5:09 PM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಸುರತ್ಕಲ್ ಟೋಲ್ ಸುಲಿಗೆಯ ಹಣ ಬಿಜೆಪಿ ಬೆಂಬಲಿತ ಕ್ರಿಮಿನಲ್ ಕೂಟಗಳ ಪಾಲು: ಅಭಯ ಚಂದ್ರ ಜೈನ್ ಆರೋಪ

10/10/2022, 19:16

ಮಂಗಳೂರು(reporterkarnataka.com):ಸರಕಾರದ ತೀರ್ಮಾನದ ಹೊರತಾಗಿಯೂ ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವುಗೊಳಿಸದೆ ಇರುವುದರ ಹಿಂದೆ ಬಿಜೆಪಿಯ ಶಾಸಕ, ಸಂಸದರು ಇದ್ದಾರೆ. ಅಲ್ಲಿ ಜನರಿಂದ ಸುಲಿಗೆ ಮಾಡುವ ಹಣ ಬಿಜೆಪಿ ಬೆಂಬಲಿತ ಕ್ರಿಮಿನಲ್ ಗಳ, ಗೂಂಡಾಗಳ ಪಾಲಾಗುತ್ತದೆ. ಕ್ರಿಮಿನಲ್ ಗೂಂಡಾಗಳನ್ನು ಸಾಕಲೆಂದೇ ಬಿಜೆಪಿ ನಾಯಕರು ಸುರತ್ಕಲ್ ಟೋಲ್ ಗೇಟ್ ತೆರವಿಗೆ ಅಡ್ಡಿಯಾಗಿದ್ದಾರೆ. ಈ ಅಕ್ರಮದಲ್ಲಿ ಸಂಸದರು, ಶಾಸಕರುಗಳು ಭಾಗಿಯಾಗಿದ್ದಾರೆ ಎಂದು ಮಾಜಿ ಸಚಿವ ಅಭಯ ಚಂದ್ರ ಜೈನ್ ಗಂಭೀರ ಆರೋಪ ಮಾಡಿದರು.


ಅಕ್ಟೋಬರ್ 18 ರಂದು ನಡೆಯಲಿರುವ ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ ಪ್ರತಿಭಟನೆಯ ಸಿದ್ದತೆಗಾಗಿ ಮೂಡಬಿದ್ರೆ ಸಮಾಜ ಮಂದಿರದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಸಮಾನ ಮನಸ್ಕ ಸಂಘಟನೆಗಳ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಮಾತನಾಡಿ ಶಾಂತಿಯುತವಾಗಿ ನಡೆಯಲಿರುವ ಟೋಲ್ ಗೇಟ್ ಮುತ್ತಿಗೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಪ್ರೇರೇಪಿಸಬೇಕು, ಆ ಮೂಲಕ ಬಿಜೆಪಿಯ ಜನ ವಿರೋಧಿ ಆಡಳಿತಕ್ಕೆ ತಕ್ಕ ಪಾಠ ಕಲಿಸಲು ಸಾಧ್ಯವಾಗಬೇಕು ಎಂದು ಹೇಳಿದರು. ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಕೆ. ಯಾದವ ಶೆಟ್ಟಿ, ತಾಲೂಕು ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್, ವಕ್ತಾರ ರಾಜೇಶ್ ಕಡಲಕೆರೆ, ಪುರಸಭಾ ಸದಸ್ಯರಾದ ಸುರೇಶ್ ಕೋಟ್ಯಾನ್, ಪುರಂದರ,,ಮಹೇಶ್ ಪ್ರಭು, ಕರೀಂ, ಕಾರ್ಮಿಕ ಮುಂದಾಳುಗಳಾದ ರಮಣಿ, ಲಕ್ಷ್ಮಿ ಮೂಡಬಿದ್ರೆ, ದಲಿತ ನಾಯಕರಾದ ಎಂ ದೇವದಾಸ್, ರಘು ಎಕ್ಕಾರು, ರೈತ ಸಂಘದ ಲಿಯೋ ನಝರತ್, ಓಲ್ವಿನ್ ಮೆನೇಜಸ್, ಸುಂದರ ಶೆಟ್ಟಿ, ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ‌ ಆಸಿಫ್ ಮೂಡಬಿದ್ರೆ, ಸಾಮಾಜಿಕ ಕಾರ್ಯಕರ್ತರಾದ ಹೇಮಲತಾ, ಮಾನಸಿ ಶೆಟ್ಟಿ, ನಿಸಾರ್ ಕರಾವಳಿ, ಸಿರಾಜ್ ಬಜ್ಪೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು