9:35 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಸುತ್ತೂರು ಜಾತ್ರೆ: ಅದ್ದೂರಿಯಾಗಿ ನಡೆದ ಸಾಮೂಹಿಕ ವಿವಾಹ; ದಾಂಪತ್ಯ ಜೀವನಕ್ಕೆ ಕಾಲಿಟ್ಟ 120 ಜೋಡಿಗಳು

07/02/2024, 17:55

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಹತ್ತೂರ ಜಾತ್ರೆಗೆ ಸುತ್ತೂರ ಜಾತ್ರೆ ಮೇಲು ಎಂಬಂತೆ ಇಂದು ನಡೆದ ಎರಡನೇ ದಿನದ ಸುತ್ತೂರು ಜಾತ್ರೆಯಲ್ಲಿ ನಡೆದ ಸರಳ ಸಾಮೂಹಿಕ ವಿವಾಹದಲ್ಲಿ ಸುಮಾರು 120 ಜೋಡಿಗಳು ಗೃಹಸ್ಥಾಶ್ರಮಕ್ಕೆ ಕಾಲಿಟ್ಟರು.
ಸುತ್ತೂರು ಶ್ರೀ ಕ್ಷೇತ್ರದ ಪರಮಪೂಜ್ಯಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳ ಹಾಗೂ ವಿವಿಧ ಮಠಾಧೀಶರ ದಿವ್ಯಸಾನಿಧ್ಯದಲ್ಲಿ ನಡೆದ ಸಾಮೂಹಿಕ ವಿವಾಹದಲ್ಲಿ 120 ಜೋಡಿಗಳು ಸತಿಪತಿಗಳಾದರು.
ಕರ್ನಾಟಕ ಹಾಗೂ ತಮಿಳುನಾಡು ಸೇರಿದಂತೆ ವಿವಿಧಡೆಯಿಂದ ಬಂದ 120 ಜೋಡಿಗಳು ಸಾಮೂಹಿಕ ವಿವಾಹದಲ್ಲಿ ಪಾಲ್ಗೊಂಡಿದರು.
120 ಜೋಡಿಗಳ ಪೈಕಿ ನಾಲ್ಕು ವೀರಶೈವ ಲಿಂಗಾಯತ, 61 ಪರಿಶಿಷ್ಟ ಜಾತಿ, 26 ಪರಿಶಿಷ್ಟ ಪಂಗಡ, 18 ಹಿಂದುಳಿದ ವರ್ಗ 11 ಅಂತರ್ಜಾತಿ ಜೋಡಿಗಳು ವಿವಾಹದಲ್ಲಿ ಪಾಲ್ಗೊಂಡಿದ್ದರು.
ಅದರಲ್ಲಿ ತಮಿಳುನಾಡಿನ 23 ಜೋಡಿಗಳು, ನಾಲ್ಕು ಜೋಡಿ ವಿಶೇಷ ಚೇತನರು, ಮತ್ತು ಒಂದು ಮರು ಮದುವೆಯ ಜೋಡಿಗಳು ಎಲ್ಲರ ಗಮನ ಸೆಳೆದವು.
ವೇದಿಕೆ ಮೇಲಿನ ಎಲ್ಲಾ ವರರಿಗೆ ಶ್ರೀಗಳು ಸೇರಿದಂತೆ ಹಲವು ಗಣ್ಯರು, ಮಾಂಗಲ್ಯ ಮತ್ತು ಕಾಲುಂಗುರ ವಿತರಣೆ ಮಾಡಿದರು. ನಂತರ ಗಟ್ಟಿಮೇಳ ಹಾಗೂ ಮಂತ್ರ ಘೋಷಗಳೊಂದಿಗೆ ಮಾಂಗಲ್ಯ ಧಾರಣೆ ನಡೆಯಿತು.
ಈ ಸಂದರ್ಭ ಶ್ರೀಗಳು ಸೇರಿದಂತೆ ವೇದಿಕೆ ಮೇಲಿನ ಗಣ್ಯರು ಎಲ್ಲಾ ವಧು ವರರಿಗೆ ಮಂತ್ರಾಕ್ಷತೆ ಹಾಕುವ ಮೂಲಕ ಶುಭ ಹಾರೈಸಿದರು.
ನೂತನ ಸತಿಪತಿಗಳಾಗಿ ಸಹಬಾಳ್ವೆ ಹಾಗೂ ಉತ್ತಮ ಜೀವನ ರೂಪಿಸಿಕೊಳ್ಳುವುದಾಗಿ ಪ್ರತಿಜ್ಞಾವಿಧಿ ಸಲ್ಲಿಸಿದರು.
ಇದಕ್ಕೂ ಮುನ್ನ 120 ಜೋಡಿಗಳನ್ನು ಆದಿ ಜಗದ್ಗುರು ಶ್ರೀ ಶಿವರಾತ್ರಿಶ್ವರ ಶಿವಯೋಗಿಗಳವರ ಗದ್ದುಗೆಯಿಂದ ಹಲವು ಜಾನಪದ ಕಲಾತಂಡಗಳೊಂದಿಗೆ ಮದುವೆ ಮಂಟಪದ ವೇದಿಕೆಗೆ ಕರೆತರಲಾಯಿತು.


ವಧು ವರರಿಗೆ ಶ್ರೀಮಠದ ವತಿಯಿಂದ ತಾಳಿ ಬಟ್ಟೆ ಸೀರೆ ರವಿಕೆ ಗಳನ್ನು ಉಚಿತವಾಗಿ ನೀಡಲಾಗಿತ್ತು. ವಿವಾಹ ಮಹೋತ್ಸವಕ್ಕೆ ಬಂದಿದ್ದ ವಧು-ವರರು ಮತ್ತು ಅವರ ಜೊತೆ ಬಂದಿದ್ದ ಸಂಬಂಧಿಕರಿಗೆ ಊಟ ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.
ಅಕ್ಕ ಯುಎಸ್ ಎ ಅಧ್ಯಕ್ಷರಾದ ಅಕ್ಕ ಅಮರ್ ನಾಥ್ ಗೌಡ, ಹಾಗೂ ಮತ್ತಿತರ ಗಣ್ಯರು ಮಾತನಾಡಿ ಶ್ರೀ ಕ್ಷೇತ್ರದಲ್ಲಿ ನಡೆಯುವ ಜಾತ್ರೆ ಯು ವೈಶಿಷ್ಟ್ಯತೆ ಹಾಗೂ ಶ್ರೀಗಳವರ ಕಾರ್ಯ ವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸಾಮೂಹಿಕ ವಿವಾಹದ ವೈಶಿಷ್ಟತೆಯ ಬಗ್ಗೆ ತಿಳಿಸಿದರು.
ಕಾಗಿನೆಲೆ ಶ್ರೀ ಕನಕ ಗುರು ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಹಲವು ಹರಗುರು ಚರಮೂರ್ತಿಗಳು ಸೇರಿದಂತೆ ಉದ್ಯಮಿ, ಮೂಲ್ ಚಂದ್ ನಹರ್, ಯುಎಸ್ಎ ಮೆರಿಲ್ಯಾಂಡ್ ವೀರಪ್ಪನ್, ತಿರುವನಂತಪುರ ಶಾಂತಗಿರಿ ಆಶ್ರಮ ದ ಪ್ರಧಾನ ಕಾರ್ಯದರ್ಶಿಗಳಾದ ಸ್ವಾಮಿ ಗುರು ರತ್ನಂ ಜ್ಞಾನಪಸ್ವಿ ಚುಂಚನಹಳ್ಳಿ ಮಠಾಧ್ಯಕ್ಷರಾದ ಶ್ರೀ ಚನ್ನಬಸವ ಸ್ವಾಮೀಜಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು