12:56 AM Monday1 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..!

ಇತ್ತೀಚಿನ ಸುದ್ದಿ

ಸುರತ್ಕಲ್ : ನ.1ರಂದು “ಯಕ್ಷಸಿರಿ” ಯಕ್ಷಗಾನ ತರಬೇತಿ ಕೇಂದ್ರದ ದ್ವಿತೀಯ ವಾರ್ಷಿಕೋತ್ಸವ

27/10/2024, 23:30

ಸುರತ್ಕಲ್(reporterkarnataka.com): ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ “ಯಕ್ಷಸಿರಿ” ಯಕ್ಷಗಾನ ತರಬೇತಿ ಕೇಂದ್ರದ ದ್ವಿತೀಯ ವಾರ್ಷಿಕೋತ್ಸವ ಸಮಾರಂಭ ನವಂಬರ್ 1ರಂದು ಸಂಜೆ 5 ಗಂಟೆಗೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ. ಯಕ್ಷಸಿರಿಯ ವಿದ್ಯಾರ್ಥಿಗಳ ಮತ್ತು ಇತರ ಕಲಾವಿದರ ಕೂಡುವಿಕೆಯಿಂದ ರಾಕೇಶ್ ರೈ ಅಡ್ಕ ಅವರ ನಿರ್ದೇಶನದಲ್ಲಿ “ಕೃಷ್ಣಂ ವಂದೇ ಜಗದ್ಗುರು” ಯಕ್ಷಗಾನ ಬಯಲಾಟ ಪ್ರದರ್ಶನವಾಗಲಿದೆ.

ಸಭಾ ಕಾರ್ಯಕ್ರಮ ಸಂಜೆ 7 ಗಂಟೆಗೆ ನಡೆಯಲಿದೆ. ಕಾರ್ಯಕ್ರಮವನ್ನು ಮುಂಬೈ ವಿ.ಕೆ. ಸಮೂಹ ಸಂಸ್ಥೆಗಳ ಅಧ್ಯಕ್ಷ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಉದ್ಘಾಟಿಸಲಿದ್ದಾರೆ. ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸುರತ್ಕಲ್ ಶ್ರೀ ಶಾರದಾ ಸೇವಾ ಟ್ರಸ್ಟ್ ನ ಅಧ್ಯಕ್ಷ ವೈ ರಾಘವೇಂದ್ರ ರಾವ್, ಶ್ರೀ ಡೆವಲಪರ್ಸ್ ಸಂಸ್ಥೆಯ ಅಧ್ಯಕ್ಷ ಗಿರೀಶ್ ಎಂ ಶೆಟ್ಟಿ ಕಟೀಲು, ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಅಶೋಕ ಶೆಟ್ಟಿ ಸುರತ್ಕಲ್, ಸುಭಾಷಿತನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಶನ್ (ರಿ) ನ ಕೋಶಾಧಿಕಾರಿ ನರಸಿಂಹ ಸುವರ್ಣ, ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಟ್ರಸ್ಟಿ ಧನಂಜಯ ಶೆಟ್ಟಿ ಕಟ್ಲ, ಎಚ್ ಪಿಸಿಎಲ್ ಸಂಸ್ಥೆಯ ಮಾನವ ಸಂಪನ್ಮೂಲ ಸಹಾಯಕರಾದ ವಾಸು ನಾಯ್ಕ್ ಎಸ್, ಯಕ್ಷಗುರು ರಾಕೇಶ್ ರೈ ಅಡ್ಕ, ಸುರತ್ಕಲ್ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಸುಧಾಕರ ಪೂಂಜ ಭಾಗವಹಿಸಲಿದ್ದಾರೆ.
ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ರಾಜ್ಯ ಮತ್ತು ರಾಷ್ಟ್ರ‌ಮಟ್ಟದಲ್ಲಿ ಸಾಧನೆಗೈದ ಹಾಗೂ ಪ್ರಸಕ್ತ ಸಾಲಿನಲ್ಲಿ ಎಸ್ ಎಸ್ ಎಲ್ ಸಿಯಲ್ಲಿ ಮತ್ತು ಪಿಯುಸಿಯಲ್ಲಿ ಶೇಕಡಾ 90 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ಯಕ್ಷಸಿರಿಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ಸುರತ್ಕಲ್ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ ಕಟ್ಲ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು