9:31 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಅನಧಿಕೃತ ಸ್ಪಾ ಸೆಂಟರ್ ಗಳ ಮೇಲೆ ಕಣ್ಗಾವಲು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

24/11/2025, 14:40

ಗಿರಿಧರ್ ಕೊಂಪುಳಿರ ಬೆಂಗಳೂರು

info.reporterkarmataka@gmail.com

ಅನಧಿಕೃತ ಸ್ಪಾಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಸ್ಪಾಗಳ ಮೇಲೆ ಕಣ್ಗಾವಲು ಇಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ವೈದ್ಯಕೀಯ ಸ್ಪಾಗಳನ್ನು ವೈದ್ಯಕೀಯ ಸಂಸ್ಥೆಗಳೆಂದು ಘೋಷಿಸಿ, ಆರೋಗ್ಯ ಇಲಾಖೆಯ ನಿಯಂತ್ರಣಕ್ಕೆ ತರಲಾಗಿದೆ.
‘ಜನರ ಆರೋಗ್ಯ ಕಾಳಜಿಯನ್ನು ಕಡೆಗಣಿಸಿ, ಕೇವಲ ವ್ಯಾಪಾರ ದೃಷ್ಟಿಯಿಂದ ಅನಧಿಕೃತವಾಗಿ ತಲೆಯೆತ್ತಿರುವ ವೈದ್ಯಕೀಯ ಸ್ಪಾಗಳ ಬಗ್ಗೆ ಆರೋಗ್ಯ ಇಲಾಖೆಗೆ ಹಲವಾರು ದೂರುಗಳು ಬಂದಿದ್ದವು ಎಂದು ತಿಳಿಸಿದ್ದಾರೆ.
ಈ ಕ್ಷೇತ್ರದಲ್ಲಿ ಪರಿಣತರಲ್ಲದಿದ್ದರೂ ರಾಸಾಯನಿಕಗಳನ್ನು ಬಳಸಿ ಸೌಂದರ್ಯವರ್ಧಕ ಚಿಕಿತ್ಸೆ ನೀಡುತ್ತಿದ್ದ, ವೃದ್ಧರ ಮೂಳೆ-ಕೀಲು ಸಮಸ್ಯೆಗಳನ್ನೇ ಬಂಡವಾಳ ಮಾಡಿಕೊಂಡು ರೇಡಿಯೇಷನ್ ಥೆರಫಿ ಒದಗಿಸುತ್ತಿದ್ದ ಜಾಲವನ್ನು ಆರೋಗ್ಯ ಇಲಾಖೆ ಪತ್ತೆ ಮಾಡಿ ಕ್ರಮಕೈಗೊಂಡಿದೆ. ಆದರೂ ಹೆಚ್ಚಿನ ಕಣ್ಗಾವಲಿರಿಸುವುದು ಅತ್ಯಗತ್ಯ ಎಂಬುದನ್ನು ಮನಗಂಡು ಈ ಕೇಂದ್ರಗಳನ್ನು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ 2007ರ ಅಡಿಯಲ್ಲಿ ವೈದ್ಯಕೀಯ ಸಂಸ್ಥೆಗಳ ವ್ಯಾಪ್ತಿಗೆ ತರಲಾಗಿದೆ’ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ. 
ಈ ಬಗ್ಗೆ ಹೊರಡಿಸಲಾದ ಆದೇಶಕ್ಕೆ ಸಂಬಂಧಿಸಿದಂತೆ ‘ಎಕ್ಸ್’ ಮಾಡಿರುವ ಅವರು, ‘ಲೇಸರ್ ಚಿಕಿತ್ಸೆಗಳು, ಲಿಪೊಸಕ್ಷನ್, ಕೂದಲು ಕಸಿ, ಐವಿ ಹೈಡ್ರೇಷನ್ ಥೆರಪಿ ಸೇರಿ ಇತರೆ ಸೌಂದರ್ಯವರ್ಧಕ ಚಿಕಿತ್ಸೆಯ ಗುಣಮಟ್ಟದ ಮೇಲೆ ಕಣ್ಗಾವಲಿಡಲು ಕ್ರಮ ಕೈಗೊಳ್ಳಲಾಗಿದೆ. ಅನಧಿಕೃತವಾಗಿ ವೈದ್ಯಕೀಯ ಅಭ್ಯಾಸ ಮಾಡುವ ಮತ್ತು ವೃತ್ತಿಪರರಲ್ಲದವರು ನಡೆಸುತ್ತಿರುವ ಸೌಂದರ್ಯವರ್ಧಕ ಚರ್ಮದ ಕ್ಲಿನಿಕ್‌ಗಳು, ಕೊರಿಯನ್ ಚರ್ಮದ ಆರೈಕೆ ಕೇಂದ್ರಗಳು, ಮಸಾಜ್ ಸೆಂಟರ್‌ಗಳು ಮತ್ತು ಸ್ಪಾಗಳನ್ನು ನಿಯಂತ್ರಿಸಲು ಸಾಧ್ಯವಾಗಲಿದೆ’ ಎಂದು ಹೇಳಿದ್ದಾರೆ.
‘ಅಲೋಪಥಿ ಅಥವಾ ಆಯುರ್ವೇದದಂತಹ ವೈದ್ಯಕೀಯ ಪದವಿ ಪಡೆದ ವೈದ್ಯರು ತಮ್ಮ ಕ್ಷೇತ್ರಕ್ಕೆ ಸಂಬಂಧವಿಲ್ಲದ ಸೌಂದರ್ಯವರ್ಧಕ ಕ್ಲಿನಿಕ್‌ಗಳನ್ನು ಅನಧಿಕೃತವಾಗಿ ನಡೆಸುವುದನ್ನು ನಿಯಂತ್ರಿಸಲು ಈ ಬಗ್ಗೆ ಆದೇಶ ಹೊರಡಿಸಲಾಗಿದ್ದು, ಈ ಕ್ರಮವು ರಾಜ್ಯದಲ್ಲಿ ಆರೋಗ್ಯ ಸೇವೆಗಳ ಗುಣಮಟ್ಟವನ್ನು ಹೆಚ್ಚಿಸಲು ಮತ್ತು ಪಾರದರ್ಶಕತೆ ತರಲು ಸಹಕಾರಿಯಾಗಲಿದೆ’ ಎಂದಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು