2:28 AM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಜೋಕಟ್ಟೆ: ಬಾಡಿಗೆ ಮನೆಯಲ್ಲಿ ಕೊರಳಿಗೆ ಬಟ್ಟೆ ಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತ ಬಾಲಕಿಯ ಮೃತದೇಹ ಪತ್ತೆ; ಕೊಲೆ ಶಂಕೆ

06/08/2024, 19:17

ಮಂಗಳೂರು(reporterkarnataka.com): ಬಜಪೆ ಸಮೀಪದ ಜೋಕಟ್ಟೆಯ ಬಾಡಿಗೆ ಮನೆಯೊಂದರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೃತದೇಹ ಪತ್ತೆಯಾಗಿದ್ದು, ಕುತ್ತಿಗೆಗೆ ಬಟ್ಟೆ ಬಿಗಿದು ಯಾರೋ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.


ಬೆಳಗಾವಿ ಮೂಲದ ಹನುಮಂತಪ್ಪ ಎಂಬವರ ಮನೆಗೆ 4 ದಿನಗಳ ಹಿಂದೆ ತನ್ನ ತಮ್ಮನ ಮಗಳಾದ 13ರ ಹರೆಯದ ಬಾಲಕಿಯು ಕೈ ನೋವಿನ ಚಿಕಿತ್ಸೆಗಾಗಿ ಆಗಮಿಸಿ ವಾಸ್ತವ್ಯ ಹೊಂದಿದ್ದಳು. ಇಂದು ಬೆಳಗ್ಗೆ ಹನುಮಂತನ ಮನೆಯವರೆಲ್ಲ ಕೆಲಸಕ್ಕೆ ಹೋದಾಗ ಬಾಲಕಿಯ ತಾಯಿ ಪಕ್ಕದ ಮನೆಯವರಿಗೆ ಕರೆ ಮಾಡಿ ಬಾಲಕಿಗೆ ಫೋನ್ ಕೊಡಲು ತಿಳಿಸಿದ್ದರು. ಪಕ್ಕದ ಮನೆಯವರು ಫೋನ್ ಕೊಡಲು ಬಾಲಕಿ ಇದ್ದ ಬಾಡಿಗೆ ಮನೆಗೆ ಹೋದಾಗ ಬಾಲಕಿಯ ಕುತ್ತಿಗೆಗೆ ಬಟ್ಟೆಯಿಂದ ಬಿಗಿದು ಕೊಲೆ ಮಾಡಿರುವ ಹಾಗೆ ಕಾಣಿಸುತ್ತಿದೆ ಎಂದು ಬಾಲಕಿಯ ತಾಯಿಗೆ ತಿಳಿಸಿದರು. ತಕ್ಷಣ ಮೃತ ಬಾಲಕಿಯ ತಾಯಿ ಹನುಮಂತ ಅವರಿಗೆ ಫೋನ್ ಮಾಡಿ ಬಾಡಿಗೆ ಮನೆಗೆ ಹೋಗುವಂತೆ ಹೇಳಿದರು. ಹನುಮಂತ ಅವರು ಬಾಡಿಗೆ ಮನೆಗೆ ಬಂದು ನೋಡಿ ಪೊಲೀಸರಿಗೆ ದೂರು ನೀಡಿದರು. ಪಣಂಬೂರು ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್, ಡಿಸಿಪಿ ದಿನೇಶ್ ಕುಮಾರ್ ಮುಂತಾದ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು