4:01 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:…

ಇತ್ತೀಚಿನ ಸುದ್ದಿ

ಶಾಸಕರ ಜತೆ ಸುರ್ಜೆವಾಲ ಮಾತುಕತೆ ನಾಯಕತ್ವ ಬದಲಾವಣೆ ಬಗ್ಗೆ ಅಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

02/07/2025, 10:35

ಬೆಂಗಳೂರು(reporterkarnataka.com):ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಪಕ್ಷ ಸಂಘಟನೆ ವಿಚಾರ ಹಾಗೂ ಶಾಸಕರ ಅಹವಾಲು ಸ್ವೀಕರಿಸಲು ಸಭೆ ಮಾಡುತ್ತಿದ್ದಾರೆಯೇ ಹೊರತು, ಸಿಎಂ ಬದಲಾವಣೆ ಅಥವಾ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.
ರಣದೀಪ್ ಸಿಂಗ್ ಸುರ್ಜೆವಾಲ ಅವರು ಕಾಂಗ್ರೆಸ್ ಶಾಸಕರ ಜೊತೆ ಮಾಡುತ್ತಿರುವ ಸಭೆ ಬಗ್ಗೆ ಕೇಳಿದಾಗ, “ಈ ಸಭೆ ಬಗ್ಗೆ ಯಾರಿಗೂ ಆತಂಕ ಬೇಡ. ರಾಷ್ಟ್ರಾದ್ಯಂತ ನಾವು ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡುತ್ತಿದ್ದು, ಸಂಘಟನೆ ಹಿನ್ನೆಲೆಯಲ್ಲಿ ಈ ಸಭೆ ಮಾಡಲಾಗುತ್ತಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಈ ವರ್ಷವನ್ನು ಸಂಘಟನೆ ವರ್ಷ ಎಂದು ಘೋಷಣೆ ಮಾಡಿದ್ದಾರೆ. ಹೀಗಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಶಕ್ತಿ ತುಂಬಲು ಹೇಳಿದ್ದಾರೆ. ಖರ್ಗೆ ಅವರು, ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿಗಳು ಎಲ್ಲಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಕರೆಸಿ ನವದೆಹಲಿಯಲ್ಲಿ ಸಭೆ ಮಾಡಲಾಗಿದೆ. ಆಮೂಲಕ ಕಾಂಗ್ರೆಸ್ ಕಚೇರಿ ನಿರ್ಮಾಣದಿಂದ, ಪಕ್ಷ ಸಂಘಟನೆವರೆಗೂ ಎಲ್ಲಾ ಜವಾಬ್ದಾರಿಯನ್ನು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶಾಸಕರು ಇಲ್ಲದಿರುವ ಕ್ಷೇತ್ರಗಳ ಜವಾಬ್ದಾರಿಯನ್ನು ಒಬ್ಬೊಬ್ಬ ಶಾಸಕರಿಗೆ ನೀಡಲಾಗಿದೆ” ಎಂದು ವಿವರಿಸಿದರು.
“ಸಂಘಟನೆ ಕುರಿತು ಮಾರ್ಗದರ್ಶನ ನೀಡಲು ರಣದೀಪ್ ಸಿಂಗ್ ಸುರ್ಜೆವಾಲ ಅವರು ಆಗಮಿಸಿದ್ದು, ಅವರ ಅಹವಾಲುಗಳನ್ನು ಸ್ವೀಕರಿಸಲಾಗುತ್ತಿದೆ. ಕೆಲವು ಶಾಸಕರ ಹೇಳಿಕೆಗಳ ಮಧ್ಯೆ ಪಕ್ಷದಲ್ಲಿ ಶಿಸ್ತು ತರಲು ಪ್ರಯತ್ನಿಸುತ್ತಿದ್ದಾರೆ. ಇದರ ಹೊರತಾಗಿ ನಾಯಕತ್ವ ಬದಲಾವಣೆ, ಸಚಿವಸಂಪುಟ ವಿಸ್ತರಣೆ ಕುರಿತು ಯಾವುದೇ ಚರ್ಚೆ ಇಲ್ಲ. ನಾವುಗಳು ಯಾರೂ ಈಗ ಆತುರದಲ್ಲಿ ಇಲ್ಲ. ನಮಗೆ 2028 ಬಹಳ ಮುಖ್ಯ. ಅದೇ ಮುಖ್ಯ” ಎಂದು ಸ್ಪಷ್ಟಪಡಿಸಿದರು.

