4:59 AM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಸುತ್ತೂರಿನಲ್ಲಿ 53ನೇ ಜಾನುವಾರು ಜಾತ್ರೆ, ಚಿತ್ರಕಲಾ ಮತ್ತು ಗಾಳಿಪಟ ಸ್ಪರ್ಧೆ ಉದ್ಘಾಟನೆ

09/02/2024, 19:26

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಸಂಜೆ 53ನೇಯ ಜಾನುವಾರು ಜಾತ್ರೆ, ಚಿತ್ರಕಲಾ ಮತ್ತು ಗಾಳಿಪಟ ಸ್ಪರ್ಧೆ ಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.


ಸುತ್ತೂರು ಶ್ರೀಗಳಾದ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಮಾಜಿ ಸಚಿವ ಹಾಗೂ ಶಾಸಕ ತನ್ವೀರ್ ಸೇಟ್ ಟೇಪ್ ಕತ್ತರಿಸುವ ಮೂಲಕ ಜಾನುವಾರು ಜಾತ್ರೆಯನ್ನು ಉದ್ಘಾಟಿಸಿದರು.
ದನಗಳ ಪರಿಷೆಯಲ್ಲಿ ಶ್ರೀಗಳು ಸೇರಿದಂತೆ ಗಣ್ಯರು ಉತ್ತಮ ರಾಸುಗಳು ಹಾಗೂ ಜೋಡಿಗಳನ್ನು ನೋಡಿ ಖುಷಿಪಟ್ಟು ರಾಸುಗಳ ಮಾಲೀಕರಿಗೆ ಮಾಲಾರ್ಪಣೆ ಮಾಡಿ ಅಭಿನಂದಿಸಿದರು.
ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಚಿತ್ರ ಬಿಡಿಸುವ ಹಾಗೂ ಗಾಳಿಪಟ ಸ್ಪರ್ಧೆಗೆ ಶಾಸಕ ತನ್ವೀರ್ ಸೇಠ್ ಸೇರಿದಂತೆ ಮತ್ತಿತರ ಗಣ್ಯರು ಚಾಲನೆ ನೀಡಿದರು.
ನಂತರ ಶಾಸಕರುಗಳಾದ ತನ್ವೀರ್ ಸೇಠ್ ಹಾಗೂ ಎ ಆರ್ ಕೃಷ್ಣಮೂರ್ತಿ ಮಾತನಾಡಿ ತಮ್ಮ ಮಾತಿನುದ್ದಕ್ಕೂ ಶ್ರೀ ಕ್ಷೇತ್ರದ ಮಹಿಮೆ ಜಾತ್ರೆಯಲ್ಲಿ ಹಮ್ಮಿಕೊಂಡಿರುವ ವೈವಿಧ್ಯಮಯ ಕಾರ್ಯಕ್ರಮಗಳು ಹಾಗೂ ಪರಮ ಪೂಜ್ಯರುಗಳಾದ ಡಾ. ಶ್ರೀ ರಾಜೇಂದ್ರ ಮಹಾಸ್ವಾಮಿಗಳು ಹಾಗೂ ಶ್ರೀ ಶಿವರಾತ್ರಿದೇಶಿ ಕೇಂದ್ರ ಮಹಾಸ್ವಾಮಿಗಳವರ ದೂರ ದೃಷ್ಟಿಯಿಂದ ಇಂದು ನಮ್ಮ ಕರ್ನಾಟಕದಲ್ಲೇ ಅಲ್ಲ ಇಡೀ ವಿಶ್ವದಲ್ಲೇ ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮಾಡಿಸಿದ್ದಾರೆ. ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಯಲ್ಲಿ ರೈತರ ಬೆಳೆಗಳಿಗೆ ಹಾಗೂ ಕುಡಿಯುವ ನೀರಿಗಾಗಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳನ್ನು ಸರ್ಕಾರ ಗಳು ಮಾಡಿದ್ದರೆ ಅದಕ್ಕೆ ಶ್ರೀ ಶಿವರಾತ್ರಿ ದೇಶಿ ಕೇಂದ್ರ ಮಹಾಸ್ವಾಮಿಗಳೇ ಕಾರಣ ಎಂದು ಶ್ರೀಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು
ಕಾರ್ಯಕ್ರಮದಲ್ಲಿ ನಿವೃತ್ತ ಜಿಲ್ಲಾಧಿಕಾರಿ ಜಿಎನ್ ಶಿವಮೂರ್ತಿ, ಕರ್ನಾಟಕ ಮಾಹಿತಿ ಆಯೋಗದ ಆಯುಕ್ತರಾದ ಡಿ ಎಸ್ ಬಿ ಬೊಮ್ಮನಳ್ಳಿ, ಹುಬ್ಬಳ್ಳಿಯ ಶ್ರೀ ಶಾಂತಾಶ್ರಮ ಮಠದ ಶ್ರೀ ಅಭಿನವ ಸಿದ್ದಾರೂಢ ಸ್ವಾಮಿಗಳು, ಬೆಳಗಾವಿ ಜಿಲ್ಲೆಯ ಶ್ರೀ ಸಿದ್ದಲಿಂಗ ಕೈವಲ್ಯಾಶ್ರಮ ಮಠದ ನಿಜಗುಣ ದೇವರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು