2:00 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಸುರತ್ಕಲ್ ಟೋಲ್ ತೆರವು ಆಗ್ರಹಿಸಿ ಬೃಹತ್ ಪ್ರತಿಭಟನೆ; ಖಾಕಿ ಸರ್ಪಗಾವಲು; ಲಾಠಿಚಾರ್ಜ್, 500ಕ್ಕೂ ಹೆಚ್ಚು ಮಂದಿ ಬಂಧನ

18/10/2022, 15:39

ಸುರತ್ಕಲ್(reporter Karnataka.com): ಇಲ್ಲಿನ ಎನ್ ಐಟಿಕೆ ಸಮೀಪದಲ್ಲಿರುವ ಅಕ್ರಮ ಟೋಲ್ ಗೇಟ್ ತೆರವುಗೊಳಿವಂತೆ ಆಗ್ರಹಿಸಿ ಟೋಲ್ ಸಮೀಪ ಟೋಲ್ ಗೇಟ್ ಹೋರಾಟ ಸಮಿತಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಪೋಲೀಸರು ಲಾಠಿ ಚಾರ್ಜ್ ನಡೆಸಿ 500ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ.
ಪ್ರತಿಭಟನಾಕಾರರನ್ನು ಮೊದಲು ಬಂಧಿಸಿ ಪಾಂಡೇಶ್ವರ ಠಾಣೆಗೆ ಕರೆದೊಯ್ಯಲಾಯಿತು. ನಂತರ ಅವರನ್ನು ಸುರತ್ಕಲ್ ಬಂಟರ ಭವನಕ್ಕೆ ಸ್ಥಳಾಂತರಿಸಲಾಯಿತತ್ ಉ.ಸ್ಥಳದಲ್ಲಿ 6 ಕೆಎಸ್‌ಆರ್‌ಪಿ ತುಕಡಿ, 5 ಸಿಎಆರ್‌, 250 ಸಿವಿಲ್‌, 4 ಮಂದಿ ಪೊಲೀಸ್ ಎಸಿಪಿ, 15 ಇನ್ಸ್ ಪೆಕ್ಟರ್‌ ಸೇರಿದಂತೆ 450 ಕ್ಕೂ ಅಧಿಕ ಪೊಲೀಸರ ಸರ್ಪಗವಲು ಹಾಕಲಾಗಿದೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಶಶಿಕುಮಾರ್‌ ಎನ್‌. ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.


ಟೋಲ್ ಗೇಟ್ ತೆರವು ಹೋರಾಟಕ್ಕೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಿಂದ ಸಾವಿರಾರು ಮಂದಿ ಹೋರಾಟಗಾರರು ಆಗಮಿಸಿದ್ದಾರೆ.
ಹೋರಾಟದಲ್ಲಿ ಸುರತ್ಕಲ್ ಟೋಲ್ ಗೇಟ್ ಹೋರಾಟ ಸಮಿತಿಯ ಪ್ರಮುಖರಾದ ಮುನೀರ್ ಕಾಟಿಪಳ್ಳ, ಬಿ.ಕೆ. ಇಮ್ತಿಯಾಜ್, ಸುನೀಲ್ ಕುಮಾರ್ ಬಜಾಲ್ , ಪ್ರತಿಭಾ ಕುಳಾಯಿ, ಮಾಜಿ ಶಾಸಕ ಐವನ್ ಡಿಸೋಜಾ, ಶಕುಂತಳಾ ಶೆಟ್ಟಿ, ಜೆ ಆರ್ ಲೋಬೊ, ಮೋಯ್ದಿನ್ ಭಾವ, ಶಾಲೆಟ್ ಪಿಂಟೋ, ವಿನಯ್ ಕುಮಾರ್ ಸೊರಕೆ, ಮಿಥುನ್ ರೈ, ಶ್ರೀಧರ್ ಹೆಗಡೆ, ಆಮ್ ಆದ್ಮಿ ಪಕ್ಷ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರು ಸಂತೋಷ್ ಕುಮಾರ್ , ನ್ಯಾಯವಾದಿ ದಿನೇಶ್ ಹೆಗ್ಡೆ ಉಳಿಪಾಡಿ ಮತ್ತಿತರರು ಉಪಸಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು