8:45 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಶರಣಾಗತಿ ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ ಚಿಕ್ಕಮಗಳೂರು ಕೋರ್ಟಿಗೆ ಹಾಜರು: ಕೇರಳ ಪೊಲೀಸರ ಕ್ರಮ

26/06/2025, 11:15

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಶರಣಾಗತಿ ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ ಅವರನ್ನು ಕೇರಳ ಪೊಲೀಸರು ಚಿಕ್ಕಮಗಳೂರು ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ನಕ್ಸಲ್ ಹೋರಾಟದ ಹಾದಿಯಲ್ಲಿ ಬಿ.ಜಿ.ಕೃಷ್ಣಮೂರ್ತಿ ಮೇಲೆ ಚಿಕ್ಕಮಗಳೂರು, ಉಡುಪಿ ಹಾಗೂ ಮಂಗಳೂರು ಹಲವು ಪ್ರಕರಣಗಳು ದಾಖಲಾಗಿದ್ದವು. ವಿಚಾರಣೆ ಸಂಬಂಧ ಕೇರಳ ಪೊಲೀಸರು ಚಿಕ್ಕಮಗಳೂರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಬಿ.ಜಿ.ಕೃಷ್ಣಮೂರ್ತಿ ಮೇಲೆ ಒಟ್ಟು 66 ಪ್ರಕರಣಗಳು ದಾಖಲಾಗಿವೆ. ಇಂದು ಚಿಕ್ಕಮಗಳೂರು ಜಿಲ್ಲೆಯ ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ಜುಲೈ 21ಕ್ಕೆ ಮುಂದೂಡಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ನಕ್ಸಲ್ ನಾಯಕ ಸಾಕೇತ್ ರಾಜನ್ ಎನ್ಕೌಂಟರ್ ಆದ ಬಳಿಕ ಸುಮಾರು ಒಂದೂವರೆ ದಶಕಗಳ ಕಾಲ ಬಿ.ಜಿ.ಕೃಷ್ಣಮೂರ್ತಿ ನಕ್ಸಲ್ ನಾಯಕತ್ವ ವಹಿಸಿಕೊಂಡಿದ್ದರು. 2014ರ ಬಳಿಕ ನಿರಂತರ ಕಾಂಬಿಂಗ್, ಮಲೆನಾಡಿಗರ ಬೆಂಬಲ ಕಡಿಮೆಯಾದ ಹಿನ್ನೆಲೆ ಬಿ.ಜಿ.ಕೃಷ್ಣಮೂರ್ತಿ ಸೇರಿ ಹಲವಾರು ನಕ್ಸಲರು ಕೇರಳತ್ತ ಮುಖ ಮಾಡಿದ್ದರು. ಕಳೆದ ವರ್ಷ ಸರ್ಕಾರದ ಪ್ಯಾಕೇಜ್ ಅಡಿಯಲ್ಲಿ ಬಿ.ಜಿ.ಕೃಷ್ಣಮೂರ್ತಿ ಪೊಲೀಸರಿಗೆ ಶರಣಾಗಿದ್ದರು. ಅವರು ಶರಣಾದ ಬಳಿಕ ಸುಮಾರು 8 ಜನ ನಕ್ಸಲರು ಕರ್ನಾಟಕದಲ್ಲಿ ಶರಣಾಗತಿಯಾಗಿದ್ದರು. 7 ಜನ ಸಿಎಂ ಮುಂದೆ ಶರಣಾಗಿದ್ದರೆ, ಓರ್ವ ಚಿಕ್ಕಮಗಳೂರು ಎಸ್ಪಿ ಮುಂದೆ ಶರಣಾಗಿದ್ದನು. ಇಂದು ವಿಚಾರಣೆ ಮುಗಿದ ಬಳಿಕ ಕೇರಳ ಪೊಲೀಸರು ಬಿ.ಜಿ.ಕೃಷ್ಣಮೂರ್ತಿಯನ್ನ ಮತ್ತೆ ತಮ್ಮ ವಶಕ್ಕೆ ಪಡೆದು ಕರೆದೊಯ್ದರು.

ಇತ್ತೀಚಿನ ಸುದ್ದಿ

ಜಾಹೀರಾತು