8:41 PM Sunday14 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ಸುರತ್ಕಲ್ ಟೋಲ್ ಗೇಟ್ ತೆರವು: ಕೇಸ್ ಹಾಕದೆ ಪ್ರತಿಭಟನಾಕಾರರ ಬಿಡುಗಡೆ; ಶೀಘ್ರದಲ್ಲೇ ಉಪವಾಸ ಸತ್ಯಾಗ್ರಹ?

18/10/2022, 22:53

ಸುರತ್ಕಲ್(reporterKarnataka.com): ಸುರತ್ಕಲ್ ನ ಅನಧಿಕೃತ ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾದ ಪ್ರತಿಭಟನಾಕಾರರ ವಿರುದ್ಧ ಯಾವುದೇ ಪ್ರಕರಣ ದಾಖಲಿಸದೆ, ಬಾಂಡ್ ಬರೆಸದೆ ಬಿಡುಗಡೆಗೊಳಿಸಲಾಗಿದೆ.

ಬಂಧನಕ್ಕೊಳಗಾದ ಹೋರಾಟಗಾರರನ್ನು ಮೊದಲಿಗೆ ಪಾಂಡೇಶ್ವರ ಠಾಣೆಗೆ ಕರೆದುಕೊಂಡು ಹೋಗಲಾಯಿತು. ನಂತರ ಅವರನ್ನು ಸುರತ್ಕಲ್ ನ ಬಂಟರ ಭವನದಲ್ಲಿ ಬಂಧಿಸಿ ಇಡಲಾಯಿತು. ಪ್ರತಿಭಟನಾಕಾರರು ತಮ್ಮನ್ನು ಬಂಧಿಸಿ ಜೈಲಿಗೆ ಹಾಕಿ ಎಂದು ಹೇಳಿದರೂ ಯಾವುದೇ ಕೇಸು ದಾಖಲಿಸದೇ, ಬಾಂಡ್ ತೆಗೆದುಕೊಳ್ಳದೆ ಬಿಡುಗಡೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಬಂಟರ ಭವನ ಹಾಲ್ ನಲ್ಲಿ ಹೋರಾಟಗಾರರು ಸಭೆ ಸೇರಿ ಮುಂದಿನ ನಡೆಯ ಬಗ್ಗೆ ಚರ್ಚೆ ನಡೆಸಿದರು.


ಶೀಘ್ರದಲ್ಲೇ ಉಪವಾಸ ಹೋರಾಟ ನಡೆಸಬೇಕಾಗಿ ಅಭಿಪ್ರಾಯ ವ್ಯಕ್ತವಾಯಿತು.
ನಾಳೆ ಹೋರಾಟ ಸಮಿತಿಯ ಸಭೆ ಕರೆದು ಮುಂದಿನ ಹೋರಾಟದ ದಿನಾಂಕ ಪ್ರಕಟಿಸುವುದಾಗಿ ನಿರ್ಣಯಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು