಪಿ ಸರಕಾರವಿದ್ದಾಗ ಹಣಕಾಸು ಇಲಾಖೆ , ನಗರಾಭಿವೃದ್ಧಿ ಸಚಿವರಲ್ಲಿ ಮನವಿ ಮಾಡಿಕೊಂಡಿದ್ದ ಮೇರೆಗೆ ಟೆಂಡರ್ ನಡೆಸುವ ಪ್ರಾಥಮಿಕ ಹೆಜ್ಜೆ ಇರಿಸಲಾಗಿತ್ತು.
ಬದಲಾದ ಸರಕಾರದಲ್ಲಿ ಈಗಿನ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಲ್ಲಿ ಖುದ್ದಾಗಿ ಭೇಟಿ ನೀಡಿ ಮಾಡಿದ ಮನವಿಗೆ ಸ್ಪಂದಿಸಿದ್ದು,ಆರ್ಥಿಕ ಇಲಾಖೆಯು ಕೂಡ ಅನುಮೋದನೆ ನೀಡಿದ್ದು ಟೆಂಡರ್ ನೀಡಲಾಗಿದೆ. ಸರಕಾರವು ವಿಳಂಬ ಮಾಡದೆ
ಗುತ್ತಿಗೆದಾರರಿಗೆ ಅನುಮತಿ ಪತ್ರ ನೀಡಿದ ತಕ್ಷಣ ಕಾಮಗಾರಿ ಆರಂಭವಾಗಲಿದೆ.ಎಂದು ಭರತ್ ಶೆಟ್ಟಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು