ಇತ್ತೀಚಿನ ಸುದ್ದಿ
ಸುರತ್ಕಲ್ ಟೋಲ್ ಗೇಟ್ ಸುತ್ತಮುತ್ತಲಿನ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ
28/10/2022, 11:19

ಮಂಗಳೂರು(reporterkarnataka.com):ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಟೋಲ್ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಕಮಿಷನರ್ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.
ಶುಕ್ರವಾರ (ಇಂದು) ಬೆಳಿಗ್ಗೆ 6ರಿಂದ ನವಂಬರ್ 3ರ ಸಂಜೆ 6 ಗಂಟೆಯ ತನಕ ಸುರತ್ಕಲ್ ಪೊಲೀಸ್ ಠಾಣೆಯ ಟೋಲ್ ಪ್ಲಾಜಾದ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಸಾರ್ವಜನಿಕ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ದೃಷ್ಠಿಯಿಂದ ಹಾಗೂ ಟೋಲ್ ಗೇಟ್ ಗೆ ರಕ್ಷಣೆ ನೀಡುವ ದೃಷ್ಟಿಯಿಂದ ಸೆಕ್ಷನ್ ಜಾರಿಗೊಳಿಸಲಾಗಿದೆ ಎಂದು ಕಮಿಷನರ್ ಹೇಳಿದ್ದಾರೆ.
ನಿಷೇಧಾಜ್ಞೆ ಜಾರಿಯಲ್ಲಿರುವ ಭಾಗದಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಘೋಷಣೆಗಳನ್ನು ಕೂಗುವುದು, ಭಿತ್ತಿ ಪತ್ರ ಪ್ರದರ್ಶನ, ಶಸ್ತ್ರಗಳನ್ನು ಕೊಂಡೊಯ್ಯುವುದು, ಪಟಾಕಿ ಸಿಡಿಸುವುದು,ಮೆರವಣಿಗೆ, ಜಾಥಾ, ರಸ್ತೆ ತಡೆ ನಡೆಸಲು ಅವಕಾಶವಿಲ್ಲ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.