*ಇಕ್ಬಾಲ್ ಹುಸೇನ್ ಗೆ ನೋಟೀಸ್ ನೀಡುವೆ:*
ಇಕ್ಬಾಲ್ ಹುಸೇನ್ ನೀವು ಸಿಎಂ ಆಗುವುದಾಗಿ ಹೇಳಿದ್ದಾರೆ ಎಂದು ಕೇಳಿದಾಗ, “ಅವರಿಗೆ ನಾನೇ ನೋಟೀಸ್ ನೀಡುತ್ತೇನೆ. ನಾನು ಸಿಎಂ ಆಗುತ್ತೇನೆ ಎಂದು ಯಾರೂ ಹೇಳುವ ಅಗತ್ಯವಿಲ್ಲ. ಯಾರೊಬ್ಬರೂ ಮಾಧ್ಯಮಗಳ ಮುಂದೆ ಮಾತನಾಡುವಂತಿಲ್ಲ. ಇಕ್ಬಾಲ್ ಹುಸೇನ್, ಬಿ.ಆರ್ ಪಾಟೀಲ್, ಬಾಲಕೃಷ್ಣ ಯಾರೇ ಆಗಲಿ, ಈ ವಿಚಾರವಾಗಿ ಮಾಧ್ಯಮಗಳ ಮುಂದೆ ಯಾರೂ ಮಾತನಾಡಬಾರದು. ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಅವರಿದ್ದು, ನಾವೆಲ್ಲರೂ ಅವರ ಕೈ ಬಲಪಡಿಸಬೇಕು” ಎಂದು ತಿಳಿಸಿದರು.

*ಅಭಿವೃದ್ಧಿ ಯೋಜನೆಗಳಿಗಾಗಿ ಬಜೆಟ್ ನಲ್ಲಿ 1 ಲಕ್ಷ ಕೋಟಿ ಅನುದಾನ:*
ಬಿ.ಆರ್. ಪಾಟೀಲ್ ಅವರು ಅನುದಾನ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಕೇಳಿದಾಗ, “ರಾಜ್ಯ ಸರ್ಕಾರ ಬಜೆಟ್ ನಲ್ಲಿ ಅಭಿವೃದ್ಧಿ ಕೆಲಸಗಳಿಗಾಗಿಯೇ 1 ಲಕ್ಷ ಕೋಟಿ ಅನುದಾನ ಮೀಸಲಿಟ್ಟಿದೆ. 54 ಸಾವಿರ ಕೋಟಿ ಗ್ಯಾರಂಟಿ ಯೋಜನೆಗೆ, 19 ಸಾವಿರ ಕೋಟಿ ರೈತರಿಗೆ ವಿದ್ಯುತ್ ನೀಡಲು ವ್ಯಯಿಸಲಾಗುತ್ತಿದೆ. ಸಾಮಾಜಿಕ ಕಲ್ಯಾಣ ಯೋಜನೆ ಸೇರಿದಂತೆ ಇತರೆ ಅಭಿವೃದ್ಧಿ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ. ಇದು ಜನರು ಹಾಗೂ ಕ್ಶೇತ್ರದ ಅಭಿವೃದ್ಧಿಗಳಿಗೆ ಅಲ್ಲವೇ? ನಮ್ಮ ರಾಜ್ಯದಲ್ಲಿ ಆಗುತ್ತಿರುವ ಕಲ್ಯಾಣ ಯೋಜನೆಗಳು ಬೇರೆ ಯಾವುದೇ ರಾಜ್ಯದಲ್ಲಿ ಆಗುತ್ತಿಲ್ಲ” ಎಂದು ತಿಳಿಸಿದರು.
ಮಾಲೂರು ಶಾಸಕರಾದ ನಂಜೇಗೌಡರಿಗೆ ನೀವು ಕೆಎಂಎಫ್ ಸ್ಥಾನ ಕೊಡಿಸುವುದಾಗಿ ಹೇಳಿದ್ದೀರಿ ಎಂದು ಸ್ವತಃ ಶಾಸಕರೇ ಹೇಳಿದ್ದಾರೆ ಎಂದು ಕೇಳಿದಾಗ, “ರಾಜಕೀಯ ಬೆಳವಣಿಗೆಗಳೇ ಬೇರೆ, ಸಹಕಾರ ಕ್ಷೇತ್ರವೇ ಬೇರೆ. ಅದರ ಬಗ್ಗೆ ಈಗ ಚರ್ಚೆ ಮಾಡುವುದಿಲ್ಲ” ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು