9:36 PM Thursday19 - September 2024
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ ಮಂಗಳೂರು: ಸಾಕು ನಾಯಿಯ ತ್ಯಾಜ್ಯ ಸಂಗ್ರಹಿಸುವ ವಾಹನಕ್ಕೆ ನೀಡಿದ ಪಾಪಿಗಳು; ವೀಡಿಯೊ ವೈರಲ್… ವೈದ್ಯರ ಮೇಲೆ ಹಲ್ಲೆ ಪ್ರಕರಣ: ಚಿಕ್ಕಮಗಳೂರು ನಗರ ಠಾಣೆ ಎದುರು ಆರೋಗ್ಯ ಸಿಬ್ಬಂದಿಗಳ…

ಇತ್ತೀಚಿನ ಸುದ್ದಿ

ಸುವರ್ಣ ಕರ್ನಾಟಕ ಸಂಭ್ರಮ 50: ಮಂಗಳೂರು ಶ್ರೀ ರಾಮಕೃಷ್ಣ ಪಿಯು ಕಾಲೇಜಿನಲ್ಲಿ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆ

19/09/2024, 18:58

ಚಿತ್ರ/ವರದಿ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com):ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಂಗಳೂರು ಶ್ರೀ ರಾಮಕೃಷ್ಣ ಪದವಿಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ‘ಸುವರ್ಣ ಕರ್ನಾಟಕ ಸಂಭ್ರಮ 50’, “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ “ಶೀರ್ಷಿಕೆಯಡಿಯಲ್ಲಿ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಮೂಲ್ಕಿ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಾಸುದೇವ ಬೆಳ್ಳೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ, ಕರ್ನಾಟಕ ಎನ್ನುದು ಬಹು ಸಂಸ್ಕೃತಿಯುಳ್ಳ ರಾಜ್ಯ. ಕನ್ನಡ ಭಾಷೆ ನಮ್ಮ ಉಸಿರಾಗಬೇಕು.
ಕನ್ನಡ ಅನ್ನುವುದು ಬರೇ ಭಾಷೆ ಅಲ್ಲ, ಕನ್ನಡ ಅನ್ನುವುದು ಸಮಾಜ. ಕರ್ನಾಟಕ ಎಂಬ ಹೆಸರಾಗಿ 50 ವರ್ಷವಾಗಿದೆ. ಆ ನಿಟ್ಟಿನಲ್ಲಿ ಸರ್ಕಾರವು ವಿದ್ಯಾರ್ಥಿಗಳಲ್ಲಿ ಭಾಷೆಯ ಅಭಿಮಾನವನ್ನು ಮೂಡಿಸುವವುದಕ್ಕಾಗಿ,ಕನ್ನಡವನ್ನು ಹೇಗೆ ಉಳಿಸಿ ಬೆಳೆಸಬಹುದು, ಕರ್ನಾಟಕಕ್ಕೆ ನಮ್ಮ ಕರಾವಳಿಯ ಏನು ಎನ್ನುದರ ಬಗ್ಗೆ ವಿದ್ಯಾರ್ಥಿಗಳು ತಿಳಿಕೊಳ್ಳಬೇಕು ಎನ್ನುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ಅಧ್ಯಕ್ಷತೆಯನ್ನು ರಾಮಕೃಷ್ಣ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಯಶೋಧಾ ಯು. ಶೆಟ್ಟಿ ವಹಿದ್ದರು.


ಕಾಲೇಜಿನ ಉಪ ಪ್ರಾಂಶುಪಾಲ ಧನರಾಜ್ ಚಿಪ್ಪಾರ್, ಕನ್ನಡ ಉಪನ್ಯಾಸಕಿ ರುಕ್ಮಿಣಿ, ರಾಮಕೃಷ್ಣ ಹೈಸ್ಕೂಲ್ ಉಪ ಪ್ರಾಂಶುಪಾಲೆ ರೂಪಾ, ಪದವಿ ಕಾಲೇಜಿನ ಉಪನ್ಯಾಸಕ ನಟೇಶ್ ಆಳ್ವ ಮತ್ತಿರರು ಉಪಸ್ಥಿತರಿದ್ದರು.
ಸ್ಪರ್ಧೆಯಲ್ಲಿ 9 ತಾಲೂಕಿನ ವಿಜೇತ 27 ಸ್ಪರ್ಧಾಳುಗಳು ಭಾಗವಹಿಸಿದ್ದರು.
ಉಪನ್ಯಾಸಕರುಗಳಾದ ರುಕ್ಮಿಣಿ,ನಟೇಶ್ ಆಳ್ವ, ರೂಪ ತೀರ್ಪುಗಾರಾಗಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು