12:51 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಸೂರ್ಯನ ರಹಸ್ಯಗಳ ಅಧ್ಯಯನಕ್ಕೆ ಇಸ್ರೋದಿಂದ ಪ್ರೊಬಾ 3 ನೌಕೆ: ಡಿಸೆಂಬರ್ ನಲ್ಲಿ ಶ್ರೀಹರಿಕೋಟಾದಿಂದ ಉಡಾವಣೆ

06/11/2024, 15:24

ಹೊಸದಿಲ್ಲಿ(reporterkarnataka.com): ಭಾರತದ ಬಾಹ್ಯಾಕಾಶ ವಿಜ್ಞಾನಿಗಳು ಸೂರ್ಯನ ರಹಸ್ಯಗಳನ್ನು ಕಂಡು ಹಿಡಿಯಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಯುರೋಪಿಯನ್ ಒಕ್ಕೂಟದ ಪ್ರೊಬಾ 3 ಸೂರ್ಯ ವೀಕ್ಷಣಾ ಬಾಹ್ಯಾಕಾಶ ನೌಕೆಯನ್ನು ಡಿಸೆಂಬರ್​ನಲ್ಲಿ ಉಡಾವಣೆ ಮಾಡಲಿದೆ.
ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ
ಡಾ. ಜಿತೇಂದ್ರ ಸಿಂಗ್ ಈ ಮಹತ್ವದ ವಿಷಯವನ್ನು ಪ್ರಕಟಿಸಿದ್ದಾರೆ.
ಸೂರ್ಯನ ರಹಸ್ಯ ಕಂಡು ಹಿಡಿಯಲು ಭಾರತದ ಬಾಹ್ಯಾಕಾಶ ವಿಜ್ಞಾನಿಗಳು ಯುರೋಪಿನ ವಿಜ್ಞಾನಿಗಳೊಂದಿಗೆ ಕೆಲಸ ಮಾಡಲಿದ್ದಾರೆ. ಸೂರ್ಯನ ಮಸುಕಾದ ಕರೋನಾ ಅಧ್ಯಯನ ನಡೆಯಲಿದೆ. ಸೌರ ಅಂಚಿಗೆ ಹತ್ತಿರವಿರುವ ಸೂರ್ಯನ ಮಸುಕಾದ ಕರೋನಾವನ್ನು ಅಧ್ಯಯನ ಮಾಡುವ ಸಾಮರ್ಥ್ಯ ವನ್ನು ಪ್ರೋಬಾ -3 ಹೊಂದಿದೆ. ಇದನ್ನು ಇಸ್ರೋ ನಿರ್ವಹಿಸುವ ಪಿಎಸ್ಎಲ್​ವಿ-ಎಕ್ಸ್ಎಲ್ ರಾಕೆಟ್ ಮೂಲಕ ಉಡಾವಣೆ ಮಾಡಲಾಗುವುದು ಎಂದು ಅವರು ವಿವರಿಸಿದ್ದಾರೆ.
ಸೂರ್ಯನ ಅಧ್ಯಯನ ನಡೆಸುವ ಯುರೋಪಿಯನ್ ಒಕ್ಕೂಟದ ದೊಡ್ಡ ಆರ್ಬಿಟರ್ ಪ್ರೊಬಾ 3 ಡಿಸೆಂಬರ್​ನಲ್ಲಿ ಶ್ರೀಹರಿಕೋಟಾದಿಂದ ಬಾಹ್ಯಾಕಾಶಕ್ಕೆ ಉಡಾವಣೆ ಮಾಡಲಿದೆ. ಇಸ್ರೋ ಮತ್ತು ಯುರೋಪಿಯನ್ ಒಕ್ಕೂಟದ ಬಾಹ್ಯಾಕಾಶ ವಿಜ್ಞಾನಿಗಳು ಜಂಟಿಯಾಗಿ ಸೂರ್ಯನ ವಾತಾವರಣದ ಅಧ್ಯಯನ ಮಾಡಲಿದ್ದಾರೆ ಎಂದು ಸಿಂಗ್ ಹೇಳಿದ್ದಾರೆ.
ಪ್ರೋಬಾ -3 ಮಿಷನ್ 2 ಉಪಗ್ರಹಗಳನ್ನು ಒಳಗೊಂಡಿದೆ. ಇದು ಸೌರ ಕರೋನಾಗ್ರಾಫ್ ಎಂದು ಕರೆಯಲ್ಪಡುವ 144 ಮೀಟರ್ ಉದ್ದದ ಸಾಧನವಾಗಿ ಕೆಲಸ ಮಾಡುತ್ತದೆ. ಸೂರ್ಯನ ಪ್ರಖರ ಬೆಳಕಿನಿಂದಾಗಿ ವೀಕ್ಷಿಸಲು ಕಷ್ಟಕರವಾದ ಸೂರ್ಯನ ಕರೋನಾವನ್ನು ಅಧ್ಯಯನ ಮಾಡಲು ಇದು ವಿಜ್ಞಾನಿಗಳಿಗೆ ಸಹಾಯ ಮಾಡುತ್ತದೆ. ವಿಶ್ವದ ಮೊದಲ ಈ ನಿಖರ ಫ್ಲೈಯಿಂಗ್ ಮಿಷನ್ ವ್ಯವಸ್ಥೆಯು ವಿಜ್ಞಾನಿಗಳಿಗೆ ಸೂರ್ಯನ ಅಸ್ಪಷ್ಟ ಕರೋನಾವನ್ನು ಅಭೂತಪೂರ್ವ ಸಾಮೀಪ್ಯ ಮತ್ತು ಸಮಗ್ರವಾಗಿ ಅಧ್ಯಯನ ಮಾಡಲು ಅನುವು ಮಾಡಿಕೊಡುತ್ತದೆ ಎಂದು ಸಚಿವರು ನುಡಿದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು