5:11 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಸುರತ್ಕಲ್ ಟೋಲ್ ಗೇಟ್ ಬಿಜೆಪಿ ಆಡಳಿತದ ಜನದ್ರೋಹವನ್ನು ಬಯಲಿಗೆಳೆದಿದೆ: ಮುನೀರ್ ಕಾಟಿಪಳ್ಳ

14/10/2022, 10:57

ಮಂಗಳೂರು(reporterkarnataka.com): ಸುರತ್ಕಲ್ ಅಕ್ರಮ ಟೋಲ್ ಗೇಟ್ ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸಮಸ್ತದ ಜ‌ನಸಮೂಹದ ಹೋರಾಟವಾಗಿ ಪರಿವರ್ತನೆಗೊಂಡಿದೆ. ಟೋಲ್ ಗೇಟ್ ತೆರವಿನ ನಿರ್ಧಾರದ ಹೊರತಾಗಿಯೂ ಟೋಲ್ ಸಂಗ್ರಹ ಮುಂದುವರಿದಿರುವು ಬಿಜೆಪಿ ಸಂಸದ, ಶಾಸಕರು ನವಯುಗ್ ನಂತಹ ಬಂಡವಾಳಶಾಹಿಗಳ ಹಿತಾಸಕ್ತಿಗಳ ಪರವಾಗಿ ಕೆಲಸ ಮಾಡುತ್ತಿರುವುದರ ಫಲ. ಒಟ್ಟಾರೆ ಬಿಜೆಪಿ ಆಡಳಿತದ ಜನದ್ರೋಹತನವ‌ನ್ನು ಸುರತ್ಕಲ್ ಟೋಲ್ ಸುಲಿಗೆ ಬಹಿರಂಗಗೊಳಿಸಿದೆ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಆರೋಪಿಸಿದರು‌‌.


ಅವರು ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಹಳೇಬಂದರು ಸಗಟು ಮಾರುಕಟ್ಟೆಯ ಹಮಾಲಿ ಕಾರ್ಮಿಕರು ಅಕ್ಟೋಬರ್ 18ರ ಟೋಲ್ ಗೇಟ್ ಮುತ್ತಿಗೆ ಬೆಂಬಲಿಸಿ ನಡೆಸಿದ ಮೆರವಣಿಗೆಯ‌ನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೋಗ್ಯ, ಶಿಕ್ಷಣ ಎರಡನ್ನೂ ಮಾರಾಟಕ್ಕಿಟ್ಟಿರುವ, ಸ್ಥಳೀಯರಿಗೆ ಉದ್ಯೋಗ ಸೃಷ್ಟಿಸದ, ಟೋಲ್ ಮಾಫಿಯಾಗಳ ರಕ್ಷಣೆಗೆ ನಿಲ್ಲುವ ಬಿಜೆಪಿ ಸರಕಾರ ಇಲ್ಲಿನ ಶಾಸಕರುಗಳು ಶ್ರಮಜೀವಿ ಜನರನ್ನು ಧರ್ಮದ ಆಧಾರದಲ್ಲಿ ವಿಭಜಿಸಿ ರಾಜಕೀಯ ಲಾಭ ಪಡೆದುಕೊಳ್ಳುತ್ತಾರೆ. ಜನತೆ ಇಂತಹ ಪಿತೂರಿಗಳಿಗೆ ಬಲಿಯಾಗದೆ ಜನಪರ ಹೋರಾಟಗಳನ್ನು ಬೆಂಬಲಿಸಬೇಕು ಎಂದು ವಿನಂತಿಸಿದರು.


ಸ್ಥಳೀಯ ನಗರಪಾಲಿಕೆ ಸದಸ್ಯ ಅಬ್ದುಲ್ ಲತೀಫ್ ಕಂದಕ್, ಬಂದರು ಶ್ರಮಿಕರ ಸಂಘದ ಅಧ್ಯಕ್ಷರಾದ ವಿಲ್ಲಿ ವಿಲ್ಸನ್,ಪ್ರಧಾನ ಕಾರ್ಯದರ್ಶಿ ಬಿ.ಕೆ ಇಮ್ತಿಯಾಜ್ ಮಾತನಾಡಿದರು.ಡಿವೈಎಫ್ಐ ಮುಖಂಡ ರಫೀಕ್ ಹರೇಕಳ, ಗ್ರಾಮ ಪಂಚಾಯತ್ ಸದಸ್ಯ ಅಶ್ರಫ್ ಹರೇಕಳ ಶ್ರಮಿಕರ ಸಂಘದ ಮುಖಂಡರಾದ ಫಾರುಕ್ ಉಳ್ಳಾಲ, ಮಜೀದ್ ಯು. ಬಿ, ಮಾಧವ ಕಾವೂರ್, ಸಿದ್ದಿಕ್ ಬೆಂಗರೆ, ಪಿ.ಟಿ ಮೊಹಮ್ಮದ್, ಪುತ್ತುಂಜಿ ಮಂಜನಾಡಿ, ಟೆಂಪೋ ಚಾಲಕರ ಸಂಘದ ಪ್ರಮುಖರಾದ ದೇವದಾಸ್, ಮಕ್ಬೂಲ್ ಒಣ ಮೀನು ಕಾರ್ಮಿಕರ ವಿಭಾಗದ ಮೊಹಮ್ಮದ್ ಮೋನು, ರಫೀಕ್ ನಂದಾವರ, ಮಯ್ಯದ್ದಿ ಬೆಂಗರೆ, ಹಕೀಮ್ ಬೆಂಗರೆ, ರಫೀಕ್ ಬೆಂಗ್ರೆ ಉಪಸ್ಥಿತರಿದ್ದರು ಹರೀಶ್ ಕೆರೆಬೈಲ್ ಸ್ವಾಗತಿಸಿ, ವಂದಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು