1:19 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಸುರತ್ಕಲ್ ಟೋಲ್ ಗೇಟ್ ಬಿಜೆಪಿ ಆಡಳಿತದ ಜನದ್ರೋಹವನ್ನು ಬಯಲಿಗೆಳೆದಿದೆ: ಮುನೀರ್ ಕಾಟಿಪಳ್ಳ

14/10/2022, 10:57

ಮಂಗಳೂರು(reporterkarnataka.com): ಸುರತ್ಕಲ್ ಅಕ್ರಮ ಟೋಲ್ ಗೇಟ್ ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸಮಸ್ತದ ಜ‌ನಸಮೂಹದ ಹೋರಾಟವಾಗಿ ಪರಿವರ್ತನೆಗೊಂಡಿದೆ. ಟೋಲ್ ಗೇಟ್ ತೆರವಿನ ನಿರ್ಧಾರದ ಹೊರತಾಗಿಯೂ ಟೋಲ್ ಸಂಗ್ರಹ ಮುಂದುವರಿದಿರುವು ಬಿಜೆಪಿ ಸಂಸದ, ಶಾಸಕರು ನವಯುಗ್ ನಂತಹ ಬಂಡವಾಳಶಾಹಿಗಳ ಹಿತಾಸಕ್ತಿಗಳ ಪರವಾಗಿ ಕೆಲಸ ಮಾಡುತ್ತಿರುವುದರ ಫಲ. ಒಟ್ಟಾರೆ ಬಿಜೆಪಿ ಆಡಳಿತದ ಜನದ್ರೋಹತನವ‌ನ್ನು ಸುರತ್ಕಲ್ ಟೋಲ್ ಸುಲಿಗೆ ಬಹಿರಂಗಗೊಳಿಸಿದೆ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಆರೋಪಿಸಿದರು‌‌.


ಅವರು ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಹಳೇಬಂದರು ಸಗಟು ಮಾರುಕಟ್ಟೆಯ ಹಮಾಲಿ ಕಾರ್ಮಿಕರು ಅಕ್ಟೋಬರ್ 18ರ ಟೋಲ್ ಗೇಟ್ ಮುತ್ತಿಗೆ ಬೆಂಬಲಿಸಿ ನಡೆಸಿದ ಮೆರವಣಿಗೆಯ‌ನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೋಗ್ಯ, ಶಿಕ್ಷಣ ಎರಡನ್ನೂ ಮಾರಾಟಕ್ಕಿಟ್ಟಿರುವ, ಸ್ಥಳೀಯರಿಗೆ ಉದ್ಯೋಗ ಸೃಷ್ಟಿಸದ, ಟೋಲ್ ಮಾಫಿಯಾಗಳ ರಕ್ಷಣೆಗೆ ನಿಲ್ಲುವ ಬಿಜೆಪಿ ಸರಕಾರ ಇಲ್ಲಿನ ಶಾಸಕರುಗಳು ಶ್ರಮಜೀವಿ ಜನರನ್ನು ಧರ್ಮದ ಆಧಾರದಲ್ಲಿ ವಿಭಜಿಸಿ ರಾಜಕೀಯ ಲಾಭ ಪಡೆದುಕೊಳ್ಳುತ್ತಾರೆ. ಜನತೆ ಇಂತಹ ಪಿತೂರಿಗಳಿಗೆ ಬಲಿಯಾಗದೆ ಜನಪರ ಹೋರಾಟಗಳನ್ನು ಬೆಂಬಲಿಸಬೇಕು ಎಂದು ವಿನಂತಿಸಿದರು.


ಸ್ಥಳೀಯ ನಗರಪಾಲಿಕೆ ಸದಸ್ಯ ಅಬ್ದುಲ್ ಲತೀಫ್ ಕಂದಕ್, ಬಂದರು ಶ್ರಮಿಕರ ಸಂಘದ ಅಧ್ಯಕ್ಷರಾದ ವಿಲ್ಲಿ ವಿಲ್ಸನ್,ಪ್ರಧಾನ ಕಾರ್ಯದರ್ಶಿ ಬಿ.ಕೆ ಇಮ್ತಿಯಾಜ್ ಮಾತನಾಡಿದರು.ಡಿವೈಎಫ್ಐ ಮುಖಂಡ ರಫೀಕ್ ಹರೇಕಳ, ಗ್ರಾಮ ಪಂಚಾಯತ್ ಸದಸ್ಯ ಅಶ್ರಫ್ ಹರೇಕಳ ಶ್ರಮಿಕರ ಸಂಘದ ಮುಖಂಡರಾದ ಫಾರುಕ್ ಉಳ್ಳಾಲ, ಮಜೀದ್ ಯು. ಬಿ, ಮಾಧವ ಕಾವೂರ್, ಸಿದ್ದಿಕ್ ಬೆಂಗರೆ, ಪಿ.ಟಿ ಮೊಹಮ್ಮದ್, ಪುತ್ತುಂಜಿ ಮಂಜನಾಡಿ, ಟೆಂಪೋ ಚಾಲಕರ ಸಂಘದ ಪ್ರಮುಖರಾದ ದೇವದಾಸ್, ಮಕ್ಬೂಲ್ ಒಣ ಮೀನು ಕಾರ್ಮಿಕರ ವಿಭಾಗದ ಮೊಹಮ್ಮದ್ ಮೋನು, ರಫೀಕ್ ನಂದಾವರ, ಮಯ್ಯದ್ದಿ ಬೆಂಗರೆ, ಹಕೀಮ್ ಬೆಂಗರೆ, ರಫೀಕ್ ಬೆಂಗ್ರೆ ಉಪಸ್ಥಿತರಿದ್ದರು ಹರೀಶ್ ಕೆರೆಬೈಲ್ ಸ್ವಾಗತಿಸಿ, ವಂದಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು