5:11 AM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಸುರತ್ಕಲ್: ಎಸ್ಸೆಸ್ಸೆಲ್ಸಿ ಪ್ರಿಪರೇಟರಿ ಪರೀಕ್ಷೆ ಬರೆದು ನಾಪತ್ತೆಯಾಗಿದ್ದ 4 ಮಂದಿ ಬಾಲಕರ ಮೃತದೇಹ ಹಳೆಯಂಗಡಿ ಬಳಿ ಪತ್ತೆ

28/02/2024, 10:26

ಸುರತ್ಕಲ್(reporterkarnataka.com) : ಮಂಗಳವಾರದಂದು ಎಸ್ಸೆಸ್ಸೆಲ್ಸಿ ಪ್ರಿಪರೇಟರಿ ಪರೀಕ್ಷೆ ಬರೆದ ಬಳಿಕ ನಾಪತ್ತೆಯಾಗಿದ್ದ ಸುರತ್ಕಲ್‌ನ ಖಾಸಗಿ ಅನುದಾನಿತ ಪ್ರೌಢಶಾಲೆಯ 4 ಮಂದಿ ವಿದ್ಯಾರ್ಥಿಗಳ ಮೃತದೇಹಗಳು ಹಳೆಯಂಗಡಿ ಕೊಪ್ಪಳ ಅಣೆಕಟ್ಟಿನ ರೈಲ್ವೇ ಸೇತುವೆ ಕೆಳಭಾಗದಲ್ಲಿ ಪತ್ತೆಯಾಗಿದೆ.
ಮೃತ ಬಾಲಕರನ್ನು ಅಗರಮೇಲು ನಿವಾಸಿ ಯಶ್ವಿತ್, ಹಳೆಯಂಗಡಿಯ ರಾಘವೇಂದ್ರ, ಚಿತ್ರಾಪುರದ ಅನ್ವಿತ್, ಗುಡ್ಡೆಕೊಪ್ಲದ ನಿರೂಪ್ ಎಂದು ಗುರುತಿಸಲಾಗಿದೆ. ಮಂಗಳವಾರ ಮಧ್ಯಾಹ್ನ ಇಂಗ್ಲಿಷ್ ಪೂರ್ವಭಾವಿ ಪರೀಕ್ಷೆ ಮುಗಿದಿದ್ದು ಬಳಿಕ ಯಶ್ವಿತ್, ರಾಘವೇಂದ್ರ, ಅನ್ವಿತ್ ಹಾಗೂ ನಿರೂಪ್ ನಾಪತ್ತೆ ಯಾಗಿದ್ದರು.
ಹಳೆಯಂಗಡಿ ಕರಿತೋಟದಲ್ಲಿ‌ ನಂದಿನಿ ನದಿಯಲ್ಲಿ ಈಜಾಡಲು ಹೋಗಿ ನಾಲ್ವರು ವಿದ್ಯಾರ್ಥಿಗಳು ಅಸುನೀಗಿದ್ದಾರೆ. ನಾಪತ್ತೆ ಪ್ರಕರಣ ದಾಖಲಾಗುತ್ತಿದ್ದಂತೆ ಸುರತ್ಕಲ್ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು. ಶಾಲೆ ಮತ್ತು ಬಸ್ ನಿಲ್ದಾಣಗಳ ಸಿಸಿಟಿವಿ ದೃಶ್ಯಾವಳಿಗಳನ್ನು ತರಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳು ಸುರತ್ಕಲ್ ಬಸ್‌ ನಿಲ್ದಾಣದಿಂದ ಬಸ್ ಹತ್ತಿ ಹಳೆಯಂಗಡಿ ಬಸ್‌ ನಿಲ್ದಾಣದಲ್ಲಿ ಇಳಿದಿರುವುದನ್ನು ಖಚಿತಪಡಿಸಿಕೊಂಡಿದ್ದರು. ವಿದ್ಯಾರ್ಥಿಯೋರ್ವನ ಬಳಿ ಇತ್ತೆನ್ನಲಾದ ಮೊಬೈಲ್‌ ಟವ‌ರ್ ಲೊಕೇಶನ್‌ ಆಧರಿಸಿ ವಿದ್ಯಾರ್ಥಿಗಳು ನದಿಯ ದಡಕ್ಕೆ ಬಂದಿರುವುದು ಗಮನಕ್ಕೆ ಬಂದಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ನದಿಯ ದಡದಲ್ಲಿ ಮಕ್ಕಳ ಶಾಲೆಯ ಚೀಲಗಳು, ಚಪ್ಪಲಿ, ಶಾಲೆಯ ಸಮವಸ್ತ್ರಗಳು ಪತ್ತೆಯಾಗಿವೆ.
ಸಂಶಯದಿಂದ ಸ್ಥಳೀಯರ ಸಹಕಾರದಿಂದ ನದಿಯಲ್ಲಿ ಹುಡುಕಾಡಿದಾಗ ನಾಲ್ವರ ಮೃತದೇಹಗಳು ಪತ್ತೆಯಾಗಿವೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ವೆನ್‌ಲಾಕ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು