11:44 PM Thursday15 - May 2025
ಬ್ರೇಕಿಂಗ್ ನ್ಯೂಸ್
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು

ಇತ್ತೀಚಿನ ಸುದ್ದಿ

ಸುರತ್ಕಲ್ ಅನಧಿಕೃತ ಟೋಲ್ ಗೇಟ್ ತೆರವಿಗೆ ತಕ್ಷಣ ಕ್ರಮ ಕೈಗೊಳ್ಳಿ: ವಿಧಾನಸಭೆಯಲ್ಲಿ ಯು.ಟಿ. ಖಾದರ್ ಒತ್ತಾಯ

15/09/2022, 21:45

ಬೆಂಗಳೂರು(reporterkarnataka.com): ಸುರತ್ಕಲ್ ನಲ್ಲಿರುವ ಅನಧಿಕೃತ ಟೋಲ್ ಗೇಟ್ ತೆರವುಗೊಳಿಸಲು ಆಗ್ರಹಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದು, ಟೋಲ್ ಗೇಟ್ ತೆರವಿಗೆ ಸರಕಾರ ತಕ್ಷಣ ಕ್ರಮ ಕೈಗೊಳ್ಳ ಬೇಕು’ ಎಂದು ವಿಧಾನ ಸಭೆ ಪ್ರತಿಪಕ್ಷದ ಉಪ ನಾಯಕ ಯು.ಟಿ ಖಾದರ್ ಹೇಳಿದರು.

ವಿಧಾನಸಭೆಯಲ್ಲಿ ಗುರುವಾರ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ಯು.ಟಿ ಖಾದರ್, ‘ಕಾನೂನು ಪ್ರಕಾರ 60 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಒಂದು ಟೋಲ್ ಗೇಟ್ ಇರಬೇಕು, ಆದರೆ, ತಲಪಾಡಿಯಿಂದ ಸುರತ್ಕಲ್ ಗೆ 30 ಕಿಲೋ ಮೀಟರ್ ಇದ್ದು, ಈ ಪ್ರದೇಶದಲ್ಲಿ ಒಟ್ಟು 3 ಟೋಲ್ ಗೇಟ್ ಬರುತ್ತೆ. 60 ಕಿಲೋ ಮೀಟರ್ ಗಳ ಒಳಗೆ ಟೋಲ್‍ಗೇಟ್‍ಗಳು ಅತ್ಯಂತ ಸಮೀಪದಲ್ಲೇ ಹಾಕಲಾಗಿದೆ. ಇದರಿಂದ ಜನರಿಗೆ ತೊಂದರೆ ಆಗುತ್ತಿದ್ದು, ಇದರ ತೆರವಿಗೆ ಸಚಿವರು ಸಂಪೂರ್ಣ ಮೇಲುಸ್ತುವಾರಿ ವಹಿಸಿಕೊಳ್ಳಬೇಕು’ ಎಂದು ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ್ ಅವರನ್ನು ಒತ್ತಾಯಿಸಿದರು.

ಬಳಿಕ ಪ್ರತಿಕ್ರಿಯಿಸಿದ ಸಚಿವ ಸಿ.ಸಿ ಪಾಟೀಲ್, ‘ 60 ಕಿಲೋ ಮೀಟರ್ ಅಂತರದಲ್ಲಿರುವ ಟೋಲ್ ಗೇಟ್ ಗಳನ್ನು ವಿಲೀನಗೊಳಿಸಲು ಅವಕಾಶವಿದೆ. ಸುರತ್ಕಲ್ ಟೋಲ್ ಗೇಟ್ ಸೇರಿದಂತೆ ರಾಜ್ಯದ 60 ಕಿಲೋ ಮೀಟರ್ ಅಂತರದಲ್ಲಿರುವ ಟೋಲ್ ಪ್ಲಾಝಾಗಳನ್ನು ವಿಲೀನಗೊಳಿಸುವ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ. ಸಚಿವ ನಿತಿನ್ ಗಡ್ಕರಿ ಅವರೂ ಒಪ್ಪಿಕೊಂಡಿದ್ದಾರೆ. ಕಾನೂನು ಬಾಹಿರ  ಟೋಲ್ ಗೇಟ್ ತೆರವುಗೊಳಿಸಲು ಸರಕಾರ ಬದ್ಧವಾಗಿದೆ’ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು