10:01 PM Tuesday10 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಸುರತ್ಕಲ್: ಮಂಗಳೂರು ಉತ್ತರ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಆಲಿ ಪರ ರಾಜಸ್ಥಾನ ಮುಖ್ಯಮಂತ್ರಿ ಗೆಹ್ಲೋಟ್ ರೋಡ್ ಶೋ; ಭಾರಿ ಜನಸ್ತೋಮ

02/05/2023, 23:24

ಸುರತ್ಕಲ್(reporterkarnataka.com): ಮಂಗಳೂರು ಉತ್ತರ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಆಲಿ ಅವರ ಪರವಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮಂಗಳವಾರ ಸುರತ್ಕಲ್ ನಲ್ಲಿ ಅಪಾರ ಜನಸ್ತೋಮದ ನಡುವೆ ರೋಡ್ ಶೋ ನಡೆಸಿದರು.
ಕಾನದಿಂದ ಆರಂಭಗೊಂಡ ರೋಡ್ ಶೋ ಸುರತ್ಕಲ್ ಜಂಕ್ಷನ್ ನಲ್ಲಿ ಸಮಾಪ್ತಿಗೊಂಡಿತು. ರೋಡ್ ಶೋನಲ್ಲಿ ಸಾವಿರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು, ಇನಾಯತ್ ಆಲಿ ಹಿತೈಷಿಗಳು ಪಾಲ್ಗೊಂಡಿದ್ದರು.


ಈ ಸಂದರ್ಭದಲ್ಲಿ ಮಾತನಾಡಿದ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, ಕರ್ನಾಟಕದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ.ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಇತಿಹಾಸವಿದೆ. ಎಲ್ಲರನ್ನು ಸಮಾನವಾಗಿ ಕಾಣುವ ಕಾಂಗ್ರೆಸ್ ಪಕ್ಷ ಎಂದಿಗೂ ಧರ್ಮಗಳ ನಡುವೆ ಕಂದಕ ಸೃಷ್ಟಿಸುವ ಕೆಲಸ ಮಾಡಿಲ್ಲ. ಎಲ್ಲರನ್ನು ಸಮಾನವಾಗಿ ಕಂಡಿದೆ. ಮತದಾರ ಬಾಂಧವರು ಜಾತಿ- ಮತದ ಬೇಧವಿಲ್ಲದೆ ಇನಾಯತ್ ಆಲಿ ಅವರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.
ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಆಲಿ ಅವರು ಮಾತನಾಡಿ, ಆಸ್ಕರ್ ಫೆರ್ನಾಂಡಿಸ್ ಹಾಗೂ ಜನಾರ್ದನ ಪೂಜಾರಿ ಅವರು ನನ್ನ ರಾಜಕೀಯ ಗುರುಗಳು. ಬಿಜೆಪಿ ಜತೆಗೆ ಸೇರಿಕೊಂಡು ಕೆಲವರು ನನ್ನ ವಿರುದ್ಧ ಷಡ್ಯಂತರ ನಡೆಸುತ್ತಿದ್ದಾರೆ. ನನ್ನನ್ನು ಎದುರಿಸಲಾಗದ ಬಿಜೆಪಿ ಪಕ್ಷವು ಜೆಡಿಎಸ್ ಅಭ್ಯರ್ಥಿ ಯನ್ನು ನನ್ನ ಎದುರು ಬಿಟ್ಟಿದೆ ಎಂದರು.
ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಾಲ, ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ, ಮಾಜಿ ಮೇಯರ್ ಗಳಾದ ಕವಿತಾ ಸನಿಲ್, ಶಶಿಧರ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು