2:08 AM Wednesday8 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ…

ಇತ್ತೀಚಿನ ಸುದ್ದಿ

ಸುರತ್ಕಲ್: ಹಲವು ತಿಂಗಳಿನಿಂದ ನೀರಿನ ಸಮಸ್ಯೆ; ಸ್ಪಂದಿಸದ ಪಾಲಿಕೆ; ಸಾರ್ವಜನಿಕರ ಪ್ರತಿಭಟನೆ

06/02/2025, 09:24

ಸುರತ್ಕಲ್(reporterkarnataka.com): ಸುರತ್ಕಲ್ ಪರಿಸರದಲ್ಲಿ ಹಲವಾರು ತಿಂಗಳುಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಈ ಹಿನ್ನೆಲೆಯಲ್ಲಿ ನಾಗರಿಕ ಹೋರಾಟ ಸಮಿತಿ ವತಿಯಿಂದ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು.


ಮಂಗಳೂರು ಮಹಾನಗರ ಪಾಲಿಕೆಗೆ ಸಮಿತಿ ವತಿಯಿಂದ ಹಲವು ಬಾರಿ ಮನವಿಯನ್ನು ಸಲ್ಲಿಸಿಯು ಯಾವುದೇ ರೀತಿಯ ಸ್ಪಂದನೆ ಸಿಗದ ಕಾರಣ ಪಾಲಿಕೆ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತಾಡಿದ ಸಂಘಟನೆಯ ಅಧ್ಯಕ್ಷ ಮುಹಮ್ಮದ್ ಹುಸೇನ್ ಅವರು, “ನೀರಿನ ಸಮಸ್ಯೆಯಿಂದಾಗಿ ಮೂರು ನಾಲ್ಕು ದಿನಗಳಿಂದ ಸ್ನಾನ ಮಾಡದೇ ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಕ್ಷೇತ್ರದ ಶಾಸಕರು ಇತ್ತಕಡೆ ತಿರುಗಿಯೂ ನೋಡುತ್ತಿಲ್ಲ. ಹೀಗಾದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ” ಎಂದರು.
5ನೇ ವಾರ್ಡ್ ಮಹಾನಗರ ಪಾಲಿಕೆ ಸದಸ್ಯರಾದ ಶಂಶಾದ್ ಅಬೂಬಕ್ಕರ್ ಮಾತಾಡಿ, “ಸುರತ್ಕಲ್, ಚೊಕ್ಕಬೆಟ್ಟು, ಕೃಷ್ಣಾಪುರ, ಕಾಟಿಪಳ್ಳ ಪ್ರದೇಶವು ನೀರಿನ ಸಮಸ್ಯೆಯಿಂದ ತೀವ್ರ ತೊಂದರೆಗೊಳಗಾಗಿದೆ. ಅಧಿಕಾರಿಗಳಿಂದ ಭರವಸೆಯ ಮೇಲೆ ಬರವಸೆಗಳು ಮಾತ್ರ ದೊರೆಯುತ್ತಿದೆಯೇ ಹೊರತು ಯಾವುದೇ ರೀತಿಯ ಅಭಿವೃದ್ಧಿಯ ಪ್ರತಿಕ್ರಿಯೆ ದೊರಕುತ್ತಿಲ್ಲ“ ಎಂದರು.
ಉಪ ಅಯುಕ್ತೆ ವಾಣಿ ಆಳ್ವ ಹಾಗೂ ಅಭಿಯಂತರರು ಸ್ಥಳಕ್ಕೆ ಅಗಮಿಸಿದ್ದು ಅವರಿಗೆ ಮನವಿ ಸಲ್ಲಿಸಲಾಯಿತು. ಮನವಿಯಲ್ಲಿದ್ದಂತೆ ಒಂದು ವಾರದ ಒಳಗಾಗಿ ಸಂಭಂದ ಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಮ. ನ. ಪಾ. ಕಚೇರಿಯ ಮುಂದೆ ಧರಣಿ ಕೂರುವುದಾಗಿ ಎಚ್ಚರಿಕೆಯನ್ನು ಕೊಟ್ಟು ಪ್ರತಿಭಟನೆಯನ್ನು ಕೊನೆಗೊಳಿಸಲಾಯಿತು.
ನೌಶಾದ್ ಚೊಕ್ಕಬೆಟ್ಟು,ಚೊಕ್ಕಬೆಟ್ಟು ನವಾಝ್ ಐನೈನ್, ಫಯಾಝ್ ಕೃಷ್ಣಾಪುರ, ನವಾಝ್ ಪಜ್ಜು, ಅಬ್ದುಲ್ ಜಬ್ಬಾರ್ ಕೃಷ್ಣಾಪುರ, ಅಬ್ದುಲ್ ಸಲಾಂ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು