5:38 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಸುರತ್ಕಲ್ : ನ.1ರಂದು “ಯಕ್ಷಸಿರಿ” ಯಕ್ಷಗಾನ ತರಬೇತಿ ಕೇಂದ್ರದ ದ್ವಿತೀಯ ವಾರ್ಷಿಕೋತ್ಸವ

27/10/2024, 23:30

ಸುರತ್ಕಲ್(reporterkarnataka.com): ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ “ಯಕ್ಷಸಿರಿ” ಯಕ್ಷಗಾನ ತರಬೇತಿ ಕೇಂದ್ರದ ದ್ವಿತೀಯ ವಾರ್ಷಿಕೋತ್ಸವ ಸಮಾರಂಭ ನವಂಬರ್ 1ರಂದು ಸಂಜೆ 5 ಗಂಟೆಗೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ. ಯಕ್ಷಸಿರಿಯ ವಿದ್ಯಾರ್ಥಿಗಳ ಮತ್ತು ಇತರ ಕಲಾವಿದರ ಕೂಡುವಿಕೆಯಿಂದ ರಾಕೇಶ್ ರೈ ಅಡ್ಕ ಅವರ ನಿರ್ದೇಶನದಲ್ಲಿ “ಕೃಷ್ಣಂ ವಂದೇ ಜಗದ್ಗುರು” ಯಕ್ಷಗಾನ ಬಯಲಾಟ ಪ್ರದರ್ಶನವಾಗಲಿದೆ.

ಸಭಾ ಕಾರ್ಯಕ್ರಮ ಸಂಜೆ 7 ಗಂಟೆಗೆ ನಡೆಯಲಿದೆ. ಕಾರ್ಯಕ್ರಮವನ್ನು ಮುಂಬೈ ವಿ.ಕೆ. ಸಮೂಹ ಸಂಸ್ಥೆಗಳ ಅಧ್ಯಕ್ಷ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಉದ್ಘಾಟಿಸಲಿದ್ದಾರೆ. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸುರತ್ಕಲ್ ಶ್ರೀ ಶಾರದಾ ಸೇವಾ ಟ್ರಸ್ಟ್ ನ ಅಧ್ಯಕ್ಷ ವೈ ರಾಘವೇಂದ್ರ ರಾವ್, ಶ್ರೀ ಡೆವಲಪರ್ಸ್ ಸಂಸ್ಥೆಯ ಅಧ್ಯಕ್ಷ ಗಿರೀಶ್ ಎಂ ಶೆಟ್ಟಿ ಕಟೀಲು, ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಅಶೋಕ ಶೆಟ್ಟಿ ಸುರತ್ಕಲ್, ಸುಭಾಷಿತನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್ (ರಿ) ನ ಕೋಶಾಧಿಕಾರಿ ನರಸಿಂಹ ಸುವರ್ಣ, ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಟ್ರಸ್ಟಿ ಧನಂಜಯ ಶೆಟ್ಟಿ ಕಟ್ಲ, ಎಚ್ ಪಿಸಿಎಲ್ ಸಂಸ್ಥೆಯ ಮಾನವ ಸಂಪನ್ಮೂಲ ಸಹಾಯಕರಾದ ವಾಸು ನಾಯ್ಕ್ ಎಸ್, ಯಕ್ಷಗುರು ರಾಕೇಶ್ ರೈ ಅಡ್ಕ, ಸುರತ್ಕಲ್ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಸುಧಾಕರ ಪೂಂಜ ಭಾಗವಹಿಸಲಿದ್ದಾರೆ.
ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ರಾಜ್ಯ ಮತ್ತು ರಾಷ್ಟ್ರ‌ಮಟ್ಟದಲ್ಲಿ ಸಾಧನೆಗೈದ ಹಾಗೂ ಪ್ರಸಕ್ತ ಸಾಲಿನಲ್ಲಿ ಎಸ್ ಎಸ್ ಎಲ್ ಸಿಯಲ್ಲಿ ಮತ್ತು ಪಿಯುಸಿಯಲ್ಲಿ ಶೇಕಡಾ 90 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ಯಕ್ಷಸಿರಿಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ಸುರತ್ಕಲ್ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು