12:47 PM Wednesday29 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಸುರತ್ಕಲ್ : ನ.1ರಂದು “ಯಕ್ಷಸಿರಿ” ಯಕ್ಷಗಾನ ತರಬೇತಿ ಕೇಂದ್ರದ ದ್ವಿತೀಯ ವಾರ್ಷಿಕೋತ್ಸವ

27/10/2024, 23:30

ಸುರತ್ಕಲ್(reporterkarnataka.com): ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ “ಯಕ್ಷಸಿರಿ” ಯಕ್ಷಗಾನ ತರಬೇತಿ ಕೇಂದ್ರದ ದ್ವಿತೀಯ ವಾರ್ಷಿಕೋತ್ಸವ ಸಮಾರಂಭ ನವಂಬರ್ 1ರಂದು ಸಂಜೆ 5 ಗಂಟೆಗೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ. ಯಕ್ಷಸಿರಿಯ ವಿದ್ಯಾರ್ಥಿಗಳ ಮತ್ತು ಇತರ ಕಲಾವಿದರ ಕೂಡುವಿಕೆಯಿಂದ ರಾಕೇಶ್ ರೈ ಅಡ್ಕ ಅವರ ನಿರ್ದೇಶನದಲ್ಲಿ “ಕೃಷ್ಣಂ ವಂದೇ ಜಗದ್ಗುರು” ಯಕ್ಷಗಾನ ಬಯಲಾಟ ಪ್ರದರ್ಶನವಾಗಲಿದೆ.

ಸಭಾ ಕಾರ್ಯಕ್ರಮ ಸಂಜೆ 7 ಗಂಟೆಗೆ ನಡೆಯಲಿದೆ. ಕಾರ್ಯಕ್ರಮವನ್ನು ಮುಂಬೈ ವಿ.ಕೆ. ಸಮೂಹ ಸಂಸ್ಥೆಗಳ ಅಧ್ಯಕ್ಷ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಉದ್ಘಾಟಿಸಲಿದ್ದಾರೆ. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸುರತ್ಕಲ್ ಶ್ರೀ ಶಾರದಾ ಸೇವಾ ಟ್ರಸ್ಟ್ ನ ಅಧ್ಯಕ್ಷ ವೈ ರಾಘವೇಂದ್ರ ರಾವ್, ಶ್ರೀ ಡೆವಲಪರ್ಸ್ ಸಂಸ್ಥೆಯ ಅಧ್ಯಕ್ಷ ಗಿರೀಶ್ ಎಂ ಶೆಟ್ಟಿ ಕಟೀಲು, ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಅಶೋಕ ಶೆಟ್ಟಿ ಸುರತ್ಕಲ್, ಸುಭಾಷಿತನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್ (ರಿ) ನ ಕೋಶಾಧಿಕಾರಿ ನರಸಿಂಹ ಸುವರ್ಣ, ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಟ್ರಸ್ಟಿ ಧನಂಜಯ ಶೆಟ್ಟಿ ಕಟ್ಲ, ಎಚ್ ಪಿಸಿಎಲ್ ಸಂಸ್ಥೆಯ ಮಾನವ ಸಂಪನ್ಮೂಲ ಸಹಾಯಕರಾದ ವಾಸು ನಾಯ್ಕ್ ಎಸ್, ಯಕ್ಷಗುರು ರಾಕೇಶ್ ರೈ ಅಡ್ಕ, ಸುರತ್ಕಲ್ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಸುಧಾಕರ ಪೂಂಜ ಭಾಗವಹಿಸಲಿದ್ದಾರೆ.
ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ರಾಜ್ಯ ಮತ್ತು ರಾಷ್ಟ್ರ‌ಮಟ್ಟದಲ್ಲಿ ಸಾಧನೆಗೈದ ಹಾಗೂ ಪ್ರಸಕ್ತ ಸಾಲಿನಲ್ಲಿ ಎಸ್ ಎಸ್ ಎಲ್ ಸಿಯಲ್ಲಿ ಮತ್ತು ಪಿಯುಸಿಯಲ್ಲಿ ಶೇಕಡಾ 90 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ಯಕ್ಷಸಿರಿಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ಸುರತ್ಕಲ್ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು