11:36 AM Thursday7 - August 2025
ಬ್ರೇಕಿಂಗ್ ನ್ಯೂಸ್
ಮುತ್ತಾಲಿಕ್ ಜತೆ ವೇದಿಕೆ ಹಂಚಿಕೊಂಡ ಕೈ ಶಾಸಕಿ: ನಯನಾ ಮೋಟಮ್ಮ ವಿರುದ್ಧ ಪ್ರಾಯಶ್ಚಿತ್ತ… ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ

ಇತ್ತೀಚಿನ ಸುದ್ದಿ

ಸುತ್ತೂರು ಜಾತ್ರಾ ಮಹೋತ್ಸವದ 2ನೇ ದಿ‌ನ ಬೃಹತ್ ಸಾಮೂಹಿಕ ವಿವಾಹ: 155 ಜೋಡಿಗಳಿಗೆ ಕಂಕಣಭಾಗ್ಯ

27/01/2025, 23:12

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಸುತ್ತೂರು ಜಾತ್ರಾ ಮಹೋತ್ಸವದ ಎರಡನೇ ದಿ‌ನವಾದ ಇಂದು ಬೃಹತ್ ಸಾಮೂಹಿಕ ವಿವಾಹ ಸಮಾರಂಭ ನಡೆಯಿತು.
ಸಾಮೂಹಿಕ ವಿವಾಹದಲ್ಲಿ ಜಾತಿ-ಮತ ಭೇದವಿಲ್ಲದೆ ಸರ್ವ ಧರ್ಮಗಳ ಎಲ್ಲರಿಗೂ ಮುಕ್ತ ಅವಕಾಶ ಕಲ್ಪಿಸಲಾಗಿತ್ತು. ಅಂತರ್ಜಾತಿಗಳ, ವಿಶೇಷ ಚೇತನರು ಹಾಗೂ ಹೊರ ರಾಜ್ಯಗಳ ವಧು-ವರರು ಪಾಲ್ಗೊಂಡರು.


ಇಂದು ನಡೆದ ಸಾಮೂಹಿಕ ವಿವಾಹದಲ್ಲಿ ವೀರಶೈವ ಲಿಂಗಾಯತ ಸಮುದಾಯದ 3 ಜೋಡಿ, ಪರಿಶಿಷ್ಟ ಜಾತಿಯ 84 ಜೋಡಿ, ಪರಿಶಿಷ್ಟ ಪಂಗಡದ 22 ಜೋಡಿ, ಹಿಂದುಳಿದ ವರ್ಗದ 22 ಜೋಡಿ, ಅಂತರಜಾತಿಯ 23 ಜೋಡಿ, ಅಂತರಧರ್ಮದ 1 ಒಂದು ಜೋಡಿ ಸೇರಿದಂತೆ ಒಟ್ಟು 155 ಜೋಡಿ ಸತಿ-ಪತಿಗಳಾಗುವ ಮೂಲಕ ದಾಂಪತ್ಯ ಜೀವನ ಪ್ರವೇಶಿಸಿದವು. ಈ ಪೈಕಿ 3 ವಿಶೇಷ ಚೇತನರ ಜೋಡಿಗಳಿದ್ದರೆ, ಒಂದು ಜೋಡಿ ಮರು ಮದುವೆಯಾಗಿದೆ. ಒಟ್ಟು 155 ಜೋಡಿಗಳಲ್ಲಿ ಮೈಸೂರು ಜಿಲ್ಲೆಗೆ ಸೇರಿದ 79 ಜೋಡಿಗಳಿದ್ದರೆ, ಚಾಮರಾಜನಗರ ಜಿಲ್ಲೆಯ 43 ಜೋಡಿ, ಮಂಡ್ಯ ಜಿಲ್ಲೆಯ 6, ಬೆಂಗಳೂರಿನ 1, ರಾಮನಗರ ಜಿಲ್ಲೆಯ 4, ಚಿಕ್ಕಬಳ್ಳಾಪುರ ಜಿಲ್ಲೆಯ 1, ಗದಗ ಜಿಲ್ಲೆಯ 1, ಹಾವೇರಿ ಜಿಲ್ಲೆಯ 2, ಹಾಸನದ 1, ನೆರೆಯ ತಮಿಳುನಾಡಿನ ಈರೋಡ್ ಜಿಲ್ಲೆಯ 15, ಕೊಯಮತ್ತೂರಿನ 1, ನೀಲಗಿರಿಯ1 ಜೋಡಿಗಳು ಸೇರಿವೆ. ಈ ಮೊದಲೇ ವಿವಾಹಗಳ‌ ನೋಂದಾವಣಿಯಾಗಿದ್ದು, ವಧುವಿಗೆ ಸೀರೆ, ಕುಪ್ಪಸ, ಮಾಂಗಲ್ಯ ಹಾಗು ಕಾಲುಂಗುರಗಳನ್ನು, ವರನಿಗೆ ಪಂಚೆ, ವಲ್ಲಿ, ಷರ್ಟ್ ಗಳನ್ನು ನೀಡಲಾಯಿತು. ಸಾಮೂಹಿಕ ವಿವಾಹದಲ್ಲಿ ಮದುವೆಯಾದ ವಧು-ವರರು ವಿವಾಹದ ದೃಢೀಕರಣ ಪತ್ರ ಹಾಗೂ ನೋಂದಣಿ ಪತ್ರಗಳನ್ನು ಸಲ್ಲಿಸಿ, ಸರ್ಕಾರ ನೀಡುವ ಪ್ರೋತ್ಸಾಹ ಧನವನ್ನು ಪಡೆದುಕೊಳ್ಳಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು