ಇತ್ತೀಚಿನ ಸುದ್ದಿ
ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು
16/06/2026, 22:24
ಬೆಂಗಳೂರು(reporterkarnataka.com): ಬೆಂಗಳೂರಿನ ಮಡಿವಾಳದಲ್ಲಿ 2008ರಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಹಾಗೂ ಶಂಕಿತ ಉಗ್ರ ಅಬ್ದುಲ್ ಖಾದರ್ (60) ಅನಾರೋಗ್ಯದಿಂದ ಜೈಲಿನಲ್ಲಿ ನಿಧನನಾಗಿದ್ದಾನೆ.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ 2010ರಿಂದ ನ್ಯಾಯಾಂಗ ಬಂಧನದಲ್ಲಿದ್ದ ಅಬ್ದುಲ್ ಖಾದರ್ಗೆ ಗುರುವಾರ ಏಕಾಏಕಿ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದು,ತಕ್ಷಣವೇ ಜೈಲು ಅಧಿಕಾರಿಗಳು ಅವರನ್ನು ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದರು. ಆದರೆ ಮಾರ್ಗಮಧ್ಯೆಯೇ ಹೃದಯಾಘಾತ ಸಂಭವಿಸಿ ಶಂಕಿತ ಉಗ್ರ ಕೊನೆಯುಸಿರೆಳೆದಿದ್ದಾನೆ ಎಂದು ಮೂಲಗಳು ತಿಳಿಸಿವೆ, ಹಠಾತ್ ಸಾವಿನ ಹಿಂದೆ ಹಲವು ಅನುಮಾನಗಳು ಹುಟ್ಟಿಕೊಂಡಿವೆ.













