4:21 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಸುರತ್ಕಲ್ ರಾಷ್ಟ್ರಭಕ್ತ ನಾಗರಿಕ  ವೇದಿಕೆಯಿಂದ ಜು.26ರಂದು ಕಾರ್ಗಿಲ್ ವಿಜಯೋತ್ಸವ: ಸೈನಿಕ ಕಲ್ಯಾಣ ನಿಧಿ ವಿತರಣೆ

23/07/2021, 18:04

ಸುರತ್ಕಲ್(reporterkarnataka news); ಸುರತ್ಕಲ್ ರಾಷ್ಟ್ರಭಕ್ತ ನಾಗರಿಕ ವೇದಿಕೆಯ ವತಿಯಿಂದ ಕಳೆದ 7 ವರ್ಷಗಳಿಂದ ನಿರಂತರ ಕಾರ್ಗಿಲ್ ವಿಜಯೋತ್ಸವ ನಡೆಸುತ್ತಿದ್ದು ಜು.26ರಂದು ಇಲ್ಲಿನ ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಈ ಬಾರಿ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮ ನಡೆಯಲಿದೆ.

ಈ ಸಂದರ್ಭದಲ್ಲಿ ಅರ್ಹ 14 ಸೈನಿಕ ಕುಟುಂಬಗಳಿಗೆ ಸೈನಿಕ ಕಲ್ಯಾಣ ನಿಧಿ ವಿತರಣೆ ನಡೆಯಲಿದೆ ಎಂದು ರಾಷ್ಟ್ರಭಕ್ತ ನಾಗರಿಕ ವೇದಿಕೆಯ ಅಧ್ಯಕ್ಷ ಸತ್ಯಜಿತ್ ಸುರತ್ಕಲ್ ತಿಳಿಸಿದರು. 

ಅವರು ಶುಕ್ರವಾರದಂದು ಸುರತ್ಕಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕೊರೊನಾ ಸಮಸ್ಯೆಯಿಂದಾಗಿ ಈ ಬಾರಿ ಶಾಲೆ, ಕಾಲೇಜು ವಿದ್ಯಾರ್ಥಿಗಳಿಗೆ ಸೈನಿಕರಿಗೆ ಹಾಗೂ ಸೈನ್ಯದ ಹೋರಾಟಕ್ಕೆ ಸಂಬಂಧಿಸಿದ ಪುಸ್ತಕಗಳ ಮೇಲೆ ನಡೆಸುತ್ತಿದ್ದ ಭಾಷಣ ಮತ್ತು ಪ್ರಬಂಧ ಸ್ಪರ್ಧೆ ನಡೆಸಲಾಗಿಲ್ಲ‌‌. ಕಾರ್ಯಕ್ರಮದಲ್ಲಿ  ಸೈನಿಕರ ಸ್ಮರಣೆ, ಸನ್ಮಾನ ಮತ್ತು ಸೈನಿಕ ಕುಟುಂಬಗಳಿಗೆ ನೆರವು ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಬಾರಿಯೂ 40 ಸೈನಿಕರಿಗೆ ಗೌರವಾರ್ಪಣೆ, 4 ಸೈನಿಕರಿಗೆ ಸನ್ಮಾನ, ಸೈನಿಕ ನಿಧಿ ಅರ್ಪಣೆ ಕಾರ್ಯಕ್ರಮ ನಡೆಯಲಿದೆ. ಜು. 26ರ ಸಂಜೆ 6 ಗಂಟೆಗೆ ಇಡ್ಯಾ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಐ. ರಮಾನಂದ ಭಟ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು,  ಒ ಎಂ ಪಿ ಎಲ್ ನಿವೃತ್ತ ಕಾರ್ಯ ನಿರ್ವಹಣಾಧಿಕಾರಿ ಎಸ್.ಎಸ್. ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ. ಭೂಸೇನಾ ಯೋಧ ನಾಯಕ್ ಪ್ರವೀಣ್ ಕುಮಾರ್ ಶೆಟ್ಟಿ, ಕಿಶನ್ ಕುಮಾರ್ ರಾವ್, ನೌಕಾಸೇನಾ ಯೋಧ 

ಸಿಪಿಓ ವಿಜಯನ್ ಕೆ., ವಾಯುಸೇನಾ ಯೋಧ ಜೆಡಬ್ಲ್ಯೂಒ ಅರವಿಂದ್ ಭಟ್ ಸನ್ಮಾನ ಸ್ವೀಕರಿಸಲಿದ್ದಾರೆ. ಕಾರ್ಗಿಲ್ ಯುದ್ಧದಲ್ಲಿ ಆಪರೇಷನ್ ವಿಜಯ್ ಮತ್ತು ಆಪರೇಷನ್ ವಿಜಯ್ ಸ್ಟಾರ್ ನಲ್ಲಿ ಮುಂಚೂಣಿಯಲ್ಲಿ ಭಾಗವಹಿಸಿ ಕಾರ್ಗಿಲ್ ವಾರ್ ಮೆಡಲ್ ಪುರಸ್ಕೃತರಾದ ನಾಯಕ್ ಪ್ರವೀಣ್ ಕುಮಾರ್ ಶೆಟ್ಟಿ ಕಾರ್ಗಿಲ್ ಯುದ್ಧದಲ್ಲಿ ತಾವು ಭಾಗವಹಿಸಿದ್ದ

ಕ್ಷಣವನ್ನು ತಿಳಿಸಲಿದ್ದಾರೆ ಎಂದರು‌‌. ಪತ್ರಿಕಾಗೋಷ್ಠಿಯಲ್ಲಿ ಗೌರವಾಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ, ಪ್ರಧಾನ ಕಾರ್ಯದರ್ಶಿ ಮಹೇಶ್ ಮೂರ್ತಿ ಸುರತ್ಕಲ್, ಉಪಾಧ್ಯಕ್ಷರಾದ ಯಶಪಾಲ್ ಸಾಲ್ಯಾನ್ ಚಿತ್ರಾಪುರ, ಲೋಕೇಶ್ ಕೋಡಿಕೆರೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು