6:36 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ

ಇತ್ತೀಚಿನ ಸುದ್ದಿ

ಸುರತ್ಕಲ್ ನಲ್ಲಿ ಮಿ. ದಕ್ಷಿಣ ಕನ್ನಡ-2023 ದೇಹದಾರ್ಡ್ಯ ಸ್ಪರ್ಧೆ: ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ

09/12/2023, 22:32

ಸುರತ್ಕಲ್(reporterkarnataka.com): ಝೆನ್ ಜಿಮ್ ಸುರತ್ಕಲ್ ಹಾಗೂ ದ.ಕ. ಅಶೋಸಿಯೇಷನ್ ಆಫ್ ಬಾಡಿ ಬಿಲ್ಡರ್ಸ್ ಮಂಗಳೂರು ಜಂಟಿ ಆಶ್ರಯದಲ್ಲಿ ಮಿ. ದಕ್ಷಿಣ ಕನ್ನಡ 2023 ದೇಹದಾರ್ಡ್ಯ ಸ್ಪರ್ಧೆಯನ್ನು ಶನಿವಾರ ಇಲ್ಲಿನ ಕರ್ನಾಟಕ ಸೇವಾ ವೃಂದ ಸಭಾಂಗಣದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ವೈ. ಉದ್ಘಾಟಿಸಿದರು.


ಉದ್ಘಾಟನೆ ನೆರವೇರಿಸಿ ಮಾತಾಡಿದ ಡಾ.ವೈ. ಭರತ್ ಶೆಟ್ಟಿ ಅವರು “ಬಾಡಿ ಬಿಲ್ಡರ್ಗಳಿಗೆ ನಿರ್ದಿಷ್ಟ ನಿಯಮಗಳು ಅಗತ್ಯವಾಗಿದೆ. ತೆಗೆದುಕೊಳ್ಳುವ ಆಹಾರ, ಸಪ್ಲಿಮೆಂಟ್ ಗಳಲ್ಲಿ ಸ್ವಲ್ಪ ವ್ಯತ್ಯಾಸ ಆದರೂ ದೇಹದಾರ್ಡ್ಯ ಅನ್ನುವುದು ಸುಲಭದ ಮಾತಲ್ಲ. ಇನ್ನು ಇಂತಹ ಸ್ಪರ್ಧೆ ಆಯೋಜನೆ ಮಾಡುವುದು ಕೂಡ ಕಷ್ಟ. ಯಾಕೆಂದರೆ ದೇಶದಲ್ಲಿ ಕ್ರಿಕೆಟ್ ನಂತಹ ಕ್ರೀಡೆಗಳಿಗೆ ಇರುವಷ್ಟು ಪ್ರೋತ್ಸಾಹ ಇಂತಹ ಕ್ರೀಡೆಗಳಿಗಿಲ್ಲ. ಹೀಗಿದ್ದರೂ ಪುಂಡಲೀಕ ಹೊಸಬೆಟ್ಟು ಮತ್ತವರ ತಂಡ ಸಾಕಷ್ಟು ಶ್ರಮವಹಿಸಿ ಸ್ಪರ್ಧೆಯನ್ನು ಆಯೋಜನೆ ಮಾಡಿದೆ. ಇದಕ್ಕಾಗಿ ಅವರಿಗೆ ಅಭಿನಂದನೆಗಳು. ಮುಂದೆಯೂ ಇಂತಹ ಸ್ಪರ್ಧೆ ನಿತ್ಯ ನಿರಂತರವಾಗಿ ನಡೆಯಲಿ” ಎಂದು ಶುಭ ಹಾರೈಸಿದರು.
ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಜಿ. ಶಂಕರ್ , ಸ್ಪರ್ಧಾ ಸಮಿತಿ ಅಧ್ಯಕ್ಷ ಪುಂಡಲೀಕ ಹೊಸಬೆಟ್ಟು, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು