3:56 AM Sunday15 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ಸುರತ್ಕಲ್ ಅನಧಿಕೃತ ಟೋಲ್ ಗೇಟ್ ತೆರವಿಗೆ ತಕ್ಷಣ ಕ್ರಮ ಕೈಗೊಳ್ಳಿ: ವಿಧಾನಸಭೆಯಲ್ಲಿ ಯು.ಟಿ. ಖಾದರ್ ಒತ್ತಾಯ

15/09/2022, 21:45

ಬೆಂಗಳೂರು(reporterkarnataka.com): ಸುರತ್ಕಲ್ ನಲ್ಲಿರುವ ಅನಧಿಕೃತ ಟೋಲ್ ಗೇಟ್ ತೆರವುಗೊಳಿಸಲು ಆಗ್ರಹಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದು, ಟೋಲ್ ಗೇಟ್ ತೆರವಿಗೆ ಸರಕಾರ ತಕ್ಷಣ ಕ್ರಮ ಕೈಗೊಳ್ಳ ಬೇಕು’ ಎಂದು ವಿಧಾನ ಸಭೆ ಪ್ರತಿಪಕ್ಷದ ಉಪ ನಾಯಕ ಯು.ಟಿ ಖಾದರ್ ಹೇಳಿದರು.

ವಿಧಾನಸಭೆಯಲ್ಲಿ ಗುರುವಾರ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ಯು.ಟಿ ಖಾದರ್, ‘ಕಾನೂನು ಪ್ರಕಾರ 60 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಒಂದು ಟೋಲ್ ಗೇಟ್ ಇರಬೇಕು, ಆದರೆ, ತಲಪಾಡಿಯಿಂದ ಸುರತ್ಕಲ್ ಗೆ 30 ಕಿಲೋ ಮೀಟರ್ ಇದ್ದು, ಈ ಪ್ರದೇಶದಲ್ಲಿ ಒಟ್ಟು 3 ಟೋಲ್ ಗೇಟ್ ಬರುತ್ತೆ. 60 ಕಿಲೋ ಮೀಟರ್ ಗಳ ಒಳಗೆ ಟೋಲ್‍ಗೇಟ್‍ಗಳು ಅತ್ಯಂತ ಸಮೀಪದಲ್ಲೇ ಹಾಕಲಾಗಿದೆ. ಇದರಿಂದ ಜನರಿಗೆ ತೊಂದರೆ ಆಗುತ್ತಿದ್ದು, ಇದರ ತೆರವಿಗೆ ಸಚಿವರು ಸಂಪೂರ್ಣ ಮೇಲುಸ್ತುವಾರಿ ವಹಿಸಿಕೊಳ್ಳಬೇಕು’ ಎಂದು ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ್ ಅವರನ್ನು ಒತ್ತಾಯಿಸಿದರು.

ಬಳಿಕ ಪ್ರತಿಕ್ರಿಯಿಸಿದ ಸಚಿವ ಸಿ.ಸಿ ಪಾಟೀಲ್, ‘ 60 ಕಿಲೋ ಮೀಟರ್ ಅಂತರದಲ್ಲಿರುವ ಟೋಲ್ ಗೇಟ್ ಗಳನ್ನು ವಿಲೀನಗೊಳಿಸಲು ಅವಕಾಶವಿದೆ. ಸುರತ್ಕಲ್ ಟೋಲ್ ಗೇಟ್ ಸೇರಿದಂತೆ ರಾಜ್ಯದ 60 ಕಿಲೋ ಮೀಟರ್ ಅಂತರದಲ್ಲಿರುವ ಟೋಲ್ ಪ್ಲಾಝಾಗಳನ್ನು ವಿಲೀನಗೊಳಿಸುವ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ. ಸಚಿವ ನಿತಿನ್ ಗಡ್ಕರಿ ಅವರೂ ಒಪ್ಪಿಕೊಂಡಿದ್ದಾರೆ. ಕಾನೂನು ಬಾಹಿರ  ಟೋಲ್ ಗೇಟ್ ತೆರವುಗೊಳಿಸಲು ಸರಕಾರ ಬದ್ಧವಾಗಿದೆ’ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು