11:45 PM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಶರಣಾಗತಿ ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ ಚಿಕ್ಕಮಗಳೂರು ಕೋರ್ಟಿಗೆ ಹಾಜರು: ಕೇರಳ ಪೊಲೀಸರ ಕ್ರಮ

26/06/2025, 11:15

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶರಣಾಗತಿ ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ ಅವರನ್ನು ಕೇರಳ ಪೊಲೀಸರು ಚಿಕ್ಕಮಗಳೂರು ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ನಕ್ಸಲ್ ಹೋರಾಟದ ಹಾದಿಯಲ್ಲಿ ಬಿ.ಜಿ.ಕೃಷ್ಣಮೂರ್ತಿ ಮೇಲೆ ಚಿಕ್ಕಮಗಳೂರು, ಉಡುಪಿ ಹಾಗೂ ಮಂಗಳೂರು ಹಲವು ಪ್ರಕರಣಗಳು ದಾಖಲಾಗಿದ್ದವು. ವಿಚಾರಣೆ ಸಂಬಂಧ ಕೇರಳ ಪೊಲೀಸರು ಚಿಕ್ಕಮಗಳೂರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಬಿ.ಜಿ.ಕೃಷ್ಣಮೂರ್ತಿ ಮೇಲೆ ಒಟ್ಟು 66 ಪ್ರಕರಣಗಳು ದಾಖಲಾಗಿವೆ. ಇಂದು ಚಿಕ್ಕಮಗಳೂರು ಜಿಲ್ಲೆಯ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ಜುಲೈ 21ಕ್ಕೆ ಮುಂದೂಡಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ನಕ್ಸಲ್ ನಾಯಕ ಸಾಕೇತ್ ರಾಜನ್ ಎನ್ಕೌಂಟರ್ ಆದ ಬಳಿಕ ಸುಮಾರು ಒಂದೂವರೆ ದಶಕಗಳ ಕಾಲ ಬಿ.ಜಿ.ಕೃಷ್ಣಮೂರ್ತಿ ನಕ್ಸಲ್ ನಾಯಕತ್ವ ವಹಿಸಿಕೊಂಡಿದ್ದರು. 2014ರ ಬಳಿಕ ನಿರಂತರ ಕಾಂಬಿಂಗ್, ಮಲೆನಾಡಿಗರ ಬೆಂಬಲ ಕಡಿಮೆಯಾದ ಹಿನ್ನೆಲೆ ಬಿ.ಜಿ.ಕೃಷ್ಣಮೂರ್ತಿ ಸೇರಿ ಹಲವಾರು ನಕ್ಸಲರು ಕೇರಳತ್ತ ಮುಖ ಮಾಡಿದ್ದರು. ಕಳೆದ ವರ್ಷ ಸರ್ಕಾರದ ಪ್ಯಾಕೇಜ್ ಅಡಿಯಲ್ಲಿ ಬಿ.ಜಿ.ಕೃಷ್ಣಮೂರ್ತಿ ಪೊಲೀಸರಿಗೆ ಶರಣಾಗಿದ್ದರು. ಅವರು ಶರಣಾದ ಬಳಿಕ ಸುಮಾರು 8 ಜನ ನಕ್ಸಲರು ಕರ್ನಾಟಕದಲ್ಲಿ ಶರಣಾಗತಿಯಾಗಿದ್ದರು. 7 ಜನ ಸಿಎಂ ಮುಂದೆ ಶರಣಾಗಿದ್ದರೆ, ಓರ್ವ ಚಿಕ್ಕಮಗಳೂರು ಎಸ್ಪಿ ಮುಂದೆ ಶರಣಾಗಿದ್ದನು. ಇಂದು ವಿಚಾರಣೆ ಮುಗಿದ ಬಳಿಕ ಕೇರಳ ಪೊಲೀಸರು ಬಿ.ಜಿ.ಕೃಷ್ಣಮೂರ್ತಿಯನ್ನ ಮತ್ತೆ ತಮ್ಮ ವಶಕ್ಕೆ ಪಡೆದು ಕರೆದೊಯ್ದರು.

ಇತ್ತೀಚಿನ ಸುದ್ದಿ

ಜಾಹೀರಾತು