4:01 AM Monday9 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಸುರತ್ಕಲ್ ಗೋವಿಂದ ದಾಸ ಪಿಯು ಕಾಲೇಜಿನಲ್ಲಿ ಬೃಹತ್ ಲಸಿಕಾ ಶಿಬಿರ

12/07/2021, 08:39

ಸುರತ್ಕಲ್ (reporterkarnataka news): ಇಲ್ಲಿನ ಗೋವಿಂದ ದಾಸ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಕುಳಾಯಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ ಬೃಹತ್ ಲಸಿಕಾ ಶಿಬಿರ ಕಾಲೇಜಿನಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಹಿಂದೂ ವಿದ್ಯಾದಾಯಿನೀ ಸಂಘದ ಉಪಾಧ್ಯಕ್ಷ ಪ್ರೊ.ವೈ.ವಿ.ರತ್ನಾಕರ ರಾವ್, ಗೋವಿಂದ ದಾಸ ಕಾಲೇಜಿನ ಪ್ರಾಂಶುಪಾಲರ ಪ್ರೊ.ಕೃಷ್ಣಮೂರ್ತಿ ಪಿ ಹಾಗೂ ಪದವಿ ಪೂರ್ವ ಕಾಲೇಜಿನ ಪ್ರಾಂಶಪಾಲರಾದ ಲಕ್ಷ್ಮೀ ಪಿ. ಶುಭ ಹಾರೈಸಿದರು.

ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ.ಸುಜಯ್ ಭಂಡಾರಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ನಿಶ್ಚಿತ ಹಾಗೂ ಕೇಂದ್ರದ ಸಿಬ್ಬಂದಿಗಳನ್ನು ಗೌರವಿಸಲಾಯಿತು. ಆಯೋಜಕರಾದ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಪೈಕ ವೆಂಕಟರಮಣ ರಾವ್, ಉಪನ್ಯಾಸಕರಾದ ಡಾ.ಚೇತನಾ ಬಿ.ಕೆ., ಜಯಂತಿ ಅಮೀನ್, ಸಹಯೋಜನಾಧಿಕಾರಿಗಳಾದ ಕೃತಿ, ರಾಕೇಶ್ ಹೊಸಬೆಟ್ಟು ಉಪಸ್ಥಿತರಿದ್ದರು.

ಉಪನ್ಯಾಸಕಿ ಪಲ್ಲವಿ ರಾಜೇಶ್ ಗಣ್ಯರನ್ನು ಸ್ವಾಗತಿಸಿದರು. ಶಿಬಿರದಲ್ಲಿ ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳನ್ನು ಒಳಗೊಂಡು ಒಟ್ಟು 380 ಅಭ್ಯರ್ಥಿಗಳಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು