8:05 PM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಸುರತ್ಕಲ್ ನಲ್ಲಿ ಮಿ. ದಕ್ಷಿಣ ಕನ್ನಡ-2023 ದೇಹದಾರ್ಡ್ಯ ಸ್ಪರ್ಧೆ: ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ

09/12/2023, 22:32

ಸುರತ್ಕಲ್(reporterkarnataka.com): ಝೆನ್ ಜಿಮ್ ಸುರತ್ಕಲ್ ಹಾಗೂ ದ.ಕ. ಅಶೋಸಿಯೇಷನ್ ಆಫ್ ಬಾಡಿ ಬಿಲ್ಡರ್ಸ್ ಮಂಗಳೂರು ಜಂಟಿ ಆಶ್ರಯದಲ್ಲಿ ಮಿ. ದಕ್ಷಿಣ ಕನ್ನಡ 2023 ದೇಹದಾರ್ಡ್ಯ ಸ್ಪರ್ಧೆಯನ್ನು ಶನಿವಾರ ಇಲ್ಲಿನ ಕರ್ನಾಟಕ ಸೇವಾ ವೃಂದ ಸಭಾಂಗಣದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ವೈ. ಉದ್ಘಾಟಿಸಿದರು.


ಉದ್ಘಾಟನೆ ನೆರವೇರಿಸಿ ಮಾತಾಡಿದ ಡಾ.ವೈ. ಭರತ್ ಶೆಟ್ಟಿ ಅವರು “ಬಾಡಿ ಬಿಲ್ಡರ್ಗಳಿಗೆ ನಿರ್ದಿಷ್ಟ ನಿಯಮಗಳು ಅಗತ್ಯವಾಗಿದೆ. ತೆಗೆದುಕೊಳ್ಳುವ ಆಹಾರ, ಸಪ್ಲಿಮೆಂಟ್ ಗಳಲ್ಲಿ ಸ್ವಲ್ಪ ವ್ಯತ್ಯಾಸ ಆದರೂ ದೇಹದಾರ್ಡ್ಯ ಅನ್ನುವುದು ಸುಲಭದ ಮಾತಲ್ಲ. ಇನ್ನು ಇಂತಹ ಸ್ಪರ್ಧೆ ಆಯೋಜನೆ ಮಾಡುವುದು ಕೂಡ ಕಷ್ಟ. ಯಾಕೆಂದರೆ ದೇಶದಲ್ಲಿ ಕ್ರಿಕೆಟ್ ನಂತಹ ಕ್ರೀಡೆಗಳಿಗೆ ಇರುವಷ್ಟು ಪ್ರೋತ್ಸಾಹ ಇಂತಹ ಕ್ರೀಡೆಗಳಿಗಿಲ್ಲ. ಹೀಗಿದ್ದರೂ ಪುಂಡಲೀಕ ಹೊಸಬೆಟ್ಟು ಮತ್ತವರ ತಂಡ ಸಾಕಷ್ಟು ಶ್ರಮವಹಿಸಿ ಸ್ಪರ್ಧೆಯನ್ನು ಆಯೋಜನೆ ಮಾಡಿದೆ. ಇದಕ್ಕಾಗಿ ಅವರಿಗೆ ಅಭಿನಂದನೆಗಳು. ಮುಂದೆಯೂ ಇಂತಹ ಸ್ಪರ್ಧೆ ನಿತ್ಯ ನಿರಂತರವಾಗಿ ನಡೆಯಲಿ” ಎಂದು ಶುಭ ಹಾರೈಸಿದರು.
ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾಡೋಜ ಜಿ. ಶಂಕರ್ , ಸ್ಪರ್ಧಾ ಸಮಿತಿ ಅಧ್ಯಕ್ಷ ಪುಂಡಲೀಕ ಹೊಸಬೆಟ್ಟು, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು