6:32 AM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಸುತ್ತೂರಿನಲ್ಲಿ 53ನೇ ಜಾನುವಾರು ಜಾತ್ರೆ, ಚಿತ್ರಕಲಾ ಮತ್ತು ಗಾಳಿಪಟ ಸ್ಪರ್ಧೆ ಉದ್ಘಾಟನೆ

09/02/2024, 19:26

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಸಂಜೆ 53ನೇಯ ಜಾನುವಾರು ಜಾತ್ರೆ, ಚಿತ್ರಕಲಾ ಮತ್ತು ಗಾಳಿಪಟ ಸ್ಪರ್ಧೆ ಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.


ಸುತ್ತೂರು ಶ್ರೀಗಳಾದ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಮಾಜಿ ಸಚಿವ ಹಾಗೂ ಶಾಸಕ ತನ್ವೀರ್ ಸೇಟ್ ಟೇಪ್ ಕತ್ತರಿಸುವ ಮೂಲಕ ಜಾನುವಾರು ಜಾತ್ರೆಯನ್ನು ಉದ್ಘಾಟಿಸಿದರು.
ದನಗಳ ಪರಿಷೆಯಲ್ಲಿ ಶ್ರೀಗಳು ಸೇರಿದಂತೆ ಗಣ್ಯರು ಉತ್ತಮ ರಾಸುಗಳು ಹಾಗೂ ಜೋಡಿಗಳನ್ನು ನೋಡಿ ಖುಷಿಪಟ್ಟು ರಾಸುಗಳ ಮಾಲೀಕರಿಗೆ ಮಾಲಾರ್ಪಣೆ ಮಾಡಿ ಅಭಿನಂದಿಸಿದರು.
ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಚಿತ್ರ ಬಿಡಿಸುವ ಹಾಗೂ ಗಾಳಿಪಟ ಸ್ಪರ್ಧೆಗೆ ಶಾಸಕ ತನ್ವೀರ್ ಸೇಠ್ ಸೇರಿದಂತೆ ಮತ್ತಿತರ ಗಣ್ಯರು ಚಾಲನೆ ನೀಡಿದರು.
ನಂತರ ಶಾಸಕರುಗಳಾದ ತನ್ವೀರ್ ಸೇಠ್ ಹಾಗೂ ಎ ಆರ್ ಕೃಷ್ಣಮೂರ್ತಿ ಮಾತನಾಡಿ ತಮ್ಮ ಮಾತಿನುದ್ದಕ್ಕೂ ಶ್ರೀ ಕ್ಷೇತ್ರದ ಮಹಿಮೆ ಜಾತ್ರೆಯಲ್ಲಿ ಹಮ್ಮಿಕೊಂಡಿರುವ ವೈವಿಧ್ಯಮಯ ಕಾರ್ಯಕ್ರಮಗಳು ಹಾಗೂ ಪರಮ ಪೂಜ್ಯರುಗಳಾದ ಡಾ. ಶ್ರೀ ರಾಜೇಂದ್ರ ಮಹಾಸ್ವಾಮಿಗಳು ಹಾಗೂ ಶ್ರೀ ಶಿವರಾತ್ರಿದೇಶಿ ಕೇಂದ್ರ ಮಹಾಸ್ವಾಮಿಗಳವರ ದೂರ ದೃಷ್ಟಿಯಿಂದ ಇಂದು ನಮ್ಮ ಕರ್ನಾಟಕದಲ್ಲೇ ಅಲ್ಲ ಇಡೀ ವಿಶ್ವದಲ್ಲೇ ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮಾಡಿಸಿದ್ದಾರೆ. ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಯಲ್ಲಿ ರೈತರ ಬೆಳೆಗಳಿಗೆ ಹಾಗೂ ಕುಡಿಯುವ ನೀರಿಗಾಗಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳನ್ನು ಸರ್ಕಾರ ಗಳು ಮಾಡಿದ್ದರೆ ಅದಕ್ಕೆ ಶ್ರೀ ಶಿವರಾತ್ರಿ ದೇಶಿ ಕೇಂದ್ರ ಮಹಾಸ್ವಾಮಿಗಳೇ ಕಾರಣ ಎಂದು ಶ್ರೀಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು
ಕಾರ್ಯಕ್ರಮದಲ್ಲಿ ನಿವೃತ್ತ ಜಿಲ್ಲಾಧಿಕಾರಿ ಜಿಎನ್ ಶಿವಮೂರ್ತಿ, ಕರ್ನಾಟಕ ಮಾಹಿತಿ ಆಯೋಗದ ಆಯುಕ್ತರಾದ ಡಿ ಎಸ್ ಬಿ ಬೊಮ್ಮನಳ್ಳಿ, ಹುಬ್ಬಳ್ಳಿಯ ಶ್ರೀ ಶಾಂತಾಶ್ರಮ ಮಠದ ಶ್ರೀ ಅಭಿನವ ಸಿದ್ದಾರೂಢ ಸ್ವಾಮಿಗಳು, ಬೆಳಗಾವಿ ಜಿಲ್ಲೆಯ ಶ್ರೀ ಸಿದ್ದಲಿಂಗ ಕೈವಲ್ಯಾಶ್ರಮ ಮಠದ ನಿಜಗುಣ ದೇವರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